<p><strong>ಕೊಚ್ಚಿ</strong>: ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಕೇರಳ ಮೂಲದ 28 ಮಂದಿ ಪ್ರವಾಸಿರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಬುಧವಾರ ತಿಳಿಸಿದ್ದಾರೆ.</p><p>ನಾಪತ್ತೆಯಾಗಿರುವ ಕೇರಳ ಮೂಲದ 28 ಜನರ ಪೈಕಿ 20 ಜನರು ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ವರದಿಯಾಗಿದೆ. ಉಳಿದ ಎಂಟು ಮಂದಿ ಕೇರಳದ ವಿವಿಧ ಜಿಲ್ಲೆಯವರು ಎಂದು ಕಾಣೆಯಾದ ಪ್ರವಾಸಿಗರ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿದ್ದಾರೆ.</p><p>ನಾಪತ್ತೆಯಾದ ಪ್ರವಾಸಿಗರ ಪೈಕಿ ದಂಪತಿಯೊಬ್ಬರ ಮಗ ಪ್ರತಿಕ್ರಿಯಿಸಿದ್ದು, ಒಂದು ದಿನದ ಹಿಂದೆ ಕೊನೆಯ ಬಾರಿಗೆ ಅವರೊಂದಿಗೆ ಮಾತನಾಡಿದ್ದೆ. ಆ ದಿನ ಬೆಳಿಗ್ಗೆ 8.30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೊರಟಿದ್ದೇವೆ ಎಂದು ಹೇಳಿದ್ದರು. ಅವರು ಹೊರಟಿದ್ದ ಮಾರ್ಗಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಆಗಿನಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.</p>.ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ BJP ವಕ್ತಾರೆ ನೇಮಕ: ಕಾಂಗ್ರೆಸ್, NCP ಕಿಡಿ.ಬೆಂಗಳೂರು | ನಮ್ಮ ಮೆಟ್ರೊ: ಹಳದಿ ಮಾರ್ಗದಲ್ಲಿ ಯಾವೆಲ್ಲಾ ನಿಲ್ದಾಣಗಳಿವೆ?. <p>10 ದಿನಗಳ ಉತ್ತರಾಖಂಡ ಪ್ರವಾಸವನ್ನು ಆಯೋಜಿಸಿದ್ದ ಹರಿದ್ವಾರ ಮೂಲದ ಪ್ರಯಾಣ ಸಂಸ್ಥೆಗೂ ಸಹ ಕಾಣೆಯಾದ ಪ್ರವಾಸಿಗರ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ</p><p>ಮೇಘಸ್ಫೋಟ ಪರಿಣಾಮ ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ದಿಢೀರ್ ಪ್ರವಾಹ ಸಂಭವಿಸಿದ್ದು, ಐವರು ಮೃತಪಟ್ಟು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.</p><p>ಧರಾಲಿಯಲ್ಲಿ ಬುಧವಾರವೂ ಭಾರಿ ಮಳೆ ಮುಂದುವರಿದಿದೆ. ಮಳೆ ನಡುವೆಯೇ ಮಂಗಳವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.</p><p>‘ನಾಪತ್ತೆಯಾದವರಲ್ಲಿ 11 ಯೋಧರು ಸೇರಿದ್ದಾರೆ’ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ ತಿಳಿಸಿದ್ದಾರೆ.</p>.ಧರ್ಮಸ್ಥಳ ಪ್ರಕರಣ|ಗುರುತಿಸದ ಜಾಗಕ್ಕೆ ಅಧಿಕಾರಿಗಳನ್ನು ಕರೆದೊಯ್ದ ಸಾಕ್ಷಿ ದೂರುದಾರ.ಪ್ರಧಾನಿ ಮೋದಿಯವರ ಕೈಗಳನ್ನು ಕಟ್ಟಿ ಹಾಕಲಾಗಿದೆ: ರಾಹುಲ್ ಗಾಂಧಿ .SIR ಚರ್ಚೆಗೆ ವಿರೋಧ ಪಕ್ಷಗಳ ಆಗ್ರಹ: ಲೋಕಸಭಾ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ.Dharmasthala Case: ವಿಧಿ ವಿಜ್ಞಾನ ವರದಿಗೆ ಬೇಕು 2 ತಿಂಗಳು, ಪರೀಕ್ಷೆ ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಕೇರಳ ಮೂಲದ 28 ಮಂದಿ ಪ್ರವಾಸಿರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಬುಧವಾರ ತಿಳಿಸಿದ್ದಾರೆ.</p><p>ನಾಪತ್ತೆಯಾಗಿರುವ ಕೇರಳ ಮೂಲದ 28 ಜನರ ಪೈಕಿ 20 ಜನರು ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ವರದಿಯಾಗಿದೆ. ಉಳಿದ ಎಂಟು ಮಂದಿ ಕೇರಳದ ವಿವಿಧ ಜಿಲ್ಲೆಯವರು ಎಂದು ಕಾಣೆಯಾದ ಪ್ರವಾಸಿಗರ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿದ್ದಾರೆ.</p><p>ನಾಪತ್ತೆಯಾದ ಪ್ರವಾಸಿಗರ ಪೈಕಿ ದಂಪತಿಯೊಬ್ಬರ ಮಗ ಪ್ರತಿಕ್ರಿಯಿಸಿದ್ದು, ಒಂದು ದಿನದ ಹಿಂದೆ ಕೊನೆಯ ಬಾರಿಗೆ ಅವರೊಂದಿಗೆ ಮಾತನಾಡಿದ್ದೆ. ಆ ದಿನ ಬೆಳಿಗ್ಗೆ 8.30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೊರಟಿದ್ದೇವೆ ಎಂದು ಹೇಳಿದ್ದರು. ಅವರು ಹೊರಟಿದ್ದ ಮಾರ್ಗಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಆಗಿನಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.</p>.ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ BJP ವಕ್ತಾರೆ ನೇಮಕ: ಕಾಂಗ್ರೆಸ್, NCP ಕಿಡಿ.ಬೆಂಗಳೂರು | ನಮ್ಮ ಮೆಟ್ರೊ: ಹಳದಿ ಮಾರ್ಗದಲ್ಲಿ ಯಾವೆಲ್ಲಾ ನಿಲ್ದಾಣಗಳಿವೆ?. <p>10 ದಿನಗಳ ಉತ್ತರಾಖಂಡ ಪ್ರವಾಸವನ್ನು ಆಯೋಜಿಸಿದ್ದ ಹರಿದ್ವಾರ ಮೂಲದ ಪ್ರಯಾಣ ಸಂಸ್ಥೆಗೂ ಸಹ ಕಾಣೆಯಾದ ಪ್ರವಾಸಿಗರ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ</p><p>ಮೇಘಸ್ಫೋಟ ಪರಿಣಾಮ ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ದಿಢೀರ್ ಪ್ರವಾಹ ಸಂಭವಿಸಿದ್ದು, ಐವರು ಮೃತಪಟ್ಟು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.</p><p>ಧರಾಲಿಯಲ್ಲಿ ಬುಧವಾರವೂ ಭಾರಿ ಮಳೆ ಮುಂದುವರಿದಿದೆ. ಮಳೆ ನಡುವೆಯೇ ಮಂಗಳವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.</p><p>‘ನಾಪತ್ತೆಯಾದವರಲ್ಲಿ 11 ಯೋಧರು ಸೇರಿದ್ದಾರೆ’ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ ತಿಳಿಸಿದ್ದಾರೆ.</p>.ಧರ್ಮಸ್ಥಳ ಪ್ರಕರಣ|ಗುರುತಿಸದ ಜಾಗಕ್ಕೆ ಅಧಿಕಾರಿಗಳನ್ನು ಕರೆದೊಯ್ದ ಸಾಕ್ಷಿ ದೂರುದಾರ.ಪ್ರಧಾನಿ ಮೋದಿಯವರ ಕೈಗಳನ್ನು ಕಟ್ಟಿ ಹಾಕಲಾಗಿದೆ: ರಾಹುಲ್ ಗಾಂಧಿ .SIR ಚರ್ಚೆಗೆ ವಿರೋಧ ಪಕ್ಷಗಳ ಆಗ್ರಹ: ಲೋಕಸಭಾ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ.Dharmasthala Case: ವಿಧಿ ವಿಜ್ಞಾನ ವರದಿಗೆ ಬೇಕು 2 ತಿಂಗಳು, ಪರೀಕ್ಷೆ ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>