<p><strong>ಉತ್ತರಕಾಶಿ</strong>: ಪ್ರವಾಹ ಪೀಡಿತ ಉತ್ತರಕಾಶಿಯ ಧರಾಲಿಯಲ್ಲಿ ಭಾರಿ ಮಳೆಯಿಂದಾಗಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಅಲ್ಮೋರಾ, ಡೆಹ್ರಾಡೂನ್, ಹರಿದ್ವಾರ, ನೈನಿತಾಲ್, ಪೌರಿ ಮತ್ತು ಉಧಮ್ ಸಿಂಗ್ ನಗರ ಸೇರಿದಂತೆ ಕೆಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ 'ರೆಡ್' ಅಲರ್ಟ್ ಘೋಷಿಸಿದೆ .</p><p>ಪ್ರತಿಕೂಲ ಹವಾಮಾನ ಪರಿಣಾಮದಿಂದಾಗಿ ನಾಪತ್ತೆಯಾದ ಜನರ ಶೋಧ ಕಾರ್ಯಾಚರಣೆ ನಿಧಾನಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Video | ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೊ ರೈಲು: ಫಸ್ಟ್ ಡೇ ಪ್ರಯಾಣದ ಸಡಗರ.'ಕೂಲಿ' ಚಿತ್ರಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? . <p>ಭಾರಿ ಮಳೆಯಿಂದಾಗಿ 42 ಮಂದಿ ನಾಪತ್ತೆಯಾಗಿದ್ದು, ಈ ಪೈಕಿ ಧರಾಲಿ ಗ್ರಾಮದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.</p><p>ಹೆಲಿಕಾಪ್ಟರ್ ಬಳಸಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯ ಮೂಲಕ ಹೊರಗಿನವರು, ಸ್ಥಳೀಯರು ಸೇರಿದಂತೆ ಒಟ್ಟು 1,278 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.</p><p>ಕಾಣೆಯಾದ 42 ಜನರ ಪೈಕಿ ಒಂಬತ್ತು ಮಂದಿ ಸೇನಾ ಸಿಬ್ಬಂದಿ, ಧರಾಲಿ ಗ್ರಾಮದ ಎಂಟು ಜನರು, ಹತ್ತಿರದ ಪ್ರದೇಶಗಳ ಐವರು, ತೆಹ್ರಿ ಜಿಲ್ಲೆಯ ಒಬ್ಬರು, ಬಿಹಾರದ 13 ಮತ್ತು ಉತ್ತರ ಪ್ರದೇಶದ ಆರು ಜನರು ಸೇರಿದ್ದಾರೆ ಎಂದು ಪಾಂಡೆ ಹೇಳಿದ್ದಾರೆ.</p>.ಚುನಾವಣೆ ನಡೆಯುವ ತನಕ ಬಿಬಿಎಂಪಿ ಕಾಯ್ದೆಯೇ ಮುಂದುವರಿಯಲಿದೆ: ಅಡ್ವೊಕೇಟ್ ಜನರಲ್ .ಬೆಂಗಳೂರು: ಬೀದಿ ನಾಯಿಗಳ ಹುಚ್ಚಾಟ, ಜನರಿಗೆ ಪ್ರಾಣ ಸಂಕಟ. <p>ಕಳೆದ ಒಂದು ವಾರದ ಹಿಂದೆ ಸುರಿದ ಮಳೆಯಿಂದಾಗಿ ಗಂಗೋತ್ರಿಗೆ ಹೋಗುವ ದಾರಿಯಲ್ಲಿ ಧರಾಲಿ ಗ್ರಾಮದ ಅರ್ಧದಷ್ಟು ಭಾಗ ಮುಳುಗಿದೆ.</p><p>ಆಗಸ್ಟ್ 13 ರಿಂದ 15ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p><p>ಡೆಹ್ರಾಡೂನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂಧು ಅಧಿಕಾರಿಗಳು ಹೇಳಿದ್ದಾರೆ.</p>.ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಟಿಕೆಟ್ ದರ ₹2,000!.‘ಏಳುಮಲೆ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ .ಮನೋರಂಜನ್ ರವಿಚಂದ್ರನ್ ನಟನೆಯ ಹೊಸ ಸಿನಿಮಾಗೆ ಬೃಂದಾ ಜೋಡಿ .ಧ್ರುವಗೆ ನೋಟಿಸ್| ನನ್ನನ್ನು ಕನ್ನಡ ವಿರೋಧಿ ಎಂದು ಬಿಂಬಿಸಲು ಯತ್ನ: ರಾಘವೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉತ್ತರಕಾಶಿ</strong>: ಪ್ರವಾಹ ಪೀಡಿತ ಉತ್ತರಕಾಶಿಯ ಧರಾಲಿಯಲ್ಲಿ ಭಾರಿ ಮಳೆಯಿಂದಾಗಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಅಲ್ಮೋರಾ, ಡೆಹ್ರಾಡೂನ್, ಹರಿದ್ವಾರ, ನೈನಿತಾಲ್, ಪೌರಿ ಮತ್ತು ಉಧಮ್ ಸಿಂಗ್ ನಗರ ಸೇರಿದಂತೆ ಕೆಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ 'ರೆಡ್' ಅಲರ್ಟ್ ಘೋಷಿಸಿದೆ .</p><p>ಪ್ರತಿಕೂಲ ಹವಾಮಾನ ಪರಿಣಾಮದಿಂದಾಗಿ ನಾಪತ್ತೆಯಾದ ಜನರ ಶೋಧ ಕಾರ್ಯಾಚರಣೆ ನಿಧಾನಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Video | ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೊ ರೈಲು: ಫಸ್ಟ್ ಡೇ ಪ್ರಯಾಣದ ಸಡಗರ.'ಕೂಲಿ' ಚಿತ್ರಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? . <p>ಭಾರಿ ಮಳೆಯಿಂದಾಗಿ 42 ಮಂದಿ ನಾಪತ್ತೆಯಾಗಿದ್ದು, ಈ ಪೈಕಿ ಧರಾಲಿ ಗ್ರಾಮದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.</p><p>ಹೆಲಿಕಾಪ್ಟರ್ ಬಳಸಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯ ಮೂಲಕ ಹೊರಗಿನವರು, ಸ್ಥಳೀಯರು ಸೇರಿದಂತೆ ಒಟ್ಟು 1,278 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.</p><p>ಕಾಣೆಯಾದ 42 ಜನರ ಪೈಕಿ ಒಂಬತ್ತು ಮಂದಿ ಸೇನಾ ಸಿಬ್ಬಂದಿ, ಧರಾಲಿ ಗ್ರಾಮದ ಎಂಟು ಜನರು, ಹತ್ತಿರದ ಪ್ರದೇಶಗಳ ಐವರು, ತೆಹ್ರಿ ಜಿಲ್ಲೆಯ ಒಬ್ಬರು, ಬಿಹಾರದ 13 ಮತ್ತು ಉತ್ತರ ಪ್ರದೇಶದ ಆರು ಜನರು ಸೇರಿದ್ದಾರೆ ಎಂದು ಪಾಂಡೆ ಹೇಳಿದ್ದಾರೆ.</p>.ಚುನಾವಣೆ ನಡೆಯುವ ತನಕ ಬಿಬಿಎಂಪಿ ಕಾಯ್ದೆಯೇ ಮುಂದುವರಿಯಲಿದೆ: ಅಡ್ವೊಕೇಟ್ ಜನರಲ್ .ಬೆಂಗಳೂರು: ಬೀದಿ ನಾಯಿಗಳ ಹುಚ್ಚಾಟ, ಜನರಿಗೆ ಪ್ರಾಣ ಸಂಕಟ. <p>ಕಳೆದ ಒಂದು ವಾರದ ಹಿಂದೆ ಸುರಿದ ಮಳೆಯಿಂದಾಗಿ ಗಂಗೋತ್ರಿಗೆ ಹೋಗುವ ದಾರಿಯಲ್ಲಿ ಧರಾಲಿ ಗ್ರಾಮದ ಅರ್ಧದಷ್ಟು ಭಾಗ ಮುಳುಗಿದೆ.</p><p>ಆಗಸ್ಟ್ 13 ರಿಂದ 15ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p><p>ಡೆಹ್ರಾಡೂನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂಧು ಅಧಿಕಾರಿಗಳು ಹೇಳಿದ್ದಾರೆ.</p>.ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಟಿಕೆಟ್ ದರ ₹2,000!.‘ಏಳುಮಲೆ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ .ಮನೋರಂಜನ್ ರವಿಚಂದ್ರನ್ ನಟನೆಯ ಹೊಸ ಸಿನಿಮಾಗೆ ಬೃಂದಾ ಜೋಡಿ .ಧ್ರುವಗೆ ನೋಟಿಸ್| ನನ್ನನ್ನು ಕನ್ನಡ ವಿರೋಧಿ ಎಂದು ಬಿಂಬಿಸಲು ಯತ್ನ: ರಾಘವೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>