<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿನ ಶ್ರೀಮಾತಾ ವೈಷ್ಣೋದೇವಿ ವೈದ್ಯಕೀಯ ಎಕ್ಸ್ಲೆನ್ಸ್ ಸಂಸ್ಥೆಗೆ ನೀಡಲಾಗಿದ್ದ ಅನುಮತಿ ಪತ್ರವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಹಿಂತೆಗೆದುಕೊಂಡಿದೆ.</p>.<p>ಈ ವೈದ್ಯಕೀಯ ಶಿಕ್ಷಣ ಸಂಸ್ಥೆಯು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ (ಎಂಎಆರ್ಬಿ) ಕನಿಷ್ಠ ಮಾನದಂಡಗಳನ್ನು ಪಾಲಿಸದ ಕಾರಣ ಅನುಮತಿ ಹಿಂದಕ್ಕೆ ಪಡೆಯಲಾಗಿದೆ ಎಂದು ಅದು ತಿಳಿಸಿದೆ.</p>.<p>2025–26ನೇ ಸಾಲಿನ ಕೌನ್ಸೆಲಿಂಗ್ನಲ್ಲಿ ಈ ಕಾಲೇಜಿಗೆ ಪ್ರವೇಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಜಮ್ಮು ಮತ್ತು ಕಾಶ್ಮೀರದ ಇತರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು. ಇವುಗಳನ್ನು ಕೇಂದ್ರಾಡಳಿತ ಪ್ರದೇಶದ ಸಕ್ಷಮ ಪ್ರಾಧಿಕಾರದ ‘ಸೂಪರ್ನ್ಯೂಮರರಿ ಸೀಟು’ಗಳಾಗಿ ಪರಿಗಣಿಸಲಾಗುವುದು ಎಂದು ಅದು ಆದೇಶದಲ್ಲಿ ಹೇಳಿದೆ. </p>.<p>ಅನಿರೀಕ್ಷಿತ ತಪಾಸಣೆ ನಡೆಸಿದಾಗ ಸಂಸ್ಥೆಯಲ್ಲಿ ಹಲವು ಮಾನದಂಡಗಳು ಪಾಲನೆ ಆಗದಿರುವುದು ಗೊತ್ತಾಗಿದೆ ಎಂದಿರುವ ಮಂಡಳಿಯು, ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದಿದೆ. </p>.<p>2024ರಲ್ಲಿ ಈ ವೈದ್ಯಕೀಯ ಶಿಕ್ಷಣ ಸಂಸ್ಥೆಯು 50 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಅರ್ಜಿ ಪರಿಶೀಲನೆ ಬಳಿಕ 2025ರ ಸೆಪ್ಟೆಂಬರ್ 8ರಂದು ಎಂಬಿಬಿಎಸ್ ಕೋರ್ಸ್ ಆರಂಭಿಸಲು ಅನುಮತಿ ನೀಡಲಾಗಿತ್ತು.</p>.<p>ಕಾಲೇಜಿನ 50 ಸೀಟುಗಳು ನೀಟ್ ಮೆರಿಟ್ ಲಿಸ್ಟ್ ಆಧಾರದ ಮೇಲೆ ಭರ್ತಿಯಾಗಿದ್ದವು. ಈ ಪೈಕಿ 42 ಮುಸ್ಲಿಂ ವಿದ್ಯಾರ್ಥಿಗಳಾಗಿದ್ದರೆ, ಏಳು ಹಿಂದೂ ಮತ್ತು ಒಬ್ಬರು ಸಿಖ್ ವಿದ್ಯಾರ್ಥಿಯಾಗಿದ್ದರು.</p>.<p>‘ಮಾತಾ ವೈಷ್ಣೋದೇವಿ ನಂಬಿಕೆಯ ಮೇಲೆ ನಡೆಯುವ ಸಂಸ್ಥೆಯಲ್ಲಿ ಎಲ್ಲ ಸೀಟುಗಳನ್ನು ಹಿಂದೂಗಳಿಗೆ ಮೀಸಲಿಡಬೇಕು. ಇಲ್ಲದಿದ್ದರೆ ಎಲ್ಲ ಪ್ರವೇಶವನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಮತ್ತು ಅದರ ಸಂಘರ್ಷ ಸಮಿತಿ ಪ್ರತಿಭಟನೆ ಮತ್ತು ಹೋರಾಟಗಳನ್ನು ನಡೆಸಿತ್ತು.</p>.<p>ಬಿಜೆಪಿ ಸ್ವಾಗತ: ‘ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗದಂತೆ ನಿರ್ಧಾರ ತೆಗೆದುಕೊಂಡ ಎನ್ಎಂಸಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಕ್ರಮವನ್ನು ಸ್ವಾಗತಿಸುತ್ತೇವೆ’ ಎಂದು ಬಿಜೆಪಿ ಜಮ್ಮು–ಕಾಶ್ಮೀರದ ಘಟಕದ ಅಧ್ಯಕ್ಷ ಸತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. </p>.<p>ಎನ್ಸಿ, ಪಿಡಿಪಿ ಆಕ್ರೋಶ: ಕೇಂದ್ರದ ಈ ಕ್ರಮದಿಂದ ಜಮ್ಮು ಮತ್ತು ಕಾಶ್ಮೀರ ಪ್ರದೇಶಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ರಾಷ್ಟ್ರೀಯ ಕಾನ್ಫರೆನ್ಸ್ (ಎನ್ಸಿ) ಮತ್ತು ಪಿಡಿಪಿ ಆಕ್ರೋಶ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿನ ಶ್ರೀಮಾತಾ ವೈಷ್ಣೋದೇವಿ ವೈದ್ಯಕೀಯ ಎಕ್ಸ್ಲೆನ್ಸ್ ಸಂಸ್ಥೆಗೆ ನೀಡಲಾಗಿದ್ದ ಅನುಮತಿ ಪತ್ರವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಹಿಂತೆಗೆದುಕೊಂಡಿದೆ.</p>.<p>ಈ ವೈದ್ಯಕೀಯ ಶಿಕ್ಷಣ ಸಂಸ್ಥೆಯು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ (ಎಂಎಆರ್ಬಿ) ಕನಿಷ್ಠ ಮಾನದಂಡಗಳನ್ನು ಪಾಲಿಸದ ಕಾರಣ ಅನುಮತಿ ಹಿಂದಕ್ಕೆ ಪಡೆಯಲಾಗಿದೆ ಎಂದು ಅದು ತಿಳಿಸಿದೆ.</p>.<p>2025–26ನೇ ಸಾಲಿನ ಕೌನ್ಸೆಲಿಂಗ್ನಲ್ಲಿ ಈ ಕಾಲೇಜಿಗೆ ಪ್ರವೇಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಜಮ್ಮು ಮತ್ತು ಕಾಶ್ಮೀರದ ಇತರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು. ಇವುಗಳನ್ನು ಕೇಂದ್ರಾಡಳಿತ ಪ್ರದೇಶದ ಸಕ್ಷಮ ಪ್ರಾಧಿಕಾರದ ‘ಸೂಪರ್ನ್ಯೂಮರರಿ ಸೀಟು’ಗಳಾಗಿ ಪರಿಗಣಿಸಲಾಗುವುದು ಎಂದು ಅದು ಆದೇಶದಲ್ಲಿ ಹೇಳಿದೆ. </p>.<p>ಅನಿರೀಕ್ಷಿತ ತಪಾಸಣೆ ನಡೆಸಿದಾಗ ಸಂಸ್ಥೆಯಲ್ಲಿ ಹಲವು ಮಾನದಂಡಗಳು ಪಾಲನೆ ಆಗದಿರುವುದು ಗೊತ್ತಾಗಿದೆ ಎಂದಿರುವ ಮಂಡಳಿಯು, ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದಿದೆ. </p>.<p>2024ರಲ್ಲಿ ಈ ವೈದ್ಯಕೀಯ ಶಿಕ್ಷಣ ಸಂಸ್ಥೆಯು 50 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಅರ್ಜಿ ಪರಿಶೀಲನೆ ಬಳಿಕ 2025ರ ಸೆಪ್ಟೆಂಬರ್ 8ರಂದು ಎಂಬಿಬಿಎಸ್ ಕೋರ್ಸ್ ಆರಂಭಿಸಲು ಅನುಮತಿ ನೀಡಲಾಗಿತ್ತು.</p>.<p>ಕಾಲೇಜಿನ 50 ಸೀಟುಗಳು ನೀಟ್ ಮೆರಿಟ್ ಲಿಸ್ಟ್ ಆಧಾರದ ಮೇಲೆ ಭರ್ತಿಯಾಗಿದ್ದವು. ಈ ಪೈಕಿ 42 ಮುಸ್ಲಿಂ ವಿದ್ಯಾರ್ಥಿಗಳಾಗಿದ್ದರೆ, ಏಳು ಹಿಂದೂ ಮತ್ತು ಒಬ್ಬರು ಸಿಖ್ ವಿದ್ಯಾರ್ಥಿಯಾಗಿದ್ದರು.</p>.<p>‘ಮಾತಾ ವೈಷ್ಣೋದೇವಿ ನಂಬಿಕೆಯ ಮೇಲೆ ನಡೆಯುವ ಸಂಸ್ಥೆಯಲ್ಲಿ ಎಲ್ಲ ಸೀಟುಗಳನ್ನು ಹಿಂದೂಗಳಿಗೆ ಮೀಸಲಿಡಬೇಕು. ಇಲ್ಲದಿದ್ದರೆ ಎಲ್ಲ ಪ್ರವೇಶವನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಮತ್ತು ಅದರ ಸಂಘರ್ಷ ಸಮಿತಿ ಪ್ರತಿಭಟನೆ ಮತ್ತು ಹೋರಾಟಗಳನ್ನು ನಡೆಸಿತ್ತು.</p>.<p>ಬಿಜೆಪಿ ಸ್ವಾಗತ: ‘ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗದಂತೆ ನಿರ್ಧಾರ ತೆಗೆದುಕೊಂಡ ಎನ್ಎಂಸಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಕ್ರಮವನ್ನು ಸ್ವಾಗತಿಸುತ್ತೇವೆ’ ಎಂದು ಬಿಜೆಪಿ ಜಮ್ಮು–ಕಾಶ್ಮೀರದ ಘಟಕದ ಅಧ್ಯಕ್ಷ ಸತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. </p>.<p>ಎನ್ಸಿ, ಪಿಡಿಪಿ ಆಕ್ರೋಶ: ಕೇಂದ್ರದ ಈ ಕ್ರಮದಿಂದ ಜಮ್ಮು ಮತ್ತು ಕಾಶ್ಮೀರ ಪ್ರದೇಶಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ರಾಷ್ಟ್ರೀಯ ಕಾನ್ಫರೆನ್ಸ್ (ಎನ್ಸಿ) ಮತ್ತು ಪಿಡಿಪಿ ಆಕ್ರೋಶ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>