ಉತ್ತರಕಾಶಿ: ದ್ರೌಪದಿ ಕಾ ದಂಡ ಶಿಖರದಲ್ಲಿ ಪ್ರತಿಕೂಲ ಹವಾಮಾನ ಸೃಷ್ಟಿಯಾಗಿರುವುದರಿಂದ ನಾಪತ್ತೆಯಾಗಿರುವ ಪರ್ವತಾರೋಹಿಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಶಿಖರದಲ್ಲಿ ಈಚೆಗೆ ಹಿಮಪಾತ ಸಂಭವಿಸಿದ ಪರಿಣಾಮ ನೆಹರೂ ಪರ್ವತಾರೋಹಣ ಸಂಸ್ಥೆಯ (ಎನ್ಐಎಂ) 29 ಮಂದಿ ಪರ್ವತಾರೋಹಿಗಳು ನಾಪತ್ತೆಯಾಗಿದ್ದರು. ಇವರಲ್ಲಿ 26 ಮಂದಿಯ ಮೃತದೇಹಗಳು ಪತ್ತೆಯಾಗಿವೆ.
ದ್ರೌಪದಿ ಕಾ ದಂಡ ಶಿಖರದಲ್ಲಿ ಭಾರಿ ಹಿಮಪಾತವಾಗುತ್ತಿರುವ ಕಾರಣ ಶೋಧ ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ದೇವೇಂದ್ರ ಪಟ್ವಾಲ್ ಹೇಳಿದ್ದಾರೆ.