<p><strong>ರುದ್ರಪ್ರಯಾಗ:</strong> ಉತ್ತರಾಖಂಡದ ರುದ್ರಪ್ರಯಾಗದ ಅಲಕಾನಂದ ನದಿಗೆ ಬಸ್ ಉರುಳಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. </p><p>ಬಸ್ ನದಿಗೆ ಬಿದ್ದ ಸ್ಥಳದಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ಹರಿದ್ವಾರ ಜಿಲ್ಲೆಯಲ್ಲಿ ರಾಜಸ್ಥಾನ ಮೂಲದ ಪ್ರತಾಪ್ ಚೌಕ್ ನಿವಾಸಿ ಲಲಿತ್ ಕುಮಾರ್ ಸೋನಿ (48) ಎಂಬುವರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ರಾಜಸ್ಥಾನ, ಗುಜರಾತ್. ಮಧ್ಯಪ್ರದೇಶ, ಮಹಾರಾಷ್ಟ್ರದ ಒಟ್ಟು 31 ಮಂದಿ ಭಕ್ತರು ಬದರಿನಾಥಕ್ಕೆ ಹೊರಟಿದ್ದರು. ಈ ವೇಳೆ ರುದ್ರಪ್ರಯಾಗದ ದೋಲ್ತೀರ್ ಪ್ರದೇಶದಲ್ಲಿ ಗುರುವಾರ ಅಪಘಾತ ಸಂಭವಿಸಿತ್ತು.</p><p>ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಆ ಪೈಕಿ ನಾಲ್ವರು ರುದ್ರಪ್ರಯಾಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ನಾಲ್ವರು ಋಷಿಕೇಶದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿದಂತೆ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಆರು ಮೃತದೇಹಗಳನ್ನು ಹೊರಕ್ಕೆ ತರಲಾಗಿದೆ. </p><p>ಇನ್ನೂ ಆರು ಯಾತ್ರಿಕರು ಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರುದ್ರಪ್ರಯಾಗ:</strong> ಉತ್ತರಾಖಂಡದ ರುದ್ರಪ್ರಯಾಗದ ಅಲಕಾನಂದ ನದಿಗೆ ಬಸ್ ಉರುಳಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. </p><p>ಬಸ್ ನದಿಗೆ ಬಿದ್ದ ಸ್ಥಳದಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ಹರಿದ್ವಾರ ಜಿಲ್ಲೆಯಲ್ಲಿ ರಾಜಸ್ಥಾನ ಮೂಲದ ಪ್ರತಾಪ್ ಚೌಕ್ ನಿವಾಸಿ ಲಲಿತ್ ಕುಮಾರ್ ಸೋನಿ (48) ಎಂಬುವರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ರಾಜಸ್ಥಾನ, ಗುಜರಾತ್. ಮಧ್ಯಪ್ರದೇಶ, ಮಹಾರಾಷ್ಟ್ರದ ಒಟ್ಟು 31 ಮಂದಿ ಭಕ್ತರು ಬದರಿನಾಥಕ್ಕೆ ಹೊರಟಿದ್ದರು. ಈ ವೇಳೆ ರುದ್ರಪ್ರಯಾಗದ ದೋಲ್ತೀರ್ ಪ್ರದೇಶದಲ್ಲಿ ಗುರುವಾರ ಅಪಘಾತ ಸಂಭವಿಸಿತ್ತು.</p><p>ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಆ ಪೈಕಿ ನಾಲ್ವರು ರುದ್ರಪ್ರಯಾಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ನಾಲ್ವರು ಋಷಿಕೇಶದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿದಂತೆ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಆರು ಮೃತದೇಹಗಳನ್ನು ಹೊರಕ್ಕೆ ತರಲಾಗಿದೆ. </p><p>ಇನ್ನೂ ಆರು ಯಾತ್ರಿಕರು ಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>