<p><strong>ಜಮ್ಮು</strong>: ಜಮ್ಮುವಿನ ಕಾತ್ರಾದಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿಯಲ್ಲಿ ಕಳೆದ 8 ದಿನಗಳಿಂದ ಪ್ರತಿಕೂಲ ಹವಾಮಾನ ಆತಂಕ ಮುಂದುವರೆದಿದ್ದು ಈ ನಡುವೆ ಯಾತ್ರೆ ಇನ್ನೂ ಆರಂಭವಾಗುವ ಲಕ್ಷಣಗಳು ಕಂಡು ಬಂದಿಲ್ಲ.</p><p>ಇದಕ್ಕೆ ಕಾರಣ ರಿಯಾಸಿ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಭೂಕುಸಿತಗಳು ಉಂಟಾಗುತ್ತಿವೆ. ಇದರಿಂದ ಸದ್ಯ ವೈಷ್ಣೋದೇವಿ ಯಾತ್ರೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸತತ 7 ದಿನಗಳಿಂದ ವೈಷ್ಣೋದೇವಿ ದೇವಾಲಯ ಬಂದ್ ಆಗಿದೆ ಎಂದು ಅಲ್ಲಿನ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.</p><p>ಕಳೆದ ಆಗಸ್ಟ್ 26 ರಂದು ಮಾತಾ ವೈಷ್ಣೋದೇವಿ ದೇವಾಲಯಕ್ಕೆ ತೆರಳುವ ಕಾತ್ರಾ ಮಾರ್ಗದಲ್ಲಿ ಮೇಘಸ್ಫೋಟದಿಂದಾಗಿ ಸಂಭವಿಸಿದ ಭೂ ಕುಸಿತದಲ್ಲಿ 34 ಯಾತ್ರಿಕರು ಮೃತಪಟ್ಟು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p><p>ಪ್ರತಿಕೂಲ ಹವಾಮಾನ ಹಾಗೂ ಭಾರಿ ಮಳೆಯಿಂದ ಯಾತ್ರಾರ್ಥಿಗಳಿಗೆ ಸದ್ಯ ಎಲ್ಲ ರೀತಿಯ ಮುಂಗಡ ಕಾಯ್ದಿರಿಸುವಿಕೆಯನ್ನು ರದ್ದುಗೊಳಿಸಿ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ (SMVDSB) ಯಾತ್ರಾರ್ಥಿಗಳಿಗೆ ಸೂಚನೆ ನೀಡಿದೆ.</p><p>ಮುಂಗಡ ಬುಕಿಂಗ್ ರದ್ದುಗೊಳಿಸುವ ಎಲ್ಲರಿಗೂ ಹಣವನ್ನು ನೂರಕ್ಕೆ ನೂರರಷ್ಟು ಮರುಪಾವತಿಯಾಗುವ ವ್ಯವಸ್ಥೆ ಮಾಡಿದ್ದೇವೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಸದ್ಯ ಯಾತ್ರೆಯನ್ನು ಮುಂದೂಡುವುದು ಸೂಕ್ತ ಎಂದು ಹೇಳಿದ್ದಾರೆ.</p><p>SMVDSB ಹವಾಮಾನ ಇಲಾಖೆ ಮುನ್ಸೂಚನೆಯನ್ನು ನಿರ್ಲಕ್ಷಿಸಿ, ಯಾತ್ರೆಗೆ ಅವಕಾಶ ನೀಡಿತ್ತು. ಇದರಿಂದ ಹೆಚ್ಚಿನ ಸಾವು ನೋವುಗಳು ಸಂಭವಿಸಿದವು ಎಂಬುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.</p>.ಜಮ್ಮು | ಕತ್ರಾದಲ್ಲಿ ಭೂಕುಸಿತ: ವೈಷ್ಣೋದೇವಿ ಯಾತ್ರೆ ಸ್ಥಗಿತ; ಯಾತ್ರಿಕರ ಪರದಾಟ.ವೈಷ್ಣೋದೇವಿ ಮಾರ್ಗದಲ್ಲಿ ಕುದುರೆ ಸವಾರಿ ಸೇವೆ ಸೋಗಿನಲ್ಲಿ ಬಂದ ಇಬ್ಬರ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಜಮ್ಮುವಿನ ಕಾತ್ರಾದಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿಯಲ್ಲಿ ಕಳೆದ 8 ದಿನಗಳಿಂದ ಪ್ರತಿಕೂಲ ಹವಾಮಾನ ಆತಂಕ ಮುಂದುವರೆದಿದ್ದು ಈ ನಡುವೆ ಯಾತ್ರೆ ಇನ್ನೂ ಆರಂಭವಾಗುವ ಲಕ್ಷಣಗಳು ಕಂಡು ಬಂದಿಲ್ಲ.</p><p>ಇದಕ್ಕೆ ಕಾರಣ ರಿಯಾಸಿ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಭೂಕುಸಿತಗಳು ಉಂಟಾಗುತ್ತಿವೆ. ಇದರಿಂದ ಸದ್ಯ ವೈಷ್ಣೋದೇವಿ ಯಾತ್ರೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸತತ 7 ದಿನಗಳಿಂದ ವೈಷ್ಣೋದೇವಿ ದೇವಾಲಯ ಬಂದ್ ಆಗಿದೆ ಎಂದು ಅಲ್ಲಿನ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.</p><p>ಕಳೆದ ಆಗಸ್ಟ್ 26 ರಂದು ಮಾತಾ ವೈಷ್ಣೋದೇವಿ ದೇವಾಲಯಕ್ಕೆ ತೆರಳುವ ಕಾತ್ರಾ ಮಾರ್ಗದಲ್ಲಿ ಮೇಘಸ್ಫೋಟದಿಂದಾಗಿ ಸಂಭವಿಸಿದ ಭೂ ಕುಸಿತದಲ್ಲಿ 34 ಯಾತ್ರಿಕರು ಮೃತಪಟ್ಟು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p><p>ಪ್ರತಿಕೂಲ ಹವಾಮಾನ ಹಾಗೂ ಭಾರಿ ಮಳೆಯಿಂದ ಯಾತ್ರಾರ್ಥಿಗಳಿಗೆ ಸದ್ಯ ಎಲ್ಲ ರೀತಿಯ ಮುಂಗಡ ಕಾಯ್ದಿರಿಸುವಿಕೆಯನ್ನು ರದ್ದುಗೊಳಿಸಿ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ (SMVDSB) ಯಾತ್ರಾರ್ಥಿಗಳಿಗೆ ಸೂಚನೆ ನೀಡಿದೆ.</p><p>ಮುಂಗಡ ಬುಕಿಂಗ್ ರದ್ದುಗೊಳಿಸುವ ಎಲ್ಲರಿಗೂ ಹಣವನ್ನು ನೂರಕ್ಕೆ ನೂರರಷ್ಟು ಮರುಪಾವತಿಯಾಗುವ ವ್ಯವಸ್ಥೆ ಮಾಡಿದ್ದೇವೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಸದ್ಯ ಯಾತ್ರೆಯನ್ನು ಮುಂದೂಡುವುದು ಸೂಕ್ತ ಎಂದು ಹೇಳಿದ್ದಾರೆ.</p><p>SMVDSB ಹವಾಮಾನ ಇಲಾಖೆ ಮುನ್ಸೂಚನೆಯನ್ನು ನಿರ್ಲಕ್ಷಿಸಿ, ಯಾತ್ರೆಗೆ ಅವಕಾಶ ನೀಡಿತ್ತು. ಇದರಿಂದ ಹೆಚ್ಚಿನ ಸಾವು ನೋವುಗಳು ಸಂಭವಿಸಿದವು ಎಂಬುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.</p>.ಜಮ್ಮು | ಕತ್ರಾದಲ್ಲಿ ಭೂಕುಸಿತ: ವೈಷ್ಣೋದೇವಿ ಯಾತ್ರೆ ಸ್ಥಗಿತ; ಯಾತ್ರಿಕರ ಪರದಾಟ.ವೈಷ್ಣೋದೇವಿ ಮಾರ್ಗದಲ್ಲಿ ಕುದುರೆ ಸವಾರಿ ಸೇವೆ ಸೋಗಿನಲ್ಲಿ ಬಂದ ಇಬ್ಬರ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>