<p><strong>ಗೋಪೇಶ್ವರ</strong>: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದಾಗಿ ಮೃತಪಟ್ಟ ಐವರ ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ಎರಡು ಮೃತದೇಹಗಳನ್ನು ರಕ್ಷಣಾ ತಂಡಗಳು ನಿನ್ನೆ (ಗುರುವಾರ) ಹೊರತೆಗೆದಿದ್ದವು.</p><p>ಚಮೋಲಿ ಜಿಲ್ಲೆಯ ನಾಲ್ಕು ಹಳ್ಳಿಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಭೂಕುಸಿತ ಸಂಭವಿಸಿದ್ದು, 30ಕ್ಕೂ ಅಧಿಕ ಮನೆಗಳು ಉರುಳಿವೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಅವರು ಮಣ್ಣಿನಡಿ ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಇನ್ನೂ 20 ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.</p>.ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ: ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು.ಸ್ವಾತಂತ್ರ್ಯ ಯೋಧರಿಗೆ ಸಿಗದ ಗೌರವಧನ: 29 ಎ.ಸಿ.ಗಳ ವಿರುದ್ಧ ‘ಸುಮೊಟೊ’ ಪ್ರಕರಣ. <p>ಗುರುವಾರ, ಕುಂತರಿ ಲಗಾಫಾಲಿ ಮತ್ತು ಧುರ್ಮಾ ಗ್ರಾಮಗಳಿಂದ ರಕ್ಷಿಸಲ್ಪಟ್ಟ ಅನೇಕ ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರು ಋಷಿಕೇಶದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಶಿಬಿರಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ.ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದರು.</p>.ಕಾಂಗ್ರೆಸ್ ಸೋಲಿಗೆ ರಾಹುಲ್ ನಾಯಕತ್ವ ಕಾರಣ| ಚುನಾವಣಾ ಆಯೋಗವಲ್ಲ: ಸಚಿವ ರಿಜಿಜು .ಭಾರತದಲ್ಲಿ 20 ವಿಕೆಟ್ ಪಡೆಯುವ ಸಾಮರ್ಥ್ಯ ನಮ್ಮ ವೇಗಿಗಳಿಗಿದೆ: ವಿಂಡೀಸ್ ಕೋಚ್. <p>ಈ ನಾಲ್ಕು ಹಳ್ಳಿಗಳು ನಂದನಗರ ಪ್ರದೇಶದಲ್ಲಿ ಬರುತ್ತಿದ್ದು, ಡೆಹ್ರಾಡೂನ್ನಿಂದ 260 ಕಿ.ಮೀ ಮತ್ತು ಚಮೋಲಿಯಿಂದ 50 ಕಿ.ಮೀ ದೂರದಲ್ಲಿವೆ. ನಂದನಗರ ಪ್ರದೇಶದಲ್ಲಿ ಭೂಕುಸಿತವು ಈಗಾಗಲೇ ಭಾರಿ ಅವಾಂತರ ಸೃಷ್ಟಿಸಿದೆ.</p><p>ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಧಾಮಿ ಹೇಳಿದ್ದರು.</p>.ಪಾಕ್ ಮೇಲಿನ ಪ್ರೀತಿ: ಮುಂಬೈ ದಾಳಿ ಬಳಿಕವೂ ಕ್ರಮ ಕೈಗೊಳ್ಳದ ಕಾಂಗ್ರೆಸ್: BJP.ಸಲ್ಮಾನ್ ಖಾನ್ ನಟನೆಯ 'ಬ್ಯಾಟಲ್ ಆಫ್ ಗಾಲ್ವಾನ್' ಚಿತ್ರೀಕರಣ ಪೂರ್ಣ.ಅಕ್ಷಯ್ ಕುಮಾರ್ ನಟನೆಯ ‘ಜಾಲಿ ಎಲ್ಎಲ್ಬಿ3‘ ಸಿನಿಮಾಕ್ಕೆ ಅಭಿಮಾನಿಗಳ ಮೆಚ್ಚುಗೆ .ಕಾಂತಾರ– ಅಧ್ಯಾಯ 1: ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ನಿಗದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪೇಶ್ವರ</strong>: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದಾಗಿ ಮೃತಪಟ್ಟ ಐವರ ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ಎರಡು ಮೃತದೇಹಗಳನ್ನು ರಕ್ಷಣಾ ತಂಡಗಳು ನಿನ್ನೆ (ಗುರುವಾರ) ಹೊರತೆಗೆದಿದ್ದವು.</p><p>ಚಮೋಲಿ ಜಿಲ್ಲೆಯ ನಾಲ್ಕು ಹಳ್ಳಿಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಭೂಕುಸಿತ ಸಂಭವಿಸಿದ್ದು, 30ಕ್ಕೂ ಅಧಿಕ ಮನೆಗಳು ಉರುಳಿವೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಅವರು ಮಣ್ಣಿನಡಿ ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಇನ್ನೂ 20 ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.</p>.ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ: ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು.ಸ್ವಾತಂತ್ರ್ಯ ಯೋಧರಿಗೆ ಸಿಗದ ಗೌರವಧನ: 29 ಎ.ಸಿ.ಗಳ ವಿರುದ್ಧ ‘ಸುಮೊಟೊ’ ಪ್ರಕರಣ. <p>ಗುರುವಾರ, ಕುಂತರಿ ಲಗಾಫಾಲಿ ಮತ್ತು ಧುರ್ಮಾ ಗ್ರಾಮಗಳಿಂದ ರಕ್ಷಿಸಲ್ಪಟ್ಟ ಅನೇಕ ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರು ಋಷಿಕೇಶದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಶಿಬಿರಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ.ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದರು.</p>.ಕಾಂಗ್ರೆಸ್ ಸೋಲಿಗೆ ರಾಹುಲ್ ನಾಯಕತ್ವ ಕಾರಣ| ಚುನಾವಣಾ ಆಯೋಗವಲ್ಲ: ಸಚಿವ ರಿಜಿಜು .ಭಾರತದಲ್ಲಿ 20 ವಿಕೆಟ್ ಪಡೆಯುವ ಸಾಮರ್ಥ್ಯ ನಮ್ಮ ವೇಗಿಗಳಿಗಿದೆ: ವಿಂಡೀಸ್ ಕೋಚ್. <p>ಈ ನಾಲ್ಕು ಹಳ್ಳಿಗಳು ನಂದನಗರ ಪ್ರದೇಶದಲ್ಲಿ ಬರುತ್ತಿದ್ದು, ಡೆಹ್ರಾಡೂನ್ನಿಂದ 260 ಕಿ.ಮೀ ಮತ್ತು ಚಮೋಲಿಯಿಂದ 50 ಕಿ.ಮೀ ದೂರದಲ್ಲಿವೆ. ನಂದನಗರ ಪ್ರದೇಶದಲ್ಲಿ ಭೂಕುಸಿತವು ಈಗಾಗಲೇ ಭಾರಿ ಅವಾಂತರ ಸೃಷ್ಟಿಸಿದೆ.</p><p>ಕುಂತರಿ ಲಗಾಫಾಲಿ, ಕುಂತರಿ ಲಗಾಸರ್ಪಾನಿ, ಸೆರಾ ಮತ್ತು ಧುರ್ಮಾ ಗ್ರಾಮಗಳಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಧಾಮಿ ಹೇಳಿದ್ದರು.</p>.ಪಾಕ್ ಮೇಲಿನ ಪ್ರೀತಿ: ಮುಂಬೈ ದಾಳಿ ಬಳಿಕವೂ ಕ್ರಮ ಕೈಗೊಳ್ಳದ ಕಾಂಗ್ರೆಸ್: BJP.ಸಲ್ಮಾನ್ ಖಾನ್ ನಟನೆಯ 'ಬ್ಯಾಟಲ್ ಆಫ್ ಗಾಲ್ವಾನ್' ಚಿತ್ರೀಕರಣ ಪೂರ್ಣ.ಅಕ್ಷಯ್ ಕುಮಾರ್ ನಟನೆಯ ‘ಜಾಲಿ ಎಲ್ಎಲ್ಬಿ3‘ ಸಿನಿಮಾಕ್ಕೆ ಅಭಿಮಾನಿಗಳ ಮೆಚ್ಚುಗೆ .ಕಾಂತಾರ– ಅಧ್ಯಾಯ 1: ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ನಿಗದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>