<p><strong>ಡೆಹರಾಡೂನ್</strong>: ಉತ್ತರಾಖಂಡ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಅರಣ್ಯಗಳಿಂದ ಆವೃತ್ತವಾದ ಬೆಟ್ಟ–ಗುಡ್ಡದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಬಿಹಾರ ಮೂಲದ 21 ವರ್ಷದ ಮೂವರು ಯುವಕರನ್ನು ಪೊಲೀಸರು ರಕ್ಷಿಸಿದ್ದಾರೆ.</p><p>ರಕ್ಷಿಸಲ್ಪಟ್ಟವರನ್ನು ನಮನ್ ಯಾದವ್, ಆಧಿರಾಜ್, ಸಮೀರ್ ಕುಮಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ನಮನ್ ಯಾದವ್ಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಯುವಕರು ರುದ್ರಪ್ರಯಾಗ್ ಜಿಲ್ಲೆಯ ಕೇದಾರನಾಥ್ ದೇವಸ್ಥಾನ ಬಳಿಯ ದೇವೋರಿತಾಳ್–ಚೋಪ್ಟಾ ಟ್ರೆಕಿಂಗ್ ಪ್ರದೇಶದಲ್ಲಿ ಕಳೆದ ಶನಿವಾರ ಚಾರಣಕ್ಕೆ ಹೋಗಿದ್ದರು.</p><p>ಚಾರಣದ ಮುಕ್ತಾಯ ಕೇಂದ್ರಕ್ಕೆ ಈ ಯುವಕರು ವಾಪಸ್ ಬಾರದೇ ಇದ್ದಾಗ ಅರಣ್ಯ ಇಲಾಖೆಯ ಸಿಬ್ಬಂದಿ ರಾಜ್ಯ ವಿಪತ್ತು ಕಾರ್ಯನಿರ್ವಹಣೆ ಪಡೆಯ (ಎಸ್ಡಿಆರ್ಎಫ್) ಸಹಾಯದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಮೂರು ದಿನಗಳ ಬಳಿಕ ಯುವಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹರಾಡೂನ್</strong>: ಉತ್ತರಾಖಂಡ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಅರಣ್ಯಗಳಿಂದ ಆವೃತ್ತವಾದ ಬೆಟ್ಟ–ಗುಡ್ಡದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಬಿಹಾರ ಮೂಲದ 21 ವರ್ಷದ ಮೂವರು ಯುವಕರನ್ನು ಪೊಲೀಸರು ರಕ್ಷಿಸಿದ್ದಾರೆ.</p><p>ರಕ್ಷಿಸಲ್ಪಟ್ಟವರನ್ನು ನಮನ್ ಯಾದವ್, ಆಧಿರಾಜ್, ಸಮೀರ್ ಕುಮಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ನಮನ್ ಯಾದವ್ಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಯುವಕರು ರುದ್ರಪ್ರಯಾಗ್ ಜಿಲ್ಲೆಯ ಕೇದಾರನಾಥ್ ದೇವಸ್ಥಾನ ಬಳಿಯ ದೇವೋರಿತಾಳ್–ಚೋಪ್ಟಾ ಟ್ರೆಕಿಂಗ್ ಪ್ರದೇಶದಲ್ಲಿ ಕಳೆದ ಶನಿವಾರ ಚಾರಣಕ್ಕೆ ಹೋಗಿದ್ದರು.</p><p>ಚಾರಣದ ಮುಕ್ತಾಯ ಕೇಂದ್ರಕ್ಕೆ ಈ ಯುವಕರು ವಾಪಸ್ ಬಾರದೇ ಇದ್ದಾಗ ಅರಣ್ಯ ಇಲಾಖೆಯ ಸಿಬ್ಬಂದಿ ರಾಜ್ಯ ವಿಪತ್ತು ಕಾರ್ಯನಿರ್ವಹಣೆ ಪಡೆಯ (ಎಸ್ಡಿಆರ್ಎಫ್) ಸಹಾಯದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಮೂರು ದಿನಗಳ ಬಳಿಕ ಯುವಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>