<p><strong>ರಾಂಚಿ, ಭುವನೇಶ್ವರ್, ಗುವಾಹಟಿ:</strong> ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನ ಸಿಲುಕಿ ಹೊರ ಬಂದ 41 ಕಾರ್ಮಿಕರಲ್ಲಿ 21 ಕಾರ್ಮಿಕರು ನಿನ್ನೆ ಸಂಜೆ ತವರು ತಲುಪಿದರು.</p><p>ಜಾರ್ಖಂಡ್ನ 15 ಕಾರ್ಮಿಕರು ರಾಂಚಿ ವಿಮಾನ ನಿಲ್ದಾಣದ ಮೂಲಕ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ಈ ವೇಳೆ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರು ಕಾರ್ಮಿಕರನ್ನು ಸ್ವಾಗತಿಸಿದರು.</p><p>ಕಾರ್ಮಿಕರನ್ನು ಸನ್ಮಾನಿಸಿದ ಸೋರೆನ್ ಅವರು, ಕಾರ್ಮಿಕರ ಧೈರ್ಯವನ್ನು ಕೊಂಡಾಡಿ ಅವರನ್ನು ಅವರ ಊರುಗಳಿಗೆ ಬಿಳ್ಕೊಟ್ಟರು. ಈ ವೇಳೆ ಕಾರ್ಮಿಕರ ಕುಟುಂಬದವರು ಹಾಜರಿದ್ದರು.</p><p>ಒಡಿಶಾದ ಐವರು ಕಾರ್ಮಿಕರಲ್ಲಿ ನಾಲ್ವರು ಭುವನೇಶ್ವರ್ ವಿಮಾನ ನಿಲ್ದಾಣದ ಮೂಲಕ ತಮ್ಮ ಮನೆಗಳಿಗೆ ತೆರಳಿದರು. ಈ ವೇಳೆ ಸಿಎಂ ನವೀನ್ ಪಟ್ನಾಯಿಕ್ ಅವರು ಕಾರ್ಮಿಕರನ್ನು ಸ್ವಾಗತಿಸಿ ತಲಾ ₹2 ಲಕ್ಷದ ಜೊತೆ ಬಿಳ್ಕೊಟ್ಟರು.</p>.<p>ಅಸ್ಸಾಂನ ಇಬ್ಬರು ಕಾರ್ಮಿಕರು ಗುವಾಹಟಿ ವಿಮಾನ ನಿಲ್ದಾಣದ ಮೂಲಕ ಮನೆಗಳಿಗೆ ತೆರಳಿದರು. ಈ ವೇಳೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು.</p><p>ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಕಾಶಿಯ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ತವರಿಗೆ ಕಳುಹಿಸಲಾಯಿತು.</p><p>ಕೇಂದ್ರ ಸರ್ಕಾರದ ಚಾರ್ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ನ.12 ರಂದು ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರನ್ನು ಡಿ.28 ರಂದು ಸಂಜೆ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತರಲಾಯಿಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ, ಭುವನೇಶ್ವರ್, ಗುವಾಹಟಿ:</strong> ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನ ಸಿಲುಕಿ ಹೊರ ಬಂದ 41 ಕಾರ್ಮಿಕರಲ್ಲಿ 21 ಕಾರ್ಮಿಕರು ನಿನ್ನೆ ಸಂಜೆ ತವರು ತಲುಪಿದರು.</p><p>ಜಾರ್ಖಂಡ್ನ 15 ಕಾರ್ಮಿಕರು ರಾಂಚಿ ವಿಮಾನ ನಿಲ್ದಾಣದ ಮೂಲಕ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ಈ ವೇಳೆ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರು ಕಾರ್ಮಿಕರನ್ನು ಸ್ವಾಗತಿಸಿದರು.</p><p>ಕಾರ್ಮಿಕರನ್ನು ಸನ್ಮಾನಿಸಿದ ಸೋರೆನ್ ಅವರು, ಕಾರ್ಮಿಕರ ಧೈರ್ಯವನ್ನು ಕೊಂಡಾಡಿ ಅವರನ್ನು ಅವರ ಊರುಗಳಿಗೆ ಬಿಳ್ಕೊಟ್ಟರು. ಈ ವೇಳೆ ಕಾರ್ಮಿಕರ ಕುಟುಂಬದವರು ಹಾಜರಿದ್ದರು.</p><p>ಒಡಿಶಾದ ಐವರು ಕಾರ್ಮಿಕರಲ್ಲಿ ನಾಲ್ವರು ಭುವನೇಶ್ವರ್ ವಿಮಾನ ನಿಲ್ದಾಣದ ಮೂಲಕ ತಮ್ಮ ಮನೆಗಳಿಗೆ ತೆರಳಿದರು. ಈ ವೇಳೆ ಸಿಎಂ ನವೀನ್ ಪಟ್ನಾಯಿಕ್ ಅವರು ಕಾರ್ಮಿಕರನ್ನು ಸ್ವಾಗತಿಸಿ ತಲಾ ₹2 ಲಕ್ಷದ ಜೊತೆ ಬಿಳ್ಕೊಟ್ಟರು.</p>.<p>ಅಸ್ಸಾಂನ ಇಬ್ಬರು ಕಾರ್ಮಿಕರು ಗುವಾಹಟಿ ವಿಮಾನ ನಿಲ್ದಾಣದ ಮೂಲಕ ಮನೆಗಳಿಗೆ ತೆರಳಿದರು. ಈ ವೇಳೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು.</p><p>ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಕಾಶಿಯ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ತವರಿಗೆ ಕಳುಹಿಸಲಾಯಿತು.</p><p>ಕೇಂದ್ರ ಸರ್ಕಾರದ ಚಾರ್ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ನ.12 ರಂದು ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರನ್ನು ಡಿ.28 ರಂದು ಸಂಜೆ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತರಲಾಯಿಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>