<p><strong>ನವದೆಹಲಿ</strong>: ‘ವಂದೇ ಮಾತರಂ’ ರಾಷ್ಟ್ರೀಯ ಗೀತೆ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಈ ಮೂಲಕ ಭವಿಷ್ಯದ ಪೀಳಿಗೆಗೆ ಅದರ ಮೌಲ್ಯವನ್ನು ಅರ್ಥೈಸಲು ಅನುವು ಮಾಡಿಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಜನರನ್ನು ಒತ್ತಾಯಿಸಿದ್ದಾರೆ.</p><p>ಮಾಸಿಕ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಂದೇ ಮಾತರಂ ಗೀತೆಯ 150ನೇ ವರ್ಷವನ್ನು ಸ್ಮರಣೀಯವಾಗಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p><p>ಬಂಗಾಳಿ ಕಾದಂಬರಿಕಾರ, ಕವಿ ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯು 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಚರಣೆಗಳನ್ನು ನಡೆಸಲಾಗುವುದು ಎಂದರು.</p>.ಹಿಮಾಚಲ ಪ್ರದೇಶ: ಪಕ್ಷ ವಿರೋಧಿ ಚಟುವಟಿಕೆ, ಕಾಂಗ್ರೆಸ್ನ 30 ನಾಯಕರ ಉಚ್ಛಾಟನೆ.ಕರುನಾಡ ಸವಿಯೂಟ: ಕನಕಪುರ ಶೈಲಿ ಹೊಳೆ ಮೀನು ಸಾರು. <p>ತಮ್ಮ 30 ನಿಮಿಷಗಳ ಭಾಷಣದಲ್ಲಿ ಮೋದಿ ಅವರು, ದೇಶದ ವಿವಿಧ ಭಾಗಗಳಲ್ಲಿ ಜನರು ಕೈಗೊಂಡ ಹಲವಾರು ವಿಶಿಷ್ಟ ಉಪಕ್ರಮಗಳು ಬಗ್ಗೆ ಮಾತನಾಡಿದ್ದಾರೆ. ಗುಜರಾತ್ನಲ್ಲಿ ಮ್ಯಾಂಗ್ರೋವ್ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು, ಛತ್ತೀಸಗಢದಲ್ಲಿ ಕಸದ ಕೆಫೆಗಳನ್ನು ಸ್ಥಾಪಿಸುವುದು ಮತ್ತು ಬೆಂಗಳೂರಿನಲ್ಲಿ ಸರೋವರಗಳನ್ನು ಪುನರುಜ್ಜೀವನಗೊಳ್ಳಿಸುವುದು ಸೇರಿದೆ.</p><p>ಬಿಎಸ್ಎಫ್ ಮತ್ತು ಸಿಆರ್ಪಿಎಫ್ ಅರೆಸೈನಿಕ ಪಡೆಗಳು ತಮ್ಮ ಘಟಕಗಳಲ್ಲಿ ಭಾರತೀಯ ಶ್ವಾನ ತಳಿಗಳನ್ನು ಸೇರಿಸಿಕೊಂಡ ಪ್ರಯತ್ನಗಳನ್ನು ಮೋದಿ ಶ್ಲಾಘಿಸಿದ್ದಾರೆ. </p>.ಕಾಳಿ ನದಿ: ರಕ್ಷಣೆಗೆ ಹಾಕಿದ್ದ ತಂತಿಬೇಲಿ ದಾಟಿ ಬಂದ ಮೊಸಳೆ!.ದೇಶದ 8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ! .ಒಳನೋಟ: ಪೌಷ್ಠಿಕ ಯೋಜನೆಯಡಿ ಬುಡಕಟ್ಟು ಜನರಿಗೆ ‘ಕಳಪೆ’ ಆಹಾರ ಪೂರೈಕೆ.ದೆಹಲಿ | ವಿಷಕಾರಿ ಗಾಳಿ: ಕಣ್ಣುಗಳಲ್ಲಿ ಉರಿ, ತಲೆ ಸುತ್ತು – ಸಮೀಕ್ಷೆಯಿಂದ ಬಹಿರಂಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಂದೇ ಮಾತರಂ’ ರಾಷ್ಟ್ರೀಯ ಗೀತೆ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಈ ಮೂಲಕ ಭವಿಷ್ಯದ ಪೀಳಿಗೆಗೆ ಅದರ ಮೌಲ್ಯವನ್ನು ಅರ್ಥೈಸಲು ಅನುವು ಮಾಡಿಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಜನರನ್ನು ಒತ್ತಾಯಿಸಿದ್ದಾರೆ.</p><p>ಮಾಸಿಕ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಂದೇ ಮಾತರಂ ಗೀತೆಯ 150ನೇ ವರ್ಷವನ್ನು ಸ್ಮರಣೀಯವಾಗಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p><p>ಬಂಗಾಳಿ ಕಾದಂಬರಿಕಾರ, ಕವಿ ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯು 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಚರಣೆಗಳನ್ನು ನಡೆಸಲಾಗುವುದು ಎಂದರು.</p>.ಹಿಮಾಚಲ ಪ್ರದೇಶ: ಪಕ್ಷ ವಿರೋಧಿ ಚಟುವಟಿಕೆ, ಕಾಂಗ್ರೆಸ್ನ 30 ನಾಯಕರ ಉಚ್ಛಾಟನೆ.ಕರುನಾಡ ಸವಿಯೂಟ: ಕನಕಪುರ ಶೈಲಿ ಹೊಳೆ ಮೀನು ಸಾರು. <p>ತಮ್ಮ 30 ನಿಮಿಷಗಳ ಭಾಷಣದಲ್ಲಿ ಮೋದಿ ಅವರು, ದೇಶದ ವಿವಿಧ ಭಾಗಗಳಲ್ಲಿ ಜನರು ಕೈಗೊಂಡ ಹಲವಾರು ವಿಶಿಷ್ಟ ಉಪಕ್ರಮಗಳು ಬಗ್ಗೆ ಮಾತನಾಡಿದ್ದಾರೆ. ಗುಜರಾತ್ನಲ್ಲಿ ಮ್ಯಾಂಗ್ರೋವ್ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು, ಛತ್ತೀಸಗಢದಲ್ಲಿ ಕಸದ ಕೆಫೆಗಳನ್ನು ಸ್ಥಾಪಿಸುವುದು ಮತ್ತು ಬೆಂಗಳೂರಿನಲ್ಲಿ ಸರೋವರಗಳನ್ನು ಪುನರುಜ್ಜೀವನಗೊಳ್ಳಿಸುವುದು ಸೇರಿದೆ.</p><p>ಬಿಎಸ್ಎಫ್ ಮತ್ತು ಸಿಆರ್ಪಿಎಫ್ ಅರೆಸೈನಿಕ ಪಡೆಗಳು ತಮ್ಮ ಘಟಕಗಳಲ್ಲಿ ಭಾರತೀಯ ಶ್ವಾನ ತಳಿಗಳನ್ನು ಸೇರಿಸಿಕೊಂಡ ಪ್ರಯತ್ನಗಳನ್ನು ಮೋದಿ ಶ್ಲಾಘಿಸಿದ್ದಾರೆ. </p>.ಕಾಳಿ ನದಿ: ರಕ್ಷಣೆಗೆ ಹಾಕಿದ್ದ ತಂತಿಬೇಲಿ ದಾಟಿ ಬಂದ ಮೊಸಳೆ!.ದೇಶದ 8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ! .ಒಳನೋಟ: ಪೌಷ್ಠಿಕ ಯೋಜನೆಯಡಿ ಬುಡಕಟ್ಟು ಜನರಿಗೆ ‘ಕಳಪೆ’ ಆಹಾರ ಪೂರೈಕೆ.ದೆಹಲಿ | ವಿಷಕಾರಿ ಗಾಳಿ: ಕಣ್ಣುಗಳಲ್ಲಿ ಉರಿ, ತಲೆ ಸುತ್ತು – ಸಮೀಕ್ಷೆಯಿಂದ ಬಹಿರಂಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>