<p><strong>ಡೆಹ್ರಾಡೂನ್:</strong> ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಉತ್ತರಾಖಂಡದ ಹಲವು ಜಿಲ್ಲೆಗಳು ತತ್ತರಿಸಿದ್ದು, ಶುಕ್ರವಾರ ಮುಂಜಾನೆ ಐವರು ಮೃತಪಟ್ಟಿದ್ದಾರೆ.</p>.<p>ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ಚಮೋಲಿ, ರುದ್ರಪ್ರಯಾಗ, ತೆಹ್ರಿ ಮತ್ತು ಬಾಗೇಶ್ವರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಗುರುವಾರ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಬಾಗೇಶ್ವರ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಇಬ್ಬರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಉತ್ತರಾಖಂಡದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<p>ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಯಲ್ಲಿ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ. ರುದ್ರಪ್ರಯಾಗದ ಆರಕ್ಕೂ ಹೆಚ್ಚು ಗ್ರಾಮಗಳಿಗೆ ಹಾನಿಯಾಗಿದೆ. 30ರಿಂದ 40 ಕುಟುಂಬಗಳು ಅವಶೇಷಗಳಡಿ ಮತ್ತು ಪ್ರವಾಹದಲ್ಲಿ ಸಿಲುಕಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ನಿರಂತರ ಮಳೆಯಿಂದಾದ ಅಲಕಾನಂದ, ಮಂದಾಕಿನಿ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ನದಿ ಪಾತ್ರದಲ್ಲಿನ ಜನರಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.</p>.<p>ಚೆನಗಢ ಪ್ರದೇಶದಲ್ಲಿ ಹಲವು ನೇಪಾಳಿಗರು ಮತ್ತು ನಾಲ್ವರು ಸ್ಥಳೀಯರು ಅವಶೇಷಗಳಡಿ ಸಿಲುಕಿದ್ದಾರೆ. 7ರಿಂದ 8 ಕಡೆಗಳಲ್ಲಿ ರಸ್ತೆ ಕುಸಿತವಾಗಿರುವುದರಿಂದ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<h2>ಬದರೀನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ</h2>.<p>ಭೂಕುಸಿತದಿಂದಾಗಿ ಬದರೀನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ. ಕೇದರನಾಥ ಹೆದ್ದಾರಿ ಕೂಡ ಬಂದ್ ಆಗಿದೆ. ವಾಹನ ಸಂಚಾರ ಪುನರಾರಂಭಗೊಂಡಿರುವುದು ಖಚಿತವಾದ ಬಳಿಕ ಭಕ್ತರು ಬರಬಹುದು ಎಂದು ಸ್ಥಳೀಯಾಡಳಿತ ಮನವಿ ಮಾಡಿದೆ.</p>.<h2>‘ರೆಡ್ ಅಲರ್ಟ್’ </h2><p>ಬಾಗೇಶ್ವರ ಚಮೋಲಿ ಡೆಹ್ರಾಡೂನ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆಯಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆಯಾಗಿದೆ.</p>.<p>ಚಮೋಲಿ ಹಾಗೂ ರುದ್ರಪ್ರಯಾಗದ ಕೆಲವೆಡೆ ಮೇಘಸ್ಫೋಟ ಹಾಗೂ ಭೂಕುಸಿತ ಸಂಭವಿಸಿದ್ದು, ಕೆಲವು ಕುಟುಂಬಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳೀಯ ಆಡಳಿತದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p> <p>ನೈಸರ್ಗಿಕ ವಿಕೋಪಗಳಿಂದ ರಾಜ್ಯ (ಉತ್ತರಾಖಂಡ) ತತ್ತರಿಸಿದೆ. ಆಗಸ್ಟ್ 5ರಂದು ಖೀರಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರಿಂದ ದಿಢೀರ್ ಪ್ರವಾಹ ಉಂಟಾಗಿ, ಐವರು ಮೃತಪಟ್ಟು, ಇತರ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದರು.</p> .ಉತ್ತರಾಖಂಡ ಮೇಘಸ್ಫೋಟ: ಕೆಸರಿನಲ್ಲಿ ಹೂತು ಹೋದ ಪ್ರಾಚೀನ ಶಿವ ದೇವಾಲಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಉತ್ತರಾಖಂಡದ ಹಲವು ಜಿಲ್ಲೆಗಳು ತತ್ತರಿಸಿದ್ದು, ಶುಕ್ರವಾರ ಮುಂಜಾನೆ ಐವರು ಮೃತಪಟ್ಟಿದ್ದಾರೆ.</p>.<p>ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ಚಮೋಲಿ, ರುದ್ರಪ್ರಯಾಗ, ತೆಹ್ರಿ ಮತ್ತು ಬಾಗೇಶ್ವರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಗುರುವಾರ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಬಾಗೇಶ್ವರ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಇಬ್ಬರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಉತ್ತರಾಖಂಡದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<p>ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಯಲ್ಲಿ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ. ರುದ್ರಪ್ರಯಾಗದ ಆರಕ್ಕೂ ಹೆಚ್ಚು ಗ್ರಾಮಗಳಿಗೆ ಹಾನಿಯಾಗಿದೆ. 30ರಿಂದ 40 ಕುಟುಂಬಗಳು ಅವಶೇಷಗಳಡಿ ಮತ್ತು ಪ್ರವಾಹದಲ್ಲಿ ಸಿಲುಕಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ನಿರಂತರ ಮಳೆಯಿಂದಾದ ಅಲಕಾನಂದ, ಮಂದಾಕಿನಿ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ನದಿ ಪಾತ್ರದಲ್ಲಿನ ಜನರಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.</p>.<p>ಚೆನಗಢ ಪ್ರದೇಶದಲ್ಲಿ ಹಲವು ನೇಪಾಳಿಗರು ಮತ್ತು ನಾಲ್ವರು ಸ್ಥಳೀಯರು ಅವಶೇಷಗಳಡಿ ಸಿಲುಕಿದ್ದಾರೆ. 7ರಿಂದ 8 ಕಡೆಗಳಲ್ಲಿ ರಸ್ತೆ ಕುಸಿತವಾಗಿರುವುದರಿಂದ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<h2>ಬದರೀನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ</h2>.<p>ಭೂಕುಸಿತದಿಂದಾಗಿ ಬದರೀನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ. ಕೇದರನಾಥ ಹೆದ್ದಾರಿ ಕೂಡ ಬಂದ್ ಆಗಿದೆ. ವಾಹನ ಸಂಚಾರ ಪುನರಾರಂಭಗೊಂಡಿರುವುದು ಖಚಿತವಾದ ಬಳಿಕ ಭಕ್ತರು ಬರಬಹುದು ಎಂದು ಸ್ಥಳೀಯಾಡಳಿತ ಮನವಿ ಮಾಡಿದೆ.</p>.<h2>‘ರೆಡ್ ಅಲರ್ಟ್’ </h2><p>ಬಾಗೇಶ್ವರ ಚಮೋಲಿ ಡೆಹ್ರಾಡೂನ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆಯಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆಯಾಗಿದೆ.</p>.<p>ಚಮೋಲಿ ಹಾಗೂ ರುದ್ರಪ್ರಯಾಗದ ಕೆಲವೆಡೆ ಮೇಘಸ್ಫೋಟ ಹಾಗೂ ಭೂಕುಸಿತ ಸಂಭವಿಸಿದ್ದು, ಕೆಲವು ಕುಟುಂಬಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳೀಯ ಆಡಳಿತದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p> <p>ನೈಸರ್ಗಿಕ ವಿಕೋಪಗಳಿಂದ ರಾಜ್ಯ (ಉತ್ತರಾಖಂಡ) ತತ್ತರಿಸಿದೆ. ಆಗಸ್ಟ್ 5ರಂದು ಖೀರಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರಿಂದ ದಿಢೀರ್ ಪ್ರವಾಹ ಉಂಟಾಗಿ, ಐವರು ಮೃತಪಟ್ಟು, ಇತರ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದರು.</p> .ಉತ್ತರಾಖಂಡ ಮೇಘಸ್ಫೋಟ: ಕೆಸರಿನಲ್ಲಿ ಹೂತು ಹೋದ ಪ್ರಾಚೀನ ಶಿವ ದೇವಾಲಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>