<p><strong>ಡೆಹ್ರಾಡೂನ್</strong>: ಉತ್ತರಾಖಂಡ ಸರ್ಕಾರ ಆರಂಭಿಸಿರುವ ‘ಆಪರೇಷನ್ ಕಾಲನೇಮಿ‘ ಕಾರ್ಯಾಚರಣೆಯ ಮೂಲಕ ಸಾಧು–ಸಂತರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ 34 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಇದರೊಂದಿಗೆ ಈ ಕಾರ್ಯಾಚರಣೆಯಡಿಯಲ್ಲಿ ಒಟ್ಟು 82 ನಕಲಿ ಬಾಬಾಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಧರ್ಮದ ಹೆಸರಿನಲ್ಲಿ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.</p>.Technology in Teaching | ತಂತ್ರಜ್ಞಾನದ ಮೋಹ: ಆಧುನಿಕ ಮೂಢನಂಬಿಕೆ?!.ಸಂಪಾದಕೀಯ | ಗುಜರಾತ್ನಲ್ಲಿ ಸೇತುವೆ ಕುಸಿತ; ವ್ಯವಸ್ಥೆಯ ಕುಸಿತದ ಸಂಕೇತವೆ? . <p>ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 82 ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.</p><p>ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ನಡೆಯುತ್ತಿರುವುದರಿಂದ ನಕಲಿ ಬಾಬಾಗಳು ಹೆಚ್ಚು ಸಕ್ರಿಯರಾಗುತ್ತಿರುವುದರಿಂದ ಈ ಅಭಿಯಾನ ಮುಂದುವರಿಯಲಿದೆ ಎಂದು ಸಿಂಗ್ ಹೇಳಿದ್ದಾರೆ.</p><p>ಬಂಧಿತರಲ್ಲಿ ಬಾಂಗ್ಲಾದೇಶಿ ಪ್ರಜೆ ರುಕ್ನ್ ರಕಮ್ ಅಲಿಯಾಸ್ ಶಾ ಆಲಂ ಕೂಡ ಸೇರಿದ್ದಾನೆ, ಆತನನ್ನು ಶುಕ್ರವಾರ ಡೆಹ್ರಾಡೂನ್ ಜಿಲ್ಲೆಯ ಸಹಸ್ಪುರ್ ಪ್ರದೇಶದಿಂದ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.</p>.ಆಳ-ಅಗಲ | ಚಿತ್ರಹಿಂಸೆ: ಇಲ್ಲಿ ವ್ಯವಸ್ಥೆಯ ಭಾಗ.Fact Check | ಗೊರಿಲ್ಲಾ ಮಗುವನ್ನು ತಾಯಿಗೆ ಹಸ್ತಾಂತರಿಸುತ್ತಿರುವ ವಿಡಿಯೊ ಸುಳ್ಳು.UP: 24 ಗಂಟೆಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 14 ಜನರ ಸಾವು .ರೈಲು: ಎಲ್ಲ ಕೋಚ್ಗಳಿಗೂ ಕ್ಯಾಮೆರಾ ಅಳವಡಿಕೆಗೆ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ಉತ್ತರಾಖಂಡ ಸರ್ಕಾರ ಆರಂಭಿಸಿರುವ ‘ಆಪರೇಷನ್ ಕಾಲನೇಮಿ‘ ಕಾರ್ಯಾಚರಣೆಯ ಮೂಲಕ ಸಾಧು–ಸಂತರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ 34 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಇದರೊಂದಿಗೆ ಈ ಕಾರ್ಯಾಚರಣೆಯಡಿಯಲ್ಲಿ ಒಟ್ಟು 82 ನಕಲಿ ಬಾಬಾಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಧರ್ಮದ ಹೆಸರಿನಲ್ಲಿ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.</p>.Technology in Teaching | ತಂತ್ರಜ್ಞಾನದ ಮೋಹ: ಆಧುನಿಕ ಮೂಢನಂಬಿಕೆ?!.ಸಂಪಾದಕೀಯ | ಗುಜರಾತ್ನಲ್ಲಿ ಸೇತುವೆ ಕುಸಿತ; ವ್ಯವಸ್ಥೆಯ ಕುಸಿತದ ಸಂಕೇತವೆ? . <p>ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 82 ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.</p><p>ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ನಡೆಯುತ್ತಿರುವುದರಿಂದ ನಕಲಿ ಬಾಬಾಗಳು ಹೆಚ್ಚು ಸಕ್ರಿಯರಾಗುತ್ತಿರುವುದರಿಂದ ಈ ಅಭಿಯಾನ ಮುಂದುವರಿಯಲಿದೆ ಎಂದು ಸಿಂಗ್ ಹೇಳಿದ್ದಾರೆ.</p><p>ಬಂಧಿತರಲ್ಲಿ ಬಾಂಗ್ಲಾದೇಶಿ ಪ್ರಜೆ ರುಕ್ನ್ ರಕಮ್ ಅಲಿಯಾಸ್ ಶಾ ಆಲಂ ಕೂಡ ಸೇರಿದ್ದಾನೆ, ಆತನನ್ನು ಶುಕ್ರವಾರ ಡೆಹ್ರಾಡೂನ್ ಜಿಲ್ಲೆಯ ಸಹಸ್ಪುರ್ ಪ್ರದೇಶದಿಂದ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.</p>.ಆಳ-ಅಗಲ | ಚಿತ್ರಹಿಂಸೆ: ಇಲ್ಲಿ ವ್ಯವಸ್ಥೆಯ ಭಾಗ.Fact Check | ಗೊರಿಲ್ಲಾ ಮಗುವನ್ನು ತಾಯಿಗೆ ಹಸ್ತಾಂತರಿಸುತ್ತಿರುವ ವಿಡಿಯೊ ಸುಳ್ಳು.UP: 24 ಗಂಟೆಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 14 ಜನರ ಸಾವು .ರೈಲು: ಎಲ್ಲ ಕೋಚ್ಗಳಿಗೂ ಕ್ಯಾಮೆರಾ ಅಳವಡಿಕೆಗೆ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>