<p><strong>ಉತ್ತರಕಾಶಿ:</strong> ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿದಿರುವ ನಿರ್ಮಾಣ ಹಂತದ ಸುರಂಗದೊಳಗೆ 40 ಕಾರ್ಮಿಕರು ಸಿಲುಕಿಕೊಂಡು 30 ಗಂಟೆಗಳು ಕಳೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರೊಂದಿಗೆ ಸಂವಹನವನ್ನೂ ಸಾಧಿಸಲಾಗಿದೆ ಎಂದು ಸರ್ಕಾರ ಸೋಮವಾರ ಹೇಳಿದೆ. </p><p>ಇಡೀ ರಾತ್ರಿ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರಗೆ ತರುವ ಮಾರ್ಗದ ನಿರ್ಮಾಣ ಕಾರ್ಯವೂ ನಡೆದಿದೆ. ಅವರಿಗೆ ಆಹಾರ ಹಾಗೂ ನೀರು ಪೂರೈಸಲಾಗಿದೆ ಎಂದು ಸಿಲ್ಕ್ಯಾರಾ ಪೊಲೀಸ್ ಠಾಣೆಯ ನಿಯಂತ್ರಣಾ ಕೊಠಡಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಮವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. </p><p>ಬಳಿಕ ಮಾತನಾಡಿದ ಅವರು, ‘ಸುರಂಗದ ಒಳಗೆ ಸಿಲುಕಿಕೊಂಡಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಆತಂಕಗೊಂಡಿರುವ ಕಾರ್ಮಿಕರ ಕುಟುಂಬದ ಸದಸ್ಯರಿಗೂ ಆತ್ಮಸ್ಥೈರ್ಯ ತುಂಬಲಾಗಿದೆ’ ಎಂದು ತಿಳಿಸಿದರು. </p><p>ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು.</p><p><strong>ಕಾರ್ಯಾಚರಣೆಗೆ ಅಡ್ಡಿ?: </strong>ಸುರಂಗದ ಒಳಗೆ ಮಣ್ಣು ಕುಸಿದು ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಹಾಗಾಗಿ, ಮಣ್ಣು ಕುಸಿದು ಬೀಳದಂತೆ ಕಾಂಕ್ರೀಟ್ ಸಿಂಪಡಿಸಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಎನ್ಎಚ್ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಖಾಲ್ಕೊ ತಿಳಿಸಿದ್ದಾರೆ. </p><p>‘ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ವಾಕಿಟಾಕಿ ಮೂಲಕ ಅವರ ಜೊತೆ ಹಲವು ಬಾರಿ ಸಂವಹನ ನಡೆಸಲಾಗಿದೆ’ ಎಂದರು. </p>.<h2>ಒಡಿಶಾ ಮುಖ್ಯಮಂತ್ರಿ ಆತಂಕ </h2><p><strong>ಭುವನೇಶ್ವರ</strong>: ಉತ್ತರಾಖಂಡದಲ್ಲಿ ಕುಸಿತಗೊಂಡಿರುವ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸ್ಥಿತಿಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸೋಮವಾರ ಆತಂಕ ವ್ಯಕ್ತಪಡಿಸಿದ್ದಾರೆ. </p><p>‘ಕುಸಿತಗೊಂಡಿರುವ ಸುರಂಗದಲ್ಲಿ ಸಿಲುಕಿರುವ ರಾಜ್ಯದ ಐವರು ಸೇರಿದಂತೆ 40 ಕಾರ್ಮಿಕರ ಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಆತಂಕವಾಗಿದೆ. ಈ ಎಲ್ಲ ಕಾರ್ಮಿಕರ ಸುರಕ್ಷತೆ ಮತ್ತು ಶೀಘ್ರ ರಕ್ಷಣೆಗೆ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. </p><p>ಉತ್ತರಕಾಶಿ ಜಿಲ್ಲೆಯ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ಪೈಕಿ ಐವರು ಒಡಿಶಾ ಮೂಲದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉತ್ತರಕಾಶಿ:</strong> ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿದಿರುವ ನಿರ್ಮಾಣ ಹಂತದ ಸುರಂಗದೊಳಗೆ 40 ಕಾರ್ಮಿಕರು ಸಿಲುಕಿಕೊಂಡು 30 ಗಂಟೆಗಳು ಕಳೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರೊಂದಿಗೆ ಸಂವಹನವನ್ನೂ ಸಾಧಿಸಲಾಗಿದೆ ಎಂದು ಸರ್ಕಾರ ಸೋಮವಾರ ಹೇಳಿದೆ. </p><p>ಇಡೀ ರಾತ್ರಿ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರಗೆ ತರುವ ಮಾರ್ಗದ ನಿರ್ಮಾಣ ಕಾರ್ಯವೂ ನಡೆದಿದೆ. ಅವರಿಗೆ ಆಹಾರ ಹಾಗೂ ನೀರು ಪೂರೈಸಲಾಗಿದೆ ಎಂದು ಸಿಲ್ಕ್ಯಾರಾ ಪೊಲೀಸ್ ಠಾಣೆಯ ನಿಯಂತ್ರಣಾ ಕೊಠಡಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಮವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. </p><p>ಬಳಿಕ ಮಾತನಾಡಿದ ಅವರು, ‘ಸುರಂಗದ ಒಳಗೆ ಸಿಲುಕಿಕೊಂಡಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಆತಂಕಗೊಂಡಿರುವ ಕಾರ್ಮಿಕರ ಕುಟುಂಬದ ಸದಸ್ಯರಿಗೂ ಆತ್ಮಸ್ಥೈರ್ಯ ತುಂಬಲಾಗಿದೆ’ ಎಂದು ತಿಳಿಸಿದರು. </p><p>ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು.</p><p><strong>ಕಾರ್ಯಾಚರಣೆಗೆ ಅಡ್ಡಿ?: </strong>ಸುರಂಗದ ಒಳಗೆ ಮಣ್ಣು ಕುಸಿದು ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಹಾಗಾಗಿ, ಮಣ್ಣು ಕುಸಿದು ಬೀಳದಂತೆ ಕಾಂಕ್ರೀಟ್ ಸಿಂಪಡಿಸಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಎನ್ಎಚ್ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಖಾಲ್ಕೊ ತಿಳಿಸಿದ್ದಾರೆ. </p><p>‘ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ವಾಕಿಟಾಕಿ ಮೂಲಕ ಅವರ ಜೊತೆ ಹಲವು ಬಾರಿ ಸಂವಹನ ನಡೆಸಲಾಗಿದೆ’ ಎಂದರು. </p>.<h2>ಒಡಿಶಾ ಮುಖ್ಯಮಂತ್ರಿ ಆತಂಕ </h2><p><strong>ಭುವನೇಶ್ವರ</strong>: ಉತ್ತರಾಖಂಡದಲ್ಲಿ ಕುಸಿತಗೊಂಡಿರುವ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸ್ಥಿತಿಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸೋಮವಾರ ಆತಂಕ ವ್ಯಕ್ತಪಡಿಸಿದ್ದಾರೆ. </p><p>‘ಕುಸಿತಗೊಂಡಿರುವ ಸುರಂಗದಲ್ಲಿ ಸಿಲುಕಿರುವ ರಾಜ್ಯದ ಐವರು ಸೇರಿದಂತೆ 40 ಕಾರ್ಮಿಕರ ಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಆತಂಕವಾಗಿದೆ. ಈ ಎಲ್ಲ ಕಾರ್ಮಿಕರ ಸುರಕ್ಷತೆ ಮತ್ತು ಶೀಘ್ರ ರಕ್ಷಣೆಗೆ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. </p><p>ಉತ್ತರಕಾಶಿ ಜಿಲ್ಲೆಯ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ಪೈಕಿ ಐವರು ಒಡಿಶಾ ಮೂಲದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>