<p><strong>ಉತ್ತರಕಾಶಿ (ಉತ್ತರಾಖಂಡ):</strong> ಉತ್ತರಕಾಶಿಯ ಧರೇಲಿ ಗ್ರಾಮದ ಗಂಗೋತ್ರಿ ಮಾರ್ಗದಲ್ಲಿ ಸಂಭವಿಸಿರುವ ಭೀಕರ ಮೇಘಸ್ಫೋಟದಲ್ಲಿ, ಗ್ರಾಮದಲ್ಲಿನ ಮನೆಗಳು, ಮರ– ಗಿಡಗಳು, ಕಾರುಗಳು ಕೊಚ್ಚಿಕೊಂಡು ಹೋಗಿವೆ. </p><p>ದುರಂತದಲ್ಲಿ 60–70 ಜನ ನಾಪತ್ತೆಯಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಐವರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇಘಸ್ಫೋಟದ ಭೀಕರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. </p><p>ಈ ವಿಡಿಯೊಗಳಲ್ಲಿ ‘ದಿ ಸಂಡೇ ಗಾರ್ಡಿಯನ್’ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಸರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ವ್ಯಕ್ತಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಹೊರಕ್ಕೆ ಬರುತ್ತಿರುವ ದೃಶ್ಯ ಸೆರೆಯಾಗಿದೆ. </p><p>ಎದೆ ಝಲ್ ಎನ್ನಿಸುವ ಈ ವಿಡಿಯೊದಲ್ಲಿ, ನೀರಿನಿಂದ ಕೂಡಿರುವ ಮಣ್ಣಿನರಾಶಿಯಲ್ಲಿ ತೆವಳುತ್ತಾ ವ್ಯಕ್ತಿಯೊಬ್ಬರು ಹೊರಬಂದಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಸಾವು ಸಮೀಪದಲ್ಲಿರುವಾಗ ಬದುಕಲೇ ಬೇಕನ್ನುವ ಕೊನೆ ಕ್ಷಣದ ಪ್ರಯತ್ನ ಎಂಬಂತಿದೆ ಎಂದು ವ್ಯಾಖ್ಯಾನಿಸಿದ್ದಾರೆ.</p>.<p>ಈ ಮೇಘಸ್ಫೋಟದಲ್ಲಿ ಹರಿದುಬಂದ ಅಪಾರ ಪ್ರಮಾಣದ ಕೆಸರು ಮಣ್ಣಿನಲ್ಲಿ ಅರ್ಧ ಗ್ರಾಮವೇ ಹೂತುಹೋಗಿರುವ ಸಾಧ್ಯತೆಯಿದ್ದು, ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉತ್ತರಕಾಶಿ (ಉತ್ತರಾಖಂಡ):</strong> ಉತ್ತರಕಾಶಿಯ ಧರೇಲಿ ಗ್ರಾಮದ ಗಂಗೋತ್ರಿ ಮಾರ್ಗದಲ್ಲಿ ಸಂಭವಿಸಿರುವ ಭೀಕರ ಮೇಘಸ್ಫೋಟದಲ್ಲಿ, ಗ್ರಾಮದಲ್ಲಿನ ಮನೆಗಳು, ಮರ– ಗಿಡಗಳು, ಕಾರುಗಳು ಕೊಚ್ಚಿಕೊಂಡು ಹೋಗಿವೆ. </p><p>ದುರಂತದಲ್ಲಿ 60–70 ಜನ ನಾಪತ್ತೆಯಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಐವರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇಘಸ್ಫೋಟದ ಭೀಕರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. </p><p>ಈ ವಿಡಿಯೊಗಳಲ್ಲಿ ‘ದಿ ಸಂಡೇ ಗಾರ್ಡಿಯನ್’ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಸರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ವ್ಯಕ್ತಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಹೊರಕ್ಕೆ ಬರುತ್ತಿರುವ ದೃಶ್ಯ ಸೆರೆಯಾಗಿದೆ. </p><p>ಎದೆ ಝಲ್ ಎನ್ನಿಸುವ ಈ ವಿಡಿಯೊದಲ್ಲಿ, ನೀರಿನಿಂದ ಕೂಡಿರುವ ಮಣ್ಣಿನರಾಶಿಯಲ್ಲಿ ತೆವಳುತ್ತಾ ವ್ಯಕ್ತಿಯೊಬ್ಬರು ಹೊರಬಂದಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಸಾವು ಸಮೀಪದಲ್ಲಿರುವಾಗ ಬದುಕಲೇ ಬೇಕನ್ನುವ ಕೊನೆ ಕ್ಷಣದ ಪ್ರಯತ್ನ ಎಂಬಂತಿದೆ ಎಂದು ವ್ಯಾಖ್ಯಾನಿಸಿದ್ದಾರೆ.</p>.<p>ಈ ಮೇಘಸ್ಫೋಟದಲ್ಲಿ ಹರಿದುಬಂದ ಅಪಾರ ಪ್ರಮಾಣದ ಕೆಸರು ಮಣ್ಣಿನಲ್ಲಿ ಅರ್ಧ ಗ್ರಾಮವೇ ಹೂತುಹೋಗಿರುವ ಸಾಧ್ಯತೆಯಿದ್ದು, ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>