<p><strong>ನವದೆಹಲಿ</strong>: ‘ವಂದೇ ಮಾತರಂ’ ಗೀತೆಯ 150ನೇ ವಾರ್ಷಿಕೋತ್ಸವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಲೋಕಸಭೆಯಲ್ಲಿ ಸೋಮವಾರ ಮಾತನಾಡಲಿದ್ದಾರೆ.</p>.<p>‘ಚರ್ಚೆಯಿಂದ ಗೀತೆಯ ಕುರಿತ ಮಹತ್ವದ ಮತ್ತು ಕೆಲವು ಗೊತ್ತಿಲ್ಲದ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ‘ವಂದೇ ಮಾತರಂ’ ಕುರಿತ ಚರ್ಚೆಗೆ 10 ತಾಸು ಮೀಸಲಿಡಲಾಗಿದೆ.</p>.<p>ಈ ವಿಚಾರದ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ಪ್ರಿಯಾಂಕಾ ಗಾಂಧಿ ಮತ್ತಿತರರು ಮಾತನಾಡುವ ಸಾಧ್ಯತೆ ಇದೆ.</p>.<p>ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ‘ವಂದೇ ಮಾತರಂ’ ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು’ ಎಂದು ಆರೋಪಿಸಿದ್ದರು.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಕುರಿತು ಮೊದಲಿಗೆ ಮಾತನಾಡಲಿದ್ದಾರೆ. ನಂತರ ಸಚಿವ ಜೆ.ಪಿ.ನಡ್ಡಾ ಅವರು ಮಾತನಾಡಲಿದ್ದಾರೆ.</p>.<p>‘ವಂದೇ ಮಾತರಂ’ ಗೀತೆ ಕುರಿತ ಚರ್ಚೆ ಬಳಿಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಂದೇ ಮಾತರಂ’ ಗೀತೆಯ 150ನೇ ವಾರ್ಷಿಕೋತ್ಸವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಲೋಕಸಭೆಯಲ್ಲಿ ಸೋಮವಾರ ಮಾತನಾಡಲಿದ್ದಾರೆ.</p>.<p>‘ಚರ್ಚೆಯಿಂದ ಗೀತೆಯ ಕುರಿತ ಮಹತ್ವದ ಮತ್ತು ಕೆಲವು ಗೊತ್ತಿಲ್ಲದ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ‘ವಂದೇ ಮಾತರಂ’ ಕುರಿತ ಚರ್ಚೆಗೆ 10 ತಾಸು ಮೀಸಲಿಡಲಾಗಿದೆ.</p>.<p>ಈ ವಿಚಾರದ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ಪ್ರಿಯಾಂಕಾ ಗಾಂಧಿ ಮತ್ತಿತರರು ಮಾತನಾಡುವ ಸಾಧ್ಯತೆ ಇದೆ.</p>.<p>ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ‘ವಂದೇ ಮಾತರಂ’ ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು’ ಎಂದು ಆರೋಪಿಸಿದ್ದರು.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಕುರಿತು ಮೊದಲಿಗೆ ಮಾತನಾಡಲಿದ್ದಾರೆ. ನಂತರ ಸಚಿವ ಜೆ.ಪಿ.ನಡ್ಡಾ ಅವರು ಮಾತನಾಡಲಿದ್ದಾರೆ.</p>.<p>‘ವಂದೇ ಮಾತರಂ’ ಗೀತೆ ಕುರಿತ ಚರ್ಚೆ ಬಳಿಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>