<p><strong>ಕೊಚ್ಚಿ:</strong> ಬೆಂಗಳೂರು– ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 7 ಗಂಟೆಗೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಲಿದ್ದಾರೆ.</p>.<p>ಎರ್ನಾಕುಲಂ ಜಂಕ್ಷನ್ನಿಂದ ಆರಂಭವಾಗುವ ರೈಲಿನ ಸಂಚಾರವು ತ್ರಿಶ್ಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಲಿದೆ.</p>.<p>ಕೇರಳ–ತಮಿಳುನಾಡು–ಕರ್ನಾಟಕದಲ್ಲಿ ಸಂಚರಿಸುವ ಈ ರೈಲು ಎಂಟು ಕೋಚ್ಗಳನ್ನು ಒಳಗೊಂಡಿರಲಿದೆ. ಕೇರಳದ ಮೂರನೇ ಹಾಗೂ ದಕ್ಷಿಣ ರೈಲ್ವೆಯ 12ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇದಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ, ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಕೇಂದ್ರ ಸಚಿವರಾದ ಸುರೇಶ್ ಗೋಪಿ, ಜಾರ್ಜ್ ಕುರಿಯನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಎರ್ನಾಕುಲಂ ಜಂಕ್ಷನ್ನಲ್ಲಿ ನಡೆಯುವ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಪ್ರಧಾನಿ ಅವರು ಬೆಳಿಗ್ಗೆ 7 ಗಂಟೆಗೆ ಆನ್ಲೈನ್ ಮೂಲಕ ಚಾಲನೆ ನೀಡುವರು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಬೆಂಗಳೂರು– ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 7 ಗಂಟೆಗೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಲಿದ್ದಾರೆ.</p>.<p>ಎರ್ನಾಕುಲಂ ಜಂಕ್ಷನ್ನಿಂದ ಆರಂಭವಾಗುವ ರೈಲಿನ ಸಂಚಾರವು ತ್ರಿಶ್ಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಲಿದೆ.</p>.<p>ಕೇರಳ–ತಮಿಳುನಾಡು–ಕರ್ನಾಟಕದಲ್ಲಿ ಸಂಚರಿಸುವ ಈ ರೈಲು ಎಂಟು ಕೋಚ್ಗಳನ್ನು ಒಳಗೊಂಡಿರಲಿದೆ. ಕೇರಳದ ಮೂರನೇ ಹಾಗೂ ದಕ್ಷಿಣ ರೈಲ್ವೆಯ 12ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇದಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ, ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಕೇಂದ್ರ ಸಚಿವರಾದ ಸುರೇಶ್ ಗೋಪಿ, ಜಾರ್ಜ್ ಕುರಿಯನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಎರ್ನಾಕುಲಂ ಜಂಕ್ಷನ್ನಲ್ಲಿ ನಡೆಯುವ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಪ್ರಧಾನಿ ಅವರು ಬೆಳಿಗ್ಗೆ 7 ಗಂಟೆಗೆ ಆನ್ಲೈನ್ ಮೂಲಕ ಚಾಲನೆ ನೀಡುವರು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>