<p><strong>ಲಖನೌ:</strong> ಉತ್ತರಾಖಂಡಲ್ಲಿ ಸಂಭವಿಸಿದ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ ಬುಧವಾರ 21ಕ್ಕೆ ಏರಿಕೆಯಾಗಿದೆ. 14 ಮಂದಿ ನಾಪತ್ತೆಯಾಗಿದ್ದಾರೆ.</p>.<p>ರಾಯಪುರದ ಸಂಗ್ ನದಿಯಲ್ಲಿ ಎರಡು ಮೃತದೇಹ ಮತ್ತು ಅಸನ್ ನದಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. </p>.<p>ಸಹಸ್ತ್ರಧಾರ ಬಳಿಯ ಫುಲೆಟ್ ಗ್ರಾಮದಲ್ಲಿ ಆರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳಾದ ಮಜಡಾ, ಚಹಮ್ಸರಿ ಮತ್ತು ಜಮಡಾದಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. </p>.<p>ಹಲವಾರು ಕಡೆ ಭೂಕುಸಿತ ಸಂಭವಿಸಿ, ರಸ್ತೆಗಳಿಗೆ ಅಪಾರ ಹಾನಿಯಾಗಿರುವುದರಿಂದ ಡೆಹ್ರಾಡೂನ್ನಿಂದ ಪ್ರಸಿದ್ಧ ಪ್ರವಾಸಿತಾಣಗಳಾದ ಮುಸ್ಸೋರಿ ಮತ್ತು ಸಹಸ್ತ್ರಧಾರಕ್ಕೆ ಬುಧವಾರವೂ ವಾಹನ ಸಂಚಾರ ಸ್ಥಗಿತಗೊಂಡಿದೆ. </p>.<p>ಬದರೀನಾಥ ಹೆದ್ದಾರಿಯಲ್ಲಿ ವಾಹನವೊಂದು ಮಗುಚಿಬಿದ್ದ ಪರಿಣಾಮ ಏಳು ಮಂದಿಗೆ ಗಾಯಗಳಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.</p>.<p>ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟ ಮತ್ತು ಮಳೆಯಿಂದಾಗಿ ಡೆಹ್ರಾಡೂನ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರಿ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರಾಖಂಡಲ್ಲಿ ಸಂಭವಿಸಿದ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ ಬುಧವಾರ 21ಕ್ಕೆ ಏರಿಕೆಯಾಗಿದೆ. 14 ಮಂದಿ ನಾಪತ್ತೆಯಾಗಿದ್ದಾರೆ.</p>.<p>ರಾಯಪುರದ ಸಂಗ್ ನದಿಯಲ್ಲಿ ಎರಡು ಮೃತದೇಹ ಮತ್ತು ಅಸನ್ ನದಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. </p>.<p>ಸಹಸ್ತ್ರಧಾರ ಬಳಿಯ ಫುಲೆಟ್ ಗ್ರಾಮದಲ್ಲಿ ಆರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳಾದ ಮಜಡಾ, ಚಹಮ್ಸರಿ ಮತ್ತು ಜಮಡಾದಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. </p>.<p>ಹಲವಾರು ಕಡೆ ಭೂಕುಸಿತ ಸಂಭವಿಸಿ, ರಸ್ತೆಗಳಿಗೆ ಅಪಾರ ಹಾನಿಯಾಗಿರುವುದರಿಂದ ಡೆಹ್ರಾಡೂನ್ನಿಂದ ಪ್ರಸಿದ್ಧ ಪ್ರವಾಸಿತಾಣಗಳಾದ ಮುಸ್ಸೋರಿ ಮತ್ತು ಸಹಸ್ತ್ರಧಾರಕ್ಕೆ ಬುಧವಾರವೂ ವಾಹನ ಸಂಚಾರ ಸ್ಥಗಿತಗೊಂಡಿದೆ. </p>.<p>ಬದರೀನಾಥ ಹೆದ್ದಾರಿಯಲ್ಲಿ ವಾಹನವೊಂದು ಮಗುಚಿಬಿದ್ದ ಪರಿಣಾಮ ಏಳು ಮಂದಿಗೆ ಗಾಯಗಳಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.</p>.<p>ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟ ಮತ್ತು ಮಳೆಯಿಂದಾಗಿ ಡೆಹ್ರಾಡೂನ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರಿ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>