<p><strong>ನವದೆಹಲಿ:</strong> ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ94ನೇ ಜನ್ಮದಿನದ ಅಂಗವಾಗಿ ಮಂಗಳವಾರ ಅವರ ಸ್ಮಾರಕವನ್ನು ಲೋಕಾರ್ಪಣೆಗೊಳಿಸಲಾಯಿತು.</p>.<p>ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಸ್ಮಾರಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದರು.</p>.<p>ದೀರ್ಘಕಾಲಿನ ಅನಾರೋಗ್ಯದಿಂದ ಬಳಲುತ್ತಿದ್ದ ಅಜಾತಶತ್ರು ವಾಜಪೇಯಿ ಅವರು ಇದೇ ಆಗಸ್ಟ್ 16ರಂದು ಕೊನೆ ಉಸಿರೆಳೆದಿದ್ದರು. ವಾಜಪೇಯಿ ಅವರ ಕುಟುಂಬದವರು,ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದರು.</p>.<p>‘ವಾಯಪೇಯಿ ಅವರು ಈ ದೇಶದ ಬಗ್ಗೆ ಕಂಡಂತಹ ಕನಸನ್ನು ನನಸು ಮಾಡುವ ಮಾರ್ಗದಲ್ಲಿ ನಾವು ಸಾಗುತ್ತೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಗೌರವ ಸಲ್ಲಿಸಿದರು.ಕಮಲ ಕಲಾಕೃತಿಯನ್ನು ರೂಪಿಸಲಾಗಿದೆ. ಜೊತೆಗೆಸ್ಮಾರಕದ ಗೋಡೆಗಳ ಮೇಲೆ ವಾಜಪೇಯಿ ಅವರ ಕವನಗಳನ್ನು ಕೆತ್ತಿಸಲಾಗಿದೆ.</p>.<p>ಗಣ್ಯರು ಸ್ಮಾರಕಕ್ಕೆ ನಮನ ಸಲ್ಲಿಸುವ ವೇಳೆಯೇ ಖ್ಯಾತ ಗಾಯಕ ಪಂಕಜ್ ಉದಾಸ್ ಅವರ ಕಂಠದಲ್ಲಿ ಭಕ್ತಿ ಗೀತೆಗಳು ತೇಲಿಬರುತ್ತಿದ್ದವು.ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿರುವ ಟ್ರಸ್ಟ್ ಈ ಸ್ಮಾರಕ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.</p>.<p>ಕೇಂದ್ರ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಪ್ರದೇಶದಲ್ಲಿಈ ಸ್ಮಾರಕ ನಿರ್ಮಿಸಿದೆ. ಈ ಯೋಜನೆಗೆ ಒಟ್ಟು₹10.51 ವೆಚ್ಚವಾಗಿದೆ. ಅಟಲ್ ಸ್ಮೃತಿ ಸಮಿತಿ ನಿಧಿಯಿಂದ ಅದನ್ನು ನಿರ್ಮಿಸಲಾಗಿದೆ. ಸುಮಿತ್ರಾ ಮಹಾಜನ್, ಬಿಹಾರ್ ರಾಜ್ಯಪಾಲ ಲಾಲ್ಜಿ ತಂಡನ್, ಗುಜರಾತ್ ರಾಜ್ಯಪಾಲ ಒ.ಪಿ. ಕೊಹ್ಲಿ, ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲಾ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಮಲ್ಹೋತ್ರ ಮತ್ತು ರಾಮ್ ಲಾಲ್ ಈ ಸಮಿತಿಯ ಸಂಸ್ಥಾಪನ ಸದಸ್ಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ94ನೇ ಜನ್ಮದಿನದ ಅಂಗವಾಗಿ ಮಂಗಳವಾರ ಅವರ ಸ್ಮಾರಕವನ್ನು ಲೋಕಾರ್ಪಣೆಗೊಳಿಸಲಾಯಿತು.</p>.<p>ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಸ್ಮಾರಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದರು.</p>.<p>ದೀರ್ಘಕಾಲಿನ ಅನಾರೋಗ್ಯದಿಂದ ಬಳಲುತ್ತಿದ್ದ ಅಜಾತಶತ್ರು ವಾಜಪೇಯಿ ಅವರು ಇದೇ ಆಗಸ್ಟ್ 16ರಂದು ಕೊನೆ ಉಸಿರೆಳೆದಿದ್ದರು. ವಾಜಪೇಯಿ ಅವರ ಕುಟುಂಬದವರು,ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದರು.</p>.<p>‘ವಾಯಪೇಯಿ ಅವರು ಈ ದೇಶದ ಬಗ್ಗೆ ಕಂಡಂತಹ ಕನಸನ್ನು ನನಸು ಮಾಡುವ ಮಾರ್ಗದಲ್ಲಿ ನಾವು ಸಾಗುತ್ತೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಗೌರವ ಸಲ್ಲಿಸಿದರು.ಕಮಲ ಕಲಾಕೃತಿಯನ್ನು ರೂಪಿಸಲಾಗಿದೆ. ಜೊತೆಗೆಸ್ಮಾರಕದ ಗೋಡೆಗಳ ಮೇಲೆ ವಾಜಪೇಯಿ ಅವರ ಕವನಗಳನ್ನು ಕೆತ್ತಿಸಲಾಗಿದೆ.</p>.<p>ಗಣ್ಯರು ಸ್ಮಾರಕಕ್ಕೆ ನಮನ ಸಲ್ಲಿಸುವ ವೇಳೆಯೇ ಖ್ಯಾತ ಗಾಯಕ ಪಂಕಜ್ ಉದಾಸ್ ಅವರ ಕಂಠದಲ್ಲಿ ಭಕ್ತಿ ಗೀತೆಗಳು ತೇಲಿಬರುತ್ತಿದ್ದವು.ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿರುವ ಟ್ರಸ್ಟ್ ಈ ಸ್ಮಾರಕ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.</p>.<p>ಕೇಂದ್ರ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಪ್ರದೇಶದಲ್ಲಿಈ ಸ್ಮಾರಕ ನಿರ್ಮಿಸಿದೆ. ಈ ಯೋಜನೆಗೆ ಒಟ್ಟು₹10.51 ವೆಚ್ಚವಾಗಿದೆ. ಅಟಲ್ ಸ್ಮೃತಿ ಸಮಿತಿ ನಿಧಿಯಿಂದ ಅದನ್ನು ನಿರ್ಮಿಸಲಾಗಿದೆ. ಸುಮಿತ್ರಾ ಮಹಾಜನ್, ಬಿಹಾರ್ ರಾಜ್ಯಪಾಲ ಲಾಲ್ಜಿ ತಂಡನ್, ಗುಜರಾತ್ ರಾಜ್ಯಪಾಲ ಒ.ಪಿ. ಕೊಹ್ಲಿ, ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲಾ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಮಲ್ಹೋತ್ರ ಮತ್ತು ರಾಮ್ ಲಾಲ್ ಈ ಸಮಿತಿಯ ಸಂಸ್ಥಾಪನ ಸದಸ್ಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>