<p><strong>ನವದೆಹಲಿ:</strong> ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. </p><p>ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. </p><p><strong>ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ:</strong></p><ul><li><p>ಬನಾರಸ್-ಖಜುರಾಹೊ,</p></li><li><p>ಲಖನೌ-ಸಹಾರನ್ಪುರ,</p></li><li><p>ಫಿರೋಜ್ಪುರ-ದೆಹಲಿ,</p></li><li><p>ಎರ್ನಾಕುಲಂ-ಬೆಂಗಳೂರು</p></li></ul><p>ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ ವಂದೇ ಭಾರತ್ ರೈಲಿನ ಆಗಮನದೊಂದಿಗೆ ಪ್ರಯಾಣದ ಅವಧಿ ಎರಡು ತಾಸುಗಳಷ್ಟು ಕಡಿಮೆಯಾಗಲಿದೆ. ಎರಡು ಗಮ್ಯಸ್ಥಾನಗಳ ನಡುವಣ ದೂರವನ್ನು 8 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಲಿದೆ. </p><p>ಇದರಿಂದ ಐಟಿ, ವಾಣಿಜ್ಯ, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಹೆಚ್ಚಿನ ನೆರವನ್ನುಂಟು ಮಾಡಲಿದೆ. </p><p>ಈ ಮಾರ್ಗವು ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಆರ್ಥಿಕ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. </p>.ಇಂಡೊ–ರಷ್ಯನ್ ವಿನ್ಯಾಸ: ವಂದೇ ಭಾರತ್ ವಿಲಾಸಿ ಸ್ಲೀಪರ್ ಕೋಚ್ನ ಹೊಸರೂಪ.ಬೆಳಗಾವಿ–ಬೆಂಗಳೂರು ನೂತನ ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. </p><p>ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. </p><p><strong>ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ:</strong></p><ul><li><p>ಬನಾರಸ್-ಖಜುರಾಹೊ,</p></li><li><p>ಲಖನೌ-ಸಹಾರನ್ಪುರ,</p></li><li><p>ಫಿರೋಜ್ಪುರ-ದೆಹಲಿ,</p></li><li><p>ಎರ್ನಾಕುಲಂ-ಬೆಂಗಳೂರು</p></li></ul><p>ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ ವಂದೇ ಭಾರತ್ ರೈಲಿನ ಆಗಮನದೊಂದಿಗೆ ಪ್ರಯಾಣದ ಅವಧಿ ಎರಡು ತಾಸುಗಳಷ್ಟು ಕಡಿಮೆಯಾಗಲಿದೆ. ಎರಡು ಗಮ್ಯಸ್ಥಾನಗಳ ನಡುವಣ ದೂರವನ್ನು 8 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಲಿದೆ. </p><p>ಇದರಿಂದ ಐಟಿ, ವಾಣಿಜ್ಯ, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಹೆಚ್ಚಿನ ನೆರವನ್ನುಂಟು ಮಾಡಲಿದೆ. </p><p>ಈ ಮಾರ್ಗವು ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಆರ್ಥಿಕ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. </p>.ಇಂಡೊ–ರಷ್ಯನ್ ವಿನ್ಯಾಸ: ವಂದೇ ಭಾರತ್ ವಿಲಾಸಿ ಸ್ಲೀಪರ್ ಕೋಚ್ನ ಹೊಸರೂಪ.ಬೆಳಗಾವಿ–ಬೆಂಗಳೂರು ನೂತನ ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>