<p><strong>ಗೋಪೇಶ್ವರ(ಉತ್ತರಾಖಂಡ)</strong>: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ ನಾಲ್ಕು ಹಳ್ಳಿಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಭೂಕುಸಿತ ಸಂಭವಿಸಿದ್ದು, 30ಕ್ಕೂ ಅಧಿಕ ಮನೆಗಳು ಉರುಳಿವೆ. 14 ಮಂದಿ ನಾಪತ್ತೆಯಾಗಿದ್ದು, ಅವರು ಮಣ್ಣಿನಡಿ ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಇನ್ನೂ 20 ಮಂದಿಗೆ ಗಾಯಗಳಾಗಿವೆ.</p><p>ಈ ನಾಲ್ಕು ಹಳ್ಳಿಗಳು ನಂದನಗರ ಪ್ರದೇಶದಲ್ಲಿ ಬರುತ್ತಿದ್ದು, ಡೆಹ್ರಾಡೂನ್ನಿಂದ 260 ಕಿ.ಮೀ ಮತ್ತು ಚಮೋಲಿಯಿಂದ 50 ಕಿ.ಮೀ ದೂರದಲ್ಲಿವೆ. ನಂದನಗರ ಪ್ರದೇಶದಲ್ಲಿ ಭೂಕುಸಿತವು ಈಗಾಗಲೇ ಭಾರಿ ಅವಾಂತರ ಸೃಷ್ಟಿಸಿದೆ.</p><p>ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.</p><p>'ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ಭಾರಿ ಮಳೆಯಿಂದಾಗಿ 33 ಮನೆಗಳು, ಹಲವಾರು ಅಂಗಡಿಗಳು ಮತ್ತು ದನದ ಕೊಟ್ಟಿಗೆಗಳು ನಾಶವಾಗಿವೆ. ಹದಿನಾಲ್ಕು ಜನರು ಕಾಣೆಯಾಗಿದ್ದಾರೆ/ ಸುಮಾರು 20 ಜನರು ಗಾಯಗೊಂಡಿದ್ದಾರೆ’ಎಂದು ಅವರು ಹೇಳಿದ್ದಾರೆ.</p><p>ಮಳೆ ಸಂಬಂಧಿತ ಅವಘಡಗಳಲ್ಲಿ 200ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್ಡಿಆರ್ಎಫ್) ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ತಲುಪಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಧಾಮಿ ತಿಳಿಸಿದ್ದಾರೆ.</p><p>ತಲೆಗೆ ಪೆಟ್ಟು ಬಿದ್ದಿರುವ ಮಗು ಸೇರಿದಂತೆ ಗಂಭೀರವಾಗಿ ಗಾಯಗೊಂಡವರನ್ನು ಹೃಷಿಕೇಶದ ಏಮ್ಸ್ಗೆ ವಿಮಾನದ ಮೂಲಕ ಸಾಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p> ಡೆಹ್ರಾಡೂನ್ನ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಚಮೋಲಿ ಜಿಲ್ಲಾಧಿಕಾರಿ ಸಂದೀಪ್ ತಿವಾರಿ ಅವರೊಂದಿಗೆ ಮಾತನಾಡುವ ಮೂಲಕ ನಂದನಗರದ ಪರಿಸ್ಥಿತಿಯನ್ನು ಸಿಎಂ ಅವಲೋಕಿಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.</p><p>ಕೂಡಲೇ ರಸ್ತೆಗಳ ದುರಸ್ಥಿ, ಕುಡಿಯುವ ನೀರು ಪೂರೈಕೆ ಮತ್ತು ವಿದ್ಯುತ್ ಸಂಪರ್ಕ ಒದಗಿಸಲು ಬೇಕಾದ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪೇಶ್ವರ(ಉತ್ತರಾಖಂಡ)</strong>: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ ನಾಲ್ಕು ಹಳ್ಳಿಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಭೂಕುಸಿತ ಸಂಭವಿಸಿದ್ದು, 30ಕ್ಕೂ ಅಧಿಕ ಮನೆಗಳು ಉರುಳಿವೆ. 14 ಮಂದಿ ನಾಪತ್ತೆಯಾಗಿದ್ದು, ಅವರು ಮಣ್ಣಿನಡಿ ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಇನ್ನೂ 20 ಮಂದಿಗೆ ಗಾಯಗಳಾಗಿವೆ.</p><p>ಈ ನಾಲ್ಕು ಹಳ್ಳಿಗಳು ನಂದನಗರ ಪ್ರದೇಶದಲ್ಲಿ ಬರುತ್ತಿದ್ದು, ಡೆಹ್ರಾಡೂನ್ನಿಂದ 260 ಕಿ.ಮೀ ಮತ್ತು ಚಮೋಲಿಯಿಂದ 50 ಕಿ.ಮೀ ದೂರದಲ್ಲಿವೆ. ನಂದನಗರ ಪ್ರದೇಶದಲ್ಲಿ ಭೂಕುಸಿತವು ಈಗಾಗಲೇ ಭಾರಿ ಅವಾಂತರ ಸೃಷ್ಟಿಸಿದೆ.</p><p>ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.</p><p>'ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ಭಾರಿ ಮಳೆಯಿಂದಾಗಿ 33 ಮನೆಗಳು, ಹಲವಾರು ಅಂಗಡಿಗಳು ಮತ್ತು ದನದ ಕೊಟ್ಟಿಗೆಗಳು ನಾಶವಾಗಿವೆ. ಹದಿನಾಲ್ಕು ಜನರು ಕಾಣೆಯಾಗಿದ್ದಾರೆ/ ಸುಮಾರು 20 ಜನರು ಗಾಯಗೊಂಡಿದ್ದಾರೆ’ಎಂದು ಅವರು ಹೇಳಿದ್ದಾರೆ.</p><p>ಮಳೆ ಸಂಬಂಧಿತ ಅವಘಡಗಳಲ್ಲಿ 200ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್ಡಿಆರ್ಎಫ್) ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ತಲುಪಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಧಾಮಿ ತಿಳಿಸಿದ್ದಾರೆ.</p><p>ತಲೆಗೆ ಪೆಟ್ಟು ಬಿದ್ದಿರುವ ಮಗು ಸೇರಿದಂತೆ ಗಂಭೀರವಾಗಿ ಗಾಯಗೊಂಡವರನ್ನು ಹೃಷಿಕೇಶದ ಏಮ್ಸ್ಗೆ ವಿಮಾನದ ಮೂಲಕ ಸಾಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p> ಡೆಹ್ರಾಡೂನ್ನ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಚಮೋಲಿ ಜಿಲ್ಲಾಧಿಕಾರಿ ಸಂದೀಪ್ ತಿವಾರಿ ಅವರೊಂದಿಗೆ ಮಾತನಾಡುವ ಮೂಲಕ ನಂದನಗರದ ಪರಿಸ್ಥಿತಿಯನ್ನು ಸಿಎಂ ಅವಲೋಕಿಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.</p><p>ಕೂಡಲೇ ರಸ್ತೆಗಳ ದುರಸ್ಥಿ, ಕುಡಿಯುವ ನೀರು ಪೂರೈಕೆ ಮತ್ತು ವಿದ್ಯುತ್ ಸಂಪರ್ಕ ಒದಗಿಸಲು ಬೇಕಾದ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>