<p><strong>ಡೆಹ್ರಾಡೂನ್:</strong> ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.</p>.ಉತ್ತರಾಖಂಡದಲ್ಲಿ ನಾಳೆಯಿಂದಲೇ ಯುಸಿಸಿ ಜಾರಿ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ.<p>‘ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದು ಇದಕ್ಕೆ ನಿದರ್ಶನ. ಭಾರತದ ಗಣರಾಜ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗಟ್ಟಿಯಾಗಿ ನಿಂತಿದೆ’ ಎಂದು ಅವರು ಹೇಳಿದ್ದಾರೆ.</p><p>ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಗಣಾರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ್ದಾರೆ.</p><p>2022ರ ಚುನಾವಣೆ ವೇಳೆಯಲ್ಲಿ ನಾವು ನೀಡಿದ ಭರವಸೆಯಂತೆ ಉತ್ತರಾಖಂಡದಲ್ಲಿ ಸೋಮವಾರದಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ. ಸರ್ಕಾರ ರಚನೆಯಾದ ಕೂಡಲೇ ನಾವು ಈ ಬಗ್ಗೆ ಆದ್ಯತೆ ಮೇರೆಗೆ ಕೆಲಸ ಮಾಡಿದೆವು. ಯುಸಿಸಿ ಕರಡು ರಚಿಸಿ, ಕಾನೂನು ಮಾಡಿದೆವು ಎಂದು ಅವರು ಹೇಳಿದ್ದಾರೆ.</p>.ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿಗೆ ಅಂಗೀಕಾರ: ಪುಷ್ಕರ್ ಸಿಂಗ್ ಧಾಮಿ.<p>ದೇಶದ ಹಲವು ನದಿಗಳು ಉತ್ತರಾಖಂಡದಲ್ಲಿ ಹುಟ್ಟುತ್ತವೆ. ಹಾಗೆಯೇ ಉತ್ತರಾಖಂಡ ‘ಯುಸಿಸಿಯ ಗಂಗೋತ್ರಿ’ ಆಗಲಿದ್ದು, ದೇಶದ ಇತರ ಭಾಗಗಳಿಗೂ ಇದು ಹಬ್ಬುತ್ತದೆ ಎಂದು ಧಾಮಿ ನುಡಿದಿದ್ದಾರೆ.</p><p>ಇದೇ ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಗೆಲುವು ತಂದುಕೊಟ್ಟ ಮತದಾರರಿಗೂ ಧಾಮಿ ಧನ್ಯವಾದ ಅರ್ಪಿಸಿದರು. ಇತ್ತೀಚೆಗೆ ನಡೆದ 11 ಸ್ಥಳೀಯಾಡಳಿತ ಸಂಸ್ಥೆಗಳ ಮೇಯರ್ ಚುನಾವಣೆಯಲ್ಲಿ 10ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.</p><p>ಇದೇ ವೇಳೆ ಪಕ್ಷದ ಕಚೇರಿಯಲ್ಲಿ ಧಾಮಿಯವರಿಗೆ ಸನ್ಮಾನವೂ ನಡೆಯಿತು.</p> .ರಾಮ ಮಂದಿರದ ಕನಸನ್ನು ಮೋದಿ ನನಸು ಮಾಡಿದ್ದಾರೆ: ಉತ್ತರಾಖಂಡ ಸಿಎಂ ಪುಷ್ಕರ್ ಧಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.</p>.ಉತ್ತರಾಖಂಡದಲ್ಲಿ ನಾಳೆಯಿಂದಲೇ ಯುಸಿಸಿ ಜಾರಿ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ.<p>‘ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದು ಇದಕ್ಕೆ ನಿದರ್ಶನ. ಭಾರತದ ಗಣರಾಜ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗಟ್ಟಿಯಾಗಿ ನಿಂತಿದೆ’ ಎಂದು ಅವರು ಹೇಳಿದ್ದಾರೆ.</p><p>ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಗಣಾರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ್ದಾರೆ.</p><p>2022ರ ಚುನಾವಣೆ ವೇಳೆಯಲ್ಲಿ ನಾವು ನೀಡಿದ ಭರವಸೆಯಂತೆ ಉತ್ತರಾಖಂಡದಲ್ಲಿ ಸೋಮವಾರದಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ. ಸರ್ಕಾರ ರಚನೆಯಾದ ಕೂಡಲೇ ನಾವು ಈ ಬಗ್ಗೆ ಆದ್ಯತೆ ಮೇರೆಗೆ ಕೆಲಸ ಮಾಡಿದೆವು. ಯುಸಿಸಿ ಕರಡು ರಚಿಸಿ, ಕಾನೂನು ಮಾಡಿದೆವು ಎಂದು ಅವರು ಹೇಳಿದ್ದಾರೆ.</p>.ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿಗೆ ಅಂಗೀಕಾರ: ಪುಷ್ಕರ್ ಸಿಂಗ್ ಧಾಮಿ.<p>ದೇಶದ ಹಲವು ನದಿಗಳು ಉತ್ತರಾಖಂಡದಲ್ಲಿ ಹುಟ್ಟುತ್ತವೆ. ಹಾಗೆಯೇ ಉತ್ತರಾಖಂಡ ‘ಯುಸಿಸಿಯ ಗಂಗೋತ್ರಿ’ ಆಗಲಿದ್ದು, ದೇಶದ ಇತರ ಭಾಗಗಳಿಗೂ ಇದು ಹಬ್ಬುತ್ತದೆ ಎಂದು ಧಾಮಿ ನುಡಿದಿದ್ದಾರೆ.</p><p>ಇದೇ ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಗೆಲುವು ತಂದುಕೊಟ್ಟ ಮತದಾರರಿಗೂ ಧಾಮಿ ಧನ್ಯವಾದ ಅರ್ಪಿಸಿದರು. ಇತ್ತೀಚೆಗೆ ನಡೆದ 11 ಸ್ಥಳೀಯಾಡಳಿತ ಸಂಸ್ಥೆಗಳ ಮೇಯರ್ ಚುನಾವಣೆಯಲ್ಲಿ 10ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.</p><p>ಇದೇ ವೇಳೆ ಪಕ್ಷದ ಕಚೇರಿಯಲ್ಲಿ ಧಾಮಿಯವರಿಗೆ ಸನ್ಮಾನವೂ ನಡೆಯಿತು.</p> .ರಾಮ ಮಂದಿರದ ಕನಸನ್ನು ಮೋದಿ ನನಸು ಮಾಡಿದ್ದಾರೆ: ಉತ್ತರಾಖಂಡ ಸಿಎಂ ಪುಷ್ಕರ್ ಧಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>