<p>ಕೋಲ್ಕತ್ತ: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೂ ಮುನ್ನ ‘ವಂದೇ ಮಾತರಂ’ನ ಎಲ್ಲ ಆರು ಚರಣಗಳನ್ನು ಹಾಡಬೇಕು ಎಂದು ಕೇಂದ್ರ ಸರ್ಕಾರ ಹೊರಡಿಸಿರುವುದು ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. </p>.<p>ಕೇಂದ್ರದ ಈ ಆದೇಶವು ರವೀಂದ್ರನಾಥ ಟ್ಯಾಗೋರ್ ಅವರನ್ನು ಅವಮಾನಿಸುವಂತಿದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಗಳಿಸುವ ಉದ್ದೇಶವನ್ನು ಹೊಂದಿದೆ ಎಂದು ಟಿಎಂಸಿ ಬಣ್ಣಿಸಿದರೆ, ಕಾಂಗ್ರೆಸ್ ಇದನ್ನು ‘ವಿಭಜಕ ತಂತ್ರ’ ಎಂದು ಜರಿದಿದೆ. </p>.<p>ಆದೇಶವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ‘ಇದು ಐತಿಹಾಸಿಕ ತಪ್ಪನ್ನು ಸರಿಪಡಿಸುತ್ತದೆ ಮತ್ತು ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಅವರು ರಚಿಸಿದ ಗೀತೆಗೆ ಪೂರ್ಣ ಗೌರವವನ್ನು ಮರುಸ್ಥಾಪಿಸುತ್ತದೆ’ ಎಂದು ಹೇಳಿದೆ. </p>.<p>‘ಬಂಕಿಮ ಚಂದ್ರ ಅವರ ಕೊಡುಗೆಯನ್ನು ಎತ್ತಿ ತೋರಿಸಲು ಪಕ್ಷಕ್ಕೆ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಕೇಂದ್ರ ಸರ್ಕಾರದ ಈ ನಿರ್ದೇಶನವು ಟ್ಯಾಗೋರ್ ಅವರನ್ನು ಕಡೆಗಣಿಸಿದಂತಿದೆ’ ಎಂದು ಟಿಎಂಸಿ ನಾಯಕ, ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಆರೋಪಿಸಿದ್ದಾರೆ.</p>.<p>‘ಜನ ಗಣ ಮನ’ಕ್ಕೂ ಮೊದಲು ‘ವಂದೇ ಮಾತರಂ’ ಹಾಡಬೇಕು ಎಂದು ಒತ್ತಾಯಿಸುವ ಮೂಲಕ ಶ್ರೇಣಿ ವ್ಯವಸ್ಥೆ ರಚಿಸಲು ಕೇಂದ್ರ ಪ್ರಯತ್ನಿಸಿದೆ. ಈ ಪ್ರಕ್ರಿಯೆಯಲ್ಲಿ ಟ್ಯಾಗೋರ್ ಅವರನ್ನು ಅವಮಾನಿಸಿದೆ’ ಎಂದು ಅವರು ಟೀಕಿಸಿದ್ದಾರೆ. </p>.<p>‘ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಹೊರಡಿಸಿರುವ ಈ ಆದೇಶವು ರಾಜಕೀಯ ಲೆಕ್ಕಾಚಾರಗಳನ್ನು ಒಳಗೊಂಡಿದ್ದು, ವಿಭಜನೆಯ ತಂತ್ರವಾಗಿದೆ’ ಎಂದು ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ದೂರಿದ್ದಾರೆ. </p>.<p>ಈ ಆರೋಪಗಳನ್ನು ಬಿಜೆಪಿ ತಿರಸ್ಕರಿಸಿದೆ. ‘ಕೋಮು ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ವಂದೇ ಮಾತರಂ ಗೀತೆಯ ಕೆಲ ಚರಣಗಳನ್ನು ಕತ್ತರಿಸಿತ್ತು. ಆ ಐತಿಹಾಸಿಕ ತಪ್ಪನ್ನು ಈಗ ಸರಿಪಡಿಸಲಾಗಿದೆ’ ಎಂದು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೂ ಮುನ್ನ ‘ವಂದೇ ಮಾತರಂ’ನ ಎಲ್ಲ ಆರು ಚರಣಗಳನ್ನು ಹಾಡಬೇಕು ಎಂದು ಕೇಂದ್ರ ಸರ್ಕಾರ ಹೊರಡಿಸಿರುವುದು ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. </p>.<p>ಕೇಂದ್ರದ ಈ ಆದೇಶವು ರವೀಂದ್ರನಾಥ ಟ್ಯಾಗೋರ್ ಅವರನ್ನು ಅವಮಾನಿಸುವಂತಿದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಗಳಿಸುವ ಉದ್ದೇಶವನ್ನು ಹೊಂದಿದೆ ಎಂದು ಟಿಎಂಸಿ ಬಣ್ಣಿಸಿದರೆ, ಕಾಂಗ್ರೆಸ್ ಇದನ್ನು ‘ವಿಭಜಕ ತಂತ್ರ’ ಎಂದು ಜರಿದಿದೆ. </p>.<p>ಆದೇಶವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ‘ಇದು ಐತಿಹಾಸಿಕ ತಪ್ಪನ್ನು ಸರಿಪಡಿಸುತ್ತದೆ ಮತ್ತು ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಅವರು ರಚಿಸಿದ ಗೀತೆಗೆ ಪೂರ್ಣ ಗೌರವವನ್ನು ಮರುಸ್ಥಾಪಿಸುತ್ತದೆ’ ಎಂದು ಹೇಳಿದೆ. </p>.<p>‘ಬಂಕಿಮ ಚಂದ್ರ ಅವರ ಕೊಡುಗೆಯನ್ನು ಎತ್ತಿ ತೋರಿಸಲು ಪಕ್ಷಕ್ಕೆ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಕೇಂದ್ರ ಸರ್ಕಾರದ ಈ ನಿರ್ದೇಶನವು ಟ್ಯಾಗೋರ್ ಅವರನ್ನು ಕಡೆಗಣಿಸಿದಂತಿದೆ’ ಎಂದು ಟಿಎಂಸಿ ನಾಯಕ, ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಆರೋಪಿಸಿದ್ದಾರೆ.</p>.<p>‘ಜನ ಗಣ ಮನ’ಕ್ಕೂ ಮೊದಲು ‘ವಂದೇ ಮಾತರಂ’ ಹಾಡಬೇಕು ಎಂದು ಒತ್ತಾಯಿಸುವ ಮೂಲಕ ಶ್ರೇಣಿ ವ್ಯವಸ್ಥೆ ರಚಿಸಲು ಕೇಂದ್ರ ಪ್ರಯತ್ನಿಸಿದೆ. ಈ ಪ್ರಕ್ರಿಯೆಯಲ್ಲಿ ಟ್ಯಾಗೋರ್ ಅವರನ್ನು ಅವಮಾನಿಸಿದೆ’ ಎಂದು ಅವರು ಟೀಕಿಸಿದ್ದಾರೆ. </p>.<p>‘ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಹೊರಡಿಸಿರುವ ಈ ಆದೇಶವು ರಾಜಕೀಯ ಲೆಕ್ಕಾಚಾರಗಳನ್ನು ಒಳಗೊಂಡಿದ್ದು, ವಿಭಜನೆಯ ತಂತ್ರವಾಗಿದೆ’ ಎಂದು ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ದೂರಿದ್ದಾರೆ. </p>.<p>ಈ ಆರೋಪಗಳನ್ನು ಬಿಜೆಪಿ ತಿರಸ್ಕರಿಸಿದೆ. ‘ಕೋಮು ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ವಂದೇ ಮಾತರಂ ಗೀತೆಯ ಕೆಲ ಚರಣಗಳನ್ನು ಕತ್ತರಿಸಿತ್ತು. ಆ ಐತಿಹಾಸಿಕ ತಪ್ಪನ್ನು ಈಗ ಸರಿಪಡಿಸಲಾಗಿದೆ’ ಎಂದು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>