ಆಮ್ ಆದ್ಮಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದರೆ ಉತ್ತರಾಖಂಡದ ಪ್ರತಿ ಯುವಕರಿಗೂ ಉದ್ಯೋಗ, ಉದ್ಯೋಗ ದೊರೆಯುವವರೆಗೆ ಕುಟುಂಬ ನಿರ್ವಹಣೆಗೆ ಪ್ರತಿಯೊಬ್ಬರಿಗೆ ಮಾಸಿಕ ₹ 5 ಸಾವಿರ, ರಾಜ್ಯದ ಜನರಿಗೆ ಖಾಸಗಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ 80ರಷ್ಟು ಮೀಸಲಾತಿ, ಪಕ್ಷವು ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಒಂದು ಲಕ್ಷ ಉದ್ಯೋಗಾವಕಾಶ ಸೃಷ್ಟಿ ಸೇರಿದಂತೆ ಆರು ಭರವಸೆಗಳನ್ನು ಕೇಜ್ರಿವಾಲ್ ನೀಡಿದರು.