<p><strong>ಡೆಹ್ರಾಡೂನ್:</strong> ಸರ್ಕಾರಿ ಹುದ್ದೆಗಳಲ್ಲಿ ಅಗ್ನಿವೀರರಿಗೆ ಶೇ 10ರಷ್ಟು ಸಮತಲ ಮೀಸಲಾತಿ ನೀಡಲು ಸಿದ್ದತೆ ನಡೆಸುತ್ತಿರುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಹೇಳಿದ್ದಾರೆ. </p>.<p>ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಕುಟುಂಬವನ್ನು ಗೌರವಿಸಲು ಆಯೋಜಿಸಿದ್ದ ಸಭೆಯಲ್ಲಿ ಧಾಮಿ ಪಾಲ್ಗೊಂಡಿದ್ದರು. ಈ ವೇಳೆ ಮೀಸಲಾತಿ ಕುರಿತು ಪ್ರಕಟಿಸಿದ್ದಾರೆ. </p>.<p class="title">‘ರಾಜ್ಯ ಸಾರಿಗೆ, ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಶೇ 10ರಷ್ಟು ಸಮತಲ ಮೀಸಲಾತಿಯನ್ನು ಅಗ್ನಿವೀರರಿಗೆ ನೀಡಲು ಯೋಜಿಸಲಾಗಿದೆ. ಈ ಸಂಬಂಧಿಸಿದ ಪ್ರಸ್ತಾವವನ್ನು ಶೀಘ್ರವೇ ರಾಜ್ಯ ಸಂಪುಟದ ಅನುಮೋದನೆಗೆ ಮಂಡಿಸಲಾಗುವುದು. ಅಗ್ನಿಪಥ ಯೋಜನೆ ಅನ್ವಯ ನಾಲ್ಕು ವರ್ಷಗಳ ಸೇವೆ ಪೂರೈಸಿದ ಅಗ್ನಿವೀರರು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ’ ಎಂದೂ ಧಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಸರ್ಕಾರಿ ಹುದ್ದೆಗಳಲ್ಲಿ ಅಗ್ನಿವೀರರಿಗೆ ಶೇ 10ರಷ್ಟು ಸಮತಲ ಮೀಸಲಾತಿ ನೀಡಲು ಸಿದ್ದತೆ ನಡೆಸುತ್ತಿರುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಹೇಳಿದ್ದಾರೆ. </p>.<p>ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಕುಟುಂಬವನ್ನು ಗೌರವಿಸಲು ಆಯೋಜಿಸಿದ್ದ ಸಭೆಯಲ್ಲಿ ಧಾಮಿ ಪಾಲ್ಗೊಂಡಿದ್ದರು. ಈ ವೇಳೆ ಮೀಸಲಾತಿ ಕುರಿತು ಪ್ರಕಟಿಸಿದ್ದಾರೆ. </p>.<p class="title">‘ರಾಜ್ಯ ಸಾರಿಗೆ, ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಶೇ 10ರಷ್ಟು ಸಮತಲ ಮೀಸಲಾತಿಯನ್ನು ಅಗ್ನಿವೀರರಿಗೆ ನೀಡಲು ಯೋಜಿಸಲಾಗಿದೆ. ಈ ಸಂಬಂಧಿಸಿದ ಪ್ರಸ್ತಾವವನ್ನು ಶೀಘ್ರವೇ ರಾಜ್ಯ ಸಂಪುಟದ ಅನುಮೋದನೆಗೆ ಮಂಡಿಸಲಾಗುವುದು. ಅಗ್ನಿಪಥ ಯೋಜನೆ ಅನ್ವಯ ನಾಲ್ಕು ವರ್ಷಗಳ ಸೇವೆ ಪೂರೈಸಿದ ಅಗ್ನಿವೀರರು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ’ ಎಂದೂ ಧಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>