<p><strong>ಛತ್ರಪತಿ ಸಾಂಭಾಜಿನಗರ(ಮಹಾರಾಷ್ಟ್ರ):</strong> ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ಹೇಳಿದ್ದಾರೆ.</p><p>‘ಜನ ಗಣ ಮನವನ್ನು ರವೀಂದ್ರನಾಥ್ ಟ್ಯಾಗೋರ್ ಬೆಂಗಾಲಿಯಲ್ಲಿ ರಚಿಸಿದ್ದರು. ಅದರ ಹಿಂದಿ ಅವತರಣಿಕೆಯನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಳ್ಳುವ ನಿರ್ಧಾರವನ್ನು 1950ರ ಜನವರಿ 24ರಂದು ನಡೆದ ಸಂವಿಧಾನ ರಚನಾ ಸಮಿತಿ ಸಭೆಯು ನಿರ್ಧಾರ ಕೈಗೊಂಡಿತ್ತು.</p><p>‘ಈ ಗೀತೆಯನ್ನು 1911ರಲ್ಲಿ ಕೋಲ್ಕತ್ತದಲ್ಲಿ ರವೀಂದ್ರನಾಥ್ ಟ್ಯಾಗೋರ್ ಹಾಡಿದ್ದರು. ಆ ಸಮಯದಲ್ಲಿ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಭಾರತದಲ್ಲಿ ಅನ್ಯಾಯ ಎಸಗುತ್ತಿದ್ದ ಬ್ರಿಟಿಷ್ ದೊರೆ ಜಾರ್ಜ್. ವಿ ಎದುರು ಟ್ಯಾಗೋರ್ ಈ ಗೀತೆಯನ್ನು ಹಾಡಿದ್ದರು. ದೇಶವನ್ನು ಪ್ರತಿನಿಧಿಸಲು ಈ ಗೀತೆಯನ್ನು ಹಾಡಿರಲಿಲ್ಲ’ಎಂದು ರಾಮಗಿರಿ ಮಹಾರಾಜ್ ಹೇಳಿದ್ದಾರೆ.</p><p>‘ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿ ಘೋಷಿಸಲು ನಾವು ಹೋರಾಟ ಸಂಘಟಿಸಬೇಕಿದೆ. ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಲೇಬೇಕು’ಎಂದಿದ್ದಾರೆ.</p><p>ಬಳಿಕ, ವಿವಾದಾತ್ಮಕ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಾರಾಜ್, ಇದು ಗೌರವ ಅಥವಾ ಅಗೌರವದ ವಿಚಾರವಲ್ಲ. ಸತ್ಯ ಹೇಳುವುದಾಗಿದೆ ಎಂದಿದ್ದಾರೆ.</p><p>‘ಸತ್ಯ ಹೇಳುವುದೇ ಅಗೌರವ ಎನ್ನುವುದಾದರೆ, ಅತ್ಯಂತ ದುರದೃಷ್ಟಕರ’ಎಂದಿದ್ದಾರೆ.</p><p>‘ಮಿಷನ್ ಅಯೋಧ್ಯ’ಚಿತ್ರದ ಟ್ರೇಲರ್ ಬಿಡುಗಡೆಗಾಗಿ ರಾಮಗಿರಿ ಮಹಾರಾಜ್ ಇಲ್ಲಿಗೆ ಆಗಮಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಾಂಭಾಜಿನಗರ(ಮಹಾರಾಷ್ಟ್ರ):</strong> ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ಹೇಳಿದ್ದಾರೆ.</p><p>‘ಜನ ಗಣ ಮನವನ್ನು ರವೀಂದ್ರನಾಥ್ ಟ್ಯಾಗೋರ್ ಬೆಂಗಾಲಿಯಲ್ಲಿ ರಚಿಸಿದ್ದರು. ಅದರ ಹಿಂದಿ ಅವತರಣಿಕೆಯನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಳ್ಳುವ ನಿರ್ಧಾರವನ್ನು 1950ರ ಜನವರಿ 24ರಂದು ನಡೆದ ಸಂವಿಧಾನ ರಚನಾ ಸಮಿತಿ ಸಭೆಯು ನಿರ್ಧಾರ ಕೈಗೊಂಡಿತ್ತು.</p><p>‘ಈ ಗೀತೆಯನ್ನು 1911ರಲ್ಲಿ ಕೋಲ್ಕತ್ತದಲ್ಲಿ ರವೀಂದ್ರನಾಥ್ ಟ್ಯಾಗೋರ್ ಹಾಡಿದ್ದರು. ಆ ಸಮಯದಲ್ಲಿ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಭಾರತದಲ್ಲಿ ಅನ್ಯಾಯ ಎಸಗುತ್ತಿದ್ದ ಬ್ರಿಟಿಷ್ ದೊರೆ ಜಾರ್ಜ್. ವಿ ಎದುರು ಟ್ಯಾಗೋರ್ ಈ ಗೀತೆಯನ್ನು ಹಾಡಿದ್ದರು. ದೇಶವನ್ನು ಪ್ರತಿನಿಧಿಸಲು ಈ ಗೀತೆಯನ್ನು ಹಾಡಿರಲಿಲ್ಲ’ಎಂದು ರಾಮಗಿರಿ ಮಹಾರಾಜ್ ಹೇಳಿದ್ದಾರೆ.</p><p>‘ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿ ಘೋಷಿಸಲು ನಾವು ಹೋರಾಟ ಸಂಘಟಿಸಬೇಕಿದೆ. ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಲೇಬೇಕು’ಎಂದಿದ್ದಾರೆ.</p><p>ಬಳಿಕ, ವಿವಾದಾತ್ಮಕ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಾರಾಜ್, ಇದು ಗೌರವ ಅಥವಾ ಅಗೌರವದ ವಿಚಾರವಲ್ಲ. ಸತ್ಯ ಹೇಳುವುದಾಗಿದೆ ಎಂದಿದ್ದಾರೆ.</p><p>‘ಸತ್ಯ ಹೇಳುವುದೇ ಅಗೌರವ ಎನ್ನುವುದಾದರೆ, ಅತ್ಯಂತ ದುರದೃಷ್ಟಕರ’ಎಂದಿದ್ದಾರೆ.</p><p>‘ಮಿಷನ್ ಅಯೋಧ್ಯ’ಚಿತ್ರದ ಟ್ರೇಲರ್ ಬಿಡುಗಡೆಗಾಗಿ ರಾಮಗಿರಿ ಮಹಾರಾಜ್ ಇಲ್ಲಿಗೆ ಆಗಮಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>