<p><strong>ಹಲ್ದ್ವಾನಿ (ಉತ್ತರಾಖಂಡ):</strong> ಹಿಂಸಾಚಾರ ಪೀಡಿತ ಬನ್ಭೂಲ್ಪುರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದ್ದು, ಸೋಮವಾರ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕರ್ಫ್ಯೂ ಪೀಡಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು’ ಎಂದು ನೈನಿತಾಲ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ ಹೇಳಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಬನ್ಭೂಲ್ಪುರದ ಸೂಕ್ಷ್ಮ ಪ್ರದೇಶದಲ್ಲಿ ಅರೆಸೇನಾ ಪಡೆಯ ಒಂದು ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಫೆ. 8ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಹಲ್ದ್ವಾನಿ ಸಹಜ ಸ್ಥಿತಿಗೆ ಮರಳಿದೆ. ಬನ್ಭೂಲ್ಪುರದಲ್ಲಿ 120 ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ’ ಎಂದು ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಸಿಂಗ್ ಹೇಳಿದ್ದಾರೆ.</p>.ಹಲ್ದ್ವಾನಿ ಹಿಂಸಾಚಾರ: ಕೆಲವೆಡೆ ಕರ್ಫ್ಯೂ ತೆರವು.<p>‘ಬನ್ಭೂಲ್ಪುರ ಹೊರತುಪಡಿಸಿ ಹಲ್ದ್ವಾನಿಯ ಉಳಿದ ಪ್ರದೇಶಗಳಲ್ಲಿ ಭಾನುವಾರ ಕರ್ಫ್ಯೂ ಹಿಂಪಡೆಯಲಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಔಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಮನೆಗಳಿಗೆ ಗ್ಯಾಸ್ ಸಿಲಿಂಡರ್ ಪೂರೈಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟಗಾರರ ಮೂಲಕ ಸ್ಥಳೀಯ ನಿವಾಸಿಗಳಿಗೆ ತಲುಪಿಸಲಾಗುತ್ತಿದೆ’ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಕ್ರಮವಾಗಿ ನಿರ್ಮಾಣಗೊಂಡಿದ್ದ ಮದರಸಾ ಹಾಗೂ ನಮಾಜ್ ಮಾಡುವ ಸ್ಥಳವನ್ನು ಫೆ. 8ರಂದು ನೆಲಸಮಗೊಳಿಸುವಾಗ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳನ್ನು ಬಂಧಿಸಲು ವಿವಿಧೆಡೆ ದಾಳಿ ನಡೆಸಲಾಗಿದೆ.</p>.ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲ್ದ್ವಾನಿ (ಉತ್ತರಾಖಂಡ):</strong> ಹಿಂಸಾಚಾರ ಪೀಡಿತ ಬನ್ಭೂಲ್ಪುರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದ್ದು, ಸೋಮವಾರ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕರ್ಫ್ಯೂ ಪೀಡಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು’ ಎಂದು ನೈನಿತಾಲ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ ಹೇಳಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಬನ್ಭೂಲ್ಪುರದ ಸೂಕ್ಷ್ಮ ಪ್ರದೇಶದಲ್ಲಿ ಅರೆಸೇನಾ ಪಡೆಯ ಒಂದು ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಫೆ. 8ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಹಲ್ದ್ವಾನಿ ಸಹಜ ಸ್ಥಿತಿಗೆ ಮರಳಿದೆ. ಬನ್ಭೂಲ್ಪುರದಲ್ಲಿ 120 ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ’ ಎಂದು ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಸಿಂಗ್ ಹೇಳಿದ್ದಾರೆ.</p>.ಹಲ್ದ್ವಾನಿ ಹಿಂಸಾಚಾರ: ಕೆಲವೆಡೆ ಕರ್ಫ್ಯೂ ತೆರವು.<p>‘ಬನ್ಭೂಲ್ಪುರ ಹೊರತುಪಡಿಸಿ ಹಲ್ದ್ವಾನಿಯ ಉಳಿದ ಪ್ರದೇಶಗಳಲ್ಲಿ ಭಾನುವಾರ ಕರ್ಫ್ಯೂ ಹಿಂಪಡೆಯಲಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಔಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಮನೆಗಳಿಗೆ ಗ್ಯಾಸ್ ಸಿಲಿಂಡರ್ ಪೂರೈಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟಗಾರರ ಮೂಲಕ ಸ್ಥಳೀಯ ನಿವಾಸಿಗಳಿಗೆ ತಲುಪಿಸಲಾಗುತ್ತಿದೆ’ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಕ್ರಮವಾಗಿ ನಿರ್ಮಾಣಗೊಂಡಿದ್ದ ಮದರಸಾ ಹಾಗೂ ನಮಾಜ್ ಮಾಡುವ ಸ್ಥಳವನ್ನು ಫೆ. 8ರಂದು ನೆಲಸಮಗೊಳಿಸುವಾಗ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳನ್ನು ಬಂಧಿಸಲು ವಿವಿಧೆಡೆ ದಾಳಿ ನಡೆಸಲಾಗಿದೆ.</p>.ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>