<p><strong>ಧರಾಲಿ(ಉತ್ತರಾಖಂಡ):</strong> ಧರಾಲಿಯಲ್ಲಿ ಬುಧವಾರವೂ ಭಾರಿ ಮಳೆ ಮುಂದುವರಿದಿದೆ. ಮಳೆ ನಡುವೆಯೇ ಮಂಗಳವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿದ್ದಾರೆ.</p><p>ಹಠಾತ್ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿರುವುದು ಧೃಡಪಟ್ಟಿದೆ. ಸುಮಾರು130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಅವಶೇಷದಡಿಯಿಂದ ಒಂದು ಶವವನ್ನು ಹೊರತೆಗೆಯಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ನಿನ್ನೆ ಧರಾಲಿ ಗ್ರಾಮದಲ್ಲಿ ನಡೆದ ಹರ್ ದೂದ್ ಜಾತ್ರೆಯಲ್ಲಿ ಅನೇಕರು ಪಾಲ್ಗೊಂಡಿದ್ದಾರೆ. ಆದ್ದರಿಂದ ಕಾಣೆಯಾಗಿರುವ ಸಂಖ್ಯೆ 60ಕ್ಕಿಂತಲೂ ಹೆಚ್ಚಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.</p><p>ನಾಪತ್ತೆಯಾದವರ ಪತ್ತೆಗಾಗಿ ಭಾರತೀಯ ಸೇನೆಯು ತನ್ನ ಎಂಐ -17 ಮತ್ತು ಚಿನೂಕ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ.</p><p>‘ನಾಪತ್ತೆಯಾದವರಲ್ಲಿ 11 ಯೋಧರು ಸೇರಿದ್ದಾರೆ’ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>‘ತನ್ನ ಸೈನಿಕರು ಕಾಣೆಯಾಗಿದ್ದರೂ, ತಮ್ಮ ನೆಲೆ ಹಾನಿಗೊಂಡಿದ್ದರೂ ಸೈನ್ಯವು ಸಂಪೂರ್ಣ ಧೈರ್ಯ ಮತ್ತು ದೃಢನಿಶ್ಚಯದಿಂದ ಕೆಲಸ ಮಾಡುತ್ತಿದೆ’ ಎಂದು ಶ್ರೀವಾಸ್ತವ ಹೇಳಿದ್ದಾರೆ. </p><p>14 ರಾಜ್ ರಿಫ್ನ ಕಮಾಂಡಿಂಗ್ ಆಫೀಸರ್ ಕರ್ನಲ್ ಹರ್ಷವರ್ಧನ್ ಅವರು 150 ಸೈನಿಕರ ತಂಡದೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಮುನ್ನಡೆಸುತ್ತಿದ್ದಾರೆ.</p><p>ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮದ ಅರ್ಧದಷ್ಟು ಭಾಗವು ನಾಶವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರಾಲಿ(ಉತ್ತರಾಖಂಡ):</strong> ಧರಾಲಿಯಲ್ಲಿ ಬುಧವಾರವೂ ಭಾರಿ ಮಳೆ ಮುಂದುವರಿದಿದೆ. ಮಳೆ ನಡುವೆಯೇ ಮಂಗಳವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿದ್ದಾರೆ.</p><p>ಹಠಾತ್ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿರುವುದು ಧೃಡಪಟ್ಟಿದೆ. ಸುಮಾರು130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಅವಶೇಷದಡಿಯಿಂದ ಒಂದು ಶವವನ್ನು ಹೊರತೆಗೆಯಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ನಿನ್ನೆ ಧರಾಲಿ ಗ್ರಾಮದಲ್ಲಿ ನಡೆದ ಹರ್ ದೂದ್ ಜಾತ್ರೆಯಲ್ಲಿ ಅನೇಕರು ಪಾಲ್ಗೊಂಡಿದ್ದಾರೆ. ಆದ್ದರಿಂದ ಕಾಣೆಯಾಗಿರುವ ಸಂಖ್ಯೆ 60ಕ್ಕಿಂತಲೂ ಹೆಚ್ಚಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.</p><p>ನಾಪತ್ತೆಯಾದವರ ಪತ್ತೆಗಾಗಿ ಭಾರತೀಯ ಸೇನೆಯು ತನ್ನ ಎಂಐ -17 ಮತ್ತು ಚಿನೂಕ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ.</p><p>‘ನಾಪತ್ತೆಯಾದವರಲ್ಲಿ 11 ಯೋಧರು ಸೇರಿದ್ದಾರೆ’ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ ತಿಳಿಸಿದ್ದಾರೆ.</p><p>‘ತನ್ನ ಸೈನಿಕರು ಕಾಣೆಯಾಗಿದ್ದರೂ, ತಮ್ಮ ನೆಲೆ ಹಾನಿಗೊಂಡಿದ್ದರೂ ಸೈನ್ಯವು ಸಂಪೂರ್ಣ ಧೈರ್ಯ ಮತ್ತು ದೃಢನಿಶ್ಚಯದಿಂದ ಕೆಲಸ ಮಾಡುತ್ತಿದೆ’ ಎಂದು ಶ್ರೀವಾಸ್ತವ ಹೇಳಿದ್ದಾರೆ. </p><p>14 ರಾಜ್ ರಿಫ್ನ ಕಮಾಂಡಿಂಗ್ ಆಫೀಸರ್ ಕರ್ನಲ್ ಹರ್ಷವರ್ಧನ್ ಅವರು 150 ಸೈನಿಕರ ತಂಡದೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಮುನ್ನಡೆಸುತ್ತಿದ್ದಾರೆ.</p><p>ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮದ ಅರ್ಧದಷ್ಟು ಭಾಗವು ನಾಶವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>