<p><strong>ನವದೆಹಲಿ/ಚೆನ್ನೈ:</strong> ತಮಿಳುನಾಡಿನಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ಎಂಡಿಎಂಕೆ ಸ್ಥಾಪಕ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ವೈಕೊ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.</p>.<p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಅರ್ಜಿಯ ವಿಚಾರಣೆಯನ್ನು ಡಿ.2ಕ್ಕೆ ನಿಗದಿಪಡಿಸಿತು.</p>.<p>ಎಸ್ಐಆರ್ಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯು ಸಮಾನತೆಯ ಹಕ್ಕು, ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ನಿಬಂಧನೆಗಳು ಹಾಗೂ 1960ರ ಮತದಾರರ ನೋಂದಣಿ ನಿಯಮಗಳು ಸೇರಿದಂತೆ ವಿವಿಧ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವೈಕೊ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. </p>.<p><strong>ಶೇ 50ರಷ್ಟು ಮತದಾರರು ಅರ್ಜಿ ಹಿಂತಿರುಗಿಸಿಲ್ಲ:</strong> ಎಸ್ಐಆರ್ ಪ್ರಕ್ರಿಯೆ ತರಾತುರಿಯಲ್ಲಿ ಕೈಗೊಂಡಿರುವುದರಿಂದ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಮಾನಸಿಕ ಒತ್ತಡ ಉಂಟಾಗಿದೆ. ಶೇಕಡ 50ರಷ್ಟು ಮತದಾರರು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಇನ್ನೂ ವಾಪಸ್ ನೀಡಿಲ್ಲ ಎಂದು ತಮಿಳುನಾಡಿನ ಸಚಿವ ಎಸ್. ರಘುಪತಿ ಮಂಗಳವಾರ ಹೇಳಿದ್ದಾರೆ.</p>.<p>ಡಿ.4ರ ಗಡುವು ಸಮೀಪಿಸುತ್ತಿರುವುದರಿಂದ, ಎಸ್ಐಆರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮತದಾರರಿಗೆ ಇನ್ನೂ ಅರ್ಜಿ ನಮೂನೆಗಳನ್ನು ವಿತರಿಸಿಲ್ಲ ಎಂದಿದ್ದಾರೆ.</p>.<p>‘ಬೇರೆ ರಾಜ್ಯಗಳಲ್ಲಿ ಕೆಲಸದ ಒತ್ತಡದಿಂದ ಐವರು ಬಿಎಲ್ಒಗಳು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಯಾರು ಹೊಣೆ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಚೆನ್ನೈ:</strong> ತಮಿಳುನಾಡಿನಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ಎಂಡಿಎಂಕೆ ಸ್ಥಾಪಕ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ವೈಕೊ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.</p>.<p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಅರ್ಜಿಯ ವಿಚಾರಣೆಯನ್ನು ಡಿ.2ಕ್ಕೆ ನಿಗದಿಪಡಿಸಿತು.</p>.<p>ಎಸ್ಐಆರ್ಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯು ಸಮಾನತೆಯ ಹಕ್ಕು, ಪ್ರಜಾ ಪ್ರತಿನಿಧಿ ಕಾಯ್ದೆಯ ವಿವಿಧ ನಿಬಂಧನೆಗಳು ಹಾಗೂ 1960ರ ಮತದಾರರ ನೋಂದಣಿ ನಿಯಮಗಳು ಸೇರಿದಂತೆ ವಿವಿಧ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವೈಕೊ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. </p>.<p><strong>ಶೇ 50ರಷ್ಟು ಮತದಾರರು ಅರ್ಜಿ ಹಿಂತಿರುಗಿಸಿಲ್ಲ:</strong> ಎಸ್ಐಆರ್ ಪ್ರಕ್ರಿಯೆ ತರಾತುರಿಯಲ್ಲಿ ಕೈಗೊಂಡಿರುವುದರಿಂದ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಮಾನಸಿಕ ಒತ್ತಡ ಉಂಟಾಗಿದೆ. ಶೇಕಡ 50ರಷ್ಟು ಮತದಾರರು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಇನ್ನೂ ವಾಪಸ್ ನೀಡಿಲ್ಲ ಎಂದು ತಮಿಳುನಾಡಿನ ಸಚಿವ ಎಸ್. ರಘುಪತಿ ಮಂಗಳವಾರ ಹೇಳಿದ್ದಾರೆ.</p>.<p>ಡಿ.4ರ ಗಡುವು ಸಮೀಪಿಸುತ್ತಿರುವುದರಿಂದ, ಎಸ್ಐಆರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮತದಾರರಿಗೆ ಇನ್ನೂ ಅರ್ಜಿ ನಮೂನೆಗಳನ್ನು ವಿತರಿಸಿಲ್ಲ ಎಂದಿದ್ದಾರೆ.</p>.<p>‘ಬೇರೆ ರಾಜ್ಯಗಳಲ್ಲಿ ಕೆಲಸದ ಒತ್ತಡದಿಂದ ಐವರು ಬಿಎಲ್ಒಗಳು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಯಾರು ಹೊಣೆ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>