<p><strong>ಡೆಹ್ರಾಡೂನ್:</strong> ಉತ್ತರಾಖಂಡದ ಪ್ರವಾಹಪೀಡಿತ ಪ್ರದೇಶಗಳಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) 300 ಮಂದಿಯನ್ನು ರಕ್ಷಿಸಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.</p>.<p>ರಾಜ್ಯದಲ್ಲಿ ಎನ್ಡಿಆರ್ಎಫ್ನ 15 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಕುಮಾವೂಂ ಪ್ರದೇಶದಲ್ಲಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಭೂಕುಸಿತದಿಂದ ಅನೇಕ ಮನೆಗಳು ಕುಸಿದುಬಿದ್ದಿವೆ. ಅನೇಕ ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.</p>.<p>‘ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಉಧಾಮ್ ಸಿಂಗ್ ನಗರ ಜಿಲ್ಲೆ ಮತ್ತು ಇತರ ಪ್ರವಾಹಪೀಡಿತ ಪ್ರದೇಶಗಳಿಂದ ನಮ್ಮ ತಂಡಗಳು 300ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿವೆ’ ಎಂದು ಎನ್ಡಿಆರ್ಎಫ್ ವಕ್ತಾರರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-speaks-to-cm-dhami-bhatt-as-heavy-rains-lash-uttarakhand-876695.html" itemprop="url">ಉತ್ತರಾಖಂಡದಲ್ಲಿ ಪ್ರವಾಹ: ಸಿಎಂ ಜೊತೆ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕನ</a></p>.<p>ಉಧಾಮ್ ಸಿಂಗ್ ನಗರದಲ್ಲಿ ಆರು ತಂಡಗಳು, ಉತ್ತರಕಾಶಿ ಮತ್ತು ಚಮೋಲಿಯಲ್ಲಿ ತಲಾ ಎರಡು ತಂಡಗಳು, ಡೆಹ್ರಾಡೂನ್, ಪಿತೋರಗಡ ಹಾಗೂ ಹರಿದ್ವಾರಗಳಲ್ಲಿ ತಲಾ ಒಂದು ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಇನ್ನೆರಡು ತಂಡಗಳನ್ನು ನೈನಿತಾಲ್ ಮತ್ತು ಅಲ್ಮೋರಾದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದೆಹಲಿಯಲ್ಲಿ 24x7 ಸಹಾಯವಾಣಿ ತೆರೆಯಲಾಗಿದ್ದು, ರಾಜ್ಯದ ಅಧಿಕಾರಿಗಳ ಜತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ಜನಪ್ರಿಯ ಪ್ರವಾಸಿ ತಾಣವಾಗಿರುವ ನೈನಿತಾಲ್ ಸಂಪರ್ಕಿಸುವ ಮೂರೂ ರಸ್ತೆಗಳು ಕುಸಿದಿವೆ. ಹೀಗಾಗಿ ನೈನಿತಾಲ್ಗೆ ಇರುವ ಎಲ್ಲ ರಸ್ತೆ ಸಂಪರ್ಕಗಳೂ ಸಂಪೂರ್ಣ ಕಡಿತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಉತ್ತರಾಖಂಡದ ಪ್ರವಾಹಪೀಡಿತ ಪ್ರದೇಶಗಳಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) 300 ಮಂದಿಯನ್ನು ರಕ್ಷಿಸಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.</p>.<p>ರಾಜ್ಯದಲ್ಲಿ ಎನ್ಡಿಆರ್ಎಫ್ನ 15 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಕುಮಾವೂಂ ಪ್ರದೇಶದಲ್ಲಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಭೂಕುಸಿತದಿಂದ ಅನೇಕ ಮನೆಗಳು ಕುಸಿದುಬಿದ್ದಿವೆ. ಅನೇಕ ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.</p>.<p>‘ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಉಧಾಮ್ ಸಿಂಗ್ ನಗರ ಜಿಲ್ಲೆ ಮತ್ತು ಇತರ ಪ್ರವಾಹಪೀಡಿತ ಪ್ರದೇಶಗಳಿಂದ ನಮ್ಮ ತಂಡಗಳು 300ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿವೆ’ ಎಂದು ಎನ್ಡಿಆರ್ಎಫ್ ವಕ್ತಾರರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-speaks-to-cm-dhami-bhatt-as-heavy-rains-lash-uttarakhand-876695.html" itemprop="url">ಉತ್ತರಾಖಂಡದಲ್ಲಿ ಪ್ರವಾಹ: ಸಿಎಂ ಜೊತೆ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕನ</a></p>.<p>ಉಧಾಮ್ ಸಿಂಗ್ ನಗರದಲ್ಲಿ ಆರು ತಂಡಗಳು, ಉತ್ತರಕಾಶಿ ಮತ್ತು ಚಮೋಲಿಯಲ್ಲಿ ತಲಾ ಎರಡು ತಂಡಗಳು, ಡೆಹ್ರಾಡೂನ್, ಪಿತೋರಗಡ ಹಾಗೂ ಹರಿದ್ವಾರಗಳಲ್ಲಿ ತಲಾ ಒಂದು ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಇನ್ನೆರಡು ತಂಡಗಳನ್ನು ನೈನಿತಾಲ್ ಮತ್ತು ಅಲ್ಮೋರಾದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದೆಹಲಿಯಲ್ಲಿ 24x7 ಸಹಾಯವಾಣಿ ತೆರೆಯಲಾಗಿದ್ದು, ರಾಜ್ಯದ ಅಧಿಕಾರಿಗಳ ಜತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ಜನಪ್ರಿಯ ಪ್ರವಾಸಿ ತಾಣವಾಗಿರುವ ನೈನಿತಾಲ್ ಸಂಪರ್ಕಿಸುವ ಮೂರೂ ರಸ್ತೆಗಳು ಕುಸಿದಿವೆ. ಹೀಗಾಗಿ ನೈನಿತಾಲ್ಗೆ ಇರುವ ಎಲ್ಲ ರಸ್ತೆ ಸಂಪರ್ಕಗಳೂ ಸಂಪೂರ್ಣ ಕಡಿತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>