<p><strong>ಡೆಹ್ರಾಡೂನ್</strong>: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.</p><p> ಬಿಜೆಪಿ ನೇತೃತ್ವದ ಸರ್ಕಾರವು ಮಂಗಳವಾರ ಮಸೂದೆ ಮಂಡಿಸಿತ್ತು. ಮಸೂದೆಯನ್ನು ಮೊದಲು ಉನ್ನತಮಟ್ಟದ ಸಮಿತಿಗೆ ಕಳುಹಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದವು.</p><p>ಮಸೂದೆಗೆ ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಸ್ವಾತಂತ್ರ್ಯಾನಂತರ ಯುಸಿಸಿ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.</p><p>ಈ ಮೂಲಕ ಎಲ್ಲಾ ನಾಗರಿಕರಿಗೆ ಧರ್ಮಾತೀತವಾಗಿ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಏಕರೂಪದ ಕಾನೂನು ಅನ್ವಯವಾಗಲಿದೆ.</p><p>ಇದೊಂದು ಸಾಮಾನ್ಯ ಕಾಯ್ದೆ ಅಲ್ಲವೇ ಅಲ್ಲ ಎಂದು ಮಸೂದೆ ಅಂಗೀಕಾರಕ್ಕೂ ಮುನ್ನ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದರು.</p><p>ಈ ಮೂಲಕ ಎಲ್ಲ ಧರ್ಮಗಳ ಮಹಿಳೆಯರು, ಪುರುಷರಿಗೆ ಏಕರೂಪದ ಕಾನೂನು ಅನ್ವಯವಾಗಲಿದೆ. ತಾರತಮ್ಯರಹಿತ, ಏಕತೆಯ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದೂ ಅವರು ಹೇಳಿದರು.</p><p>ವಿಶೇಷವಾಗಿ ಇದು ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಿದ್ದು, ಅವರ ಶೋಷಣೆಗೆ ಅಂತ್ಯಹಾಡಲಿದೆ ಎಂದು ಧಾಮಿ ಹೇಳಿದರು.</p><p>‘2022ರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆವನ್ನು ಈ ಕಾಯ್ದೆ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಇದು ಉತ್ತರಾಖಂಡದ ಚಿಕ್ಕ ಕೊಡುಗೆ ’ ಎಂದು ಸಿಎಂ ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.</p><p> ಬಿಜೆಪಿ ನೇತೃತ್ವದ ಸರ್ಕಾರವು ಮಂಗಳವಾರ ಮಸೂದೆ ಮಂಡಿಸಿತ್ತು. ಮಸೂದೆಯನ್ನು ಮೊದಲು ಉನ್ನತಮಟ್ಟದ ಸಮಿತಿಗೆ ಕಳುಹಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದವು.</p><p>ಮಸೂದೆಗೆ ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಸ್ವಾತಂತ್ರ್ಯಾನಂತರ ಯುಸಿಸಿ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.</p><p>ಈ ಮೂಲಕ ಎಲ್ಲಾ ನಾಗರಿಕರಿಗೆ ಧರ್ಮಾತೀತವಾಗಿ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಏಕರೂಪದ ಕಾನೂನು ಅನ್ವಯವಾಗಲಿದೆ.</p><p>ಇದೊಂದು ಸಾಮಾನ್ಯ ಕಾಯ್ದೆ ಅಲ್ಲವೇ ಅಲ್ಲ ಎಂದು ಮಸೂದೆ ಅಂಗೀಕಾರಕ್ಕೂ ಮುನ್ನ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದರು.</p><p>ಈ ಮೂಲಕ ಎಲ್ಲ ಧರ್ಮಗಳ ಮಹಿಳೆಯರು, ಪುರುಷರಿಗೆ ಏಕರೂಪದ ಕಾನೂನು ಅನ್ವಯವಾಗಲಿದೆ. ತಾರತಮ್ಯರಹಿತ, ಏಕತೆಯ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದೂ ಅವರು ಹೇಳಿದರು.</p><p>ವಿಶೇಷವಾಗಿ ಇದು ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಿದ್ದು, ಅವರ ಶೋಷಣೆಗೆ ಅಂತ್ಯಹಾಡಲಿದೆ ಎಂದು ಧಾಮಿ ಹೇಳಿದರು.</p><p>‘2022ರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆವನ್ನು ಈ ಕಾಯ್ದೆ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಇದು ಉತ್ತರಾಖಂಡದ ಚಿಕ್ಕ ಕೊಡುಗೆ ’ ಎಂದು ಸಿಎಂ ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>