<p><strong>ಡೆಹ್ರಾಡೂನ್:</strong> ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. </p><p>ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ. ಮಂಗಳವಾರ ಮುಂಜಾನೆ ಸೇತುವೆಯೊಂದು ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಡೆಹ್ರಾಡೂನ್ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ. ಇಬ್ಬರಿಂದ ಮೂವರು ಮಂದಿ ಕಾಣೆಯಾಗಿದ್ದಾರೆ. ಇನ್ನೊಬ್ಬರು ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ. </p>. <p>ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದ್ದು, 300ರಿಂದ 400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈನಿತಾಲ್ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.</p><p>ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚಿಸಿದ್ದಾರೆ.</p><p>ಡೆಹ್ರಾಡೂನ್ಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಜೊತೆಗಿದ್ದರು.</p>.Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ.ಮೇಘಾಲಯದಲ್ಲಿ ಭಾರಿ ಮಳೆ | ದಿಢೀರ್ ಪ್ರವಾಹ: 10 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. </p><p>ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ. ಮಂಗಳವಾರ ಮುಂಜಾನೆ ಸೇತುವೆಯೊಂದು ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಡೆಹ್ರಾಡೂನ್ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ. ಇಬ್ಬರಿಂದ ಮೂವರು ಮಂದಿ ಕಾಣೆಯಾಗಿದ್ದಾರೆ. ಇನ್ನೊಬ್ಬರು ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ. </p>. <p>ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದ್ದು, 300ರಿಂದ 400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈನಿತಾಲ್ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.</p><p>ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚಿಸಿದ್ದಾರೆ.</p><p>ಡೆಹ್ರಾಡೂನ್ಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಜೊತೆಗಿದ್ದರು.</p>.Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ.ಮೇಘಾಲಯದಲ್ಲಿ ಭಾರಿ ಮಳೆ | ದಿಢೀರ್ ಪ್ರವಾಹ: 10 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>