<p><strong>ಗೋಪೇಶ್ವರ</strong>: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಈಚೆಗೆ ಸಂಭವಿಸಿದ್ದ ಹಿಮಕುಸಿತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. </p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಅವರು ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.</p><p>‘ಜ್ಯೋತಿರ್ಮಠದ ಉಪ ವಿಭಾಗಾಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, 15 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.</p><p>ಮಾಣಾ ಮತ್ತು ಬದರೀನಾಥದ ನಡುವೆ ಇರುವ ಗಡಿ ರಸ್ತೆಗಳ ಸಂಸ್ಥೆಯ (ಬಿಆರ್ಒ) ಶಿಬಿರದಲ್ಲಿ ಶುಕ್ರವಾರ ಮುಂಜಾನೆ ಹಿಮಕುಸಿತ ಉಂಟಾಗಿತ್ತು. ಹಿಮಕುಸಿತವಾಗಿದ್ದರಿಂದ 54 ಮಂದಿ ಸಿಲುಕಿದ್ದರು. 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. 60 ಗಂಟೆಗಳ ರಕ್ಷಣಾ ಕಾರ್ಯಾಚರಣೆಯನ್ನು ಅಧಿಕಾರಿಗಳು ಭಾನುವಾರ ಅಂತ್ಯಗೊಳಿಸಿದ್ದರು. </p><p>ಹಿಮಕುಸಿತ ಸಂಭವಿಸುತ್ತಿದ್ದಂತೆ, ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಇಂಡೋ–ಟಿಬೆಟಿಯನ್ ಪಡೆ, ಬಿಆರ್ಒ, ಜಿಲ್ಲಾಡಳಿತ, ಆರೋಗ್ಯ ಹಾಗೂ ಆಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.</p><p>‘ಸೇನೆಯ 6 ಹೆಲಿಕಾಪ್ಟರ್, ಶ್ವಾನದಳ ಹಾಗೂ ಥರ್ಮಲ್ ಇಮೇಜಿಂಗ್ ತಂತ್ರಜ್ಞಾನ ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು’ ಎಂದು ಅಧಿಕಾರಿಗಳು ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪೇಶ್ವರ</strong>: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಈಚೆಗೆ ಸಂಭವಿಸಿದ್ದ ಹಿಮಕುಸಿತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. </p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಅವರು ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.</p><p>‘ಜ್ಯೋತಿರ್ಮಠದ ಉಪ ವಿಭಾಗಾಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, 15 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.</p><p>ಮಾಣಾ ಮತ್ತು ಬದರೀನಾಥದ ನಡುವೆ ಇರುವ ಗಡಿ ರಸ್ತೆಗಳ ಸಂಸ್ಥೆಯ (ಬಿಆರ್ಒ) ಶಿಬಿರದಲ್ಲಿ ಶುಕ್ರವಾರ ಮುಂಜಾನೆ ಹಿಮಕುಸಿತ ಉಂಟಾಗಿತ್ತು. ಹಿಮಕುಸಿತವಾಗಿದ್ದರಿಂದ 54 ಮಂದಿ ಸಿಲುಕಿದ್ದರು. 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. 60 ಗಂಟೆಗಳ ರಕ್ಷಣಾ ಕಾರ್ಯಾಚರಣೆಯನ್ನು ಅಧಿಕಾರಿಗಳು ಭಾನುವಾರ ಅಂತ್ಯಗೊಳಿಸಿದ್ದರು. </p><p>ಹಿಮಕುಸಿತ ಸಂಭವಿಸುತ್ತಿದ್ದಂತೆ, ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಇಂಡೋ–ಟಿಬೆಟಿಯನ್ ಪಡೆ, ಬಿಆರ್ಒ, ಜಿಲ್ಲಾಡಳಿತ, ಆರೋಗ್ಯ ಹಾಗೂ ಆಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.</p><p>‘ಸೇನೆಯ 6 ಹೆಲಿಕಾಪ್ಟರ್, ಶ್ವಾನದಳ ಹಾಗೂ ಥರ್ಮಲ್ ಇಮೇಜಿಂಗ್ ತಂತ್ರಜ್ಞಾನ ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು’ ಎಂದು ಅಧಿಕಾರಿಗಳು ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>