<p><strong>ನವದೆಹಲಿ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಉದ್ದೇಶಿಸಿ ಕೆಲವು ಮಾತುಗಳನ್ನು ಆಡಿದ್ದಕ್ಕೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿರುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವೈಷ್ಣವ್, ‘ಕಾನೂನಿನ ಅಡಿಯಲ್ಲಿ ಸಮನ್ಸ್ ಜಾರಿ ಮಾಡಬೇಕು ಎಂದಾದರೆ ಆ ಕೆಲಸ ಆಗಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದರು. ಕಾಮ್ರಾ ಅವರನ್ನು ಗುರಿಯಾಗಿಸಿ ಪೊಲೀಸರು ತೀರಾ ಅತಿರೇಕದ ಕ್ರಮ ಕೈಗೊಂಡಿದ್ದಾರೆಯೇ ಎಂದು ವೈಷ್ಣವ್ ಅವರನ್ನು ಪ್ರಶ್ನಿಸಲಾಗಿತ್ತು.</p>.<p>‘ನಾವು ಸಮಾಜವಾಗಿ, ಸಂವಿಧಾನದ ಚೌಕಟ್ಟಿನ ಒಳಗೆ ಕೆಲಸ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಸ್ಪಷ್ಟವಾದ ವಿವರಣೆ ಇದೆ. ಅದನ್ನು ಎಲ್ಲರೂ ಗೌರವಿಸುತ್ತಾರೆ. ಸಂವಿಧಾನವು ಕೆಲವು ನಿರ್ಬಂಧಗಳನ್ನು ವಿಧಿಸಿದೆ, ಅವು ಹಕ್ಕುಗಳಷ್ಟೇ ಮುಖ್ಯವಾಗಿವೆ’ ಎಂದು ವೈಷ್ಣವ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಉದ್ದೇಶಿಸಿ ಕೆಲವು ಮಾತುಗಳನ್ನು ಆಡಿದ್ದಕ್ಕೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿರುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವೈಷ್ಣವ್, ‘ಕಾನೂನಿನ ಅಡಿಯಲ್ಲಿ ಸಮನ್ಸ್ ಜಾರಿ ಮಾಡಬೇಕು ಎಂದಾದರೆ ಆ ಕೆಲಸ ಆಗಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದರು. ಕಾಮ್ರಾ ಅವರನ್ನು ಗುರಿಯಾಗಿಸಿ ಪೊಲೀಸರು ತೀರಾ ಅತಿರೇಕದ ಕ್ರಮ ಕೈಗೊಂಡಿದ್ದಾರೆಯೇ ಎಂದು ವೈಷ್ಣವ್ ಅವರನ್ನು ಪ್ರಶ್ನಿಸಲಾಗಿತ್ತು.</p>.<p>‘ನಾವು ಸಮಾಜವಾಗಿ, ಸಂವಿಧಾನದ ಚೌಕಟ್ಟಿನ ಒಳಗೆ ಕೆಲಸ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಸ್ಪಷ್ಟವಾದ ವಿವರಣೆ ಇದೆ. ಅದನ್ನು ಎಲ್ಲರೂ ಗೌರವಿಸುತ್ತಾರೆ. ಸಂವಿಧಾನವು ಕೆಲವು ನಿರ್ಬಂಧಗಳನ್ನು ವಿಧಿಸಿದೆ, ಅವು ಹಕ್ಕುಗಳಷ್ಟೇ ಮುಖ್ಯವಾಗಿವೆ’ ಎಂದು ವೈಷ್ಣವ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>