<p><strong>ನವದೆಹಲಿ:</strong> ರಾಷ್ಟ್ರಗೀತೆ ‘ಜನಗಣಮನ’ದಂತೆಯೇ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಶಾಲೆಗಳಲ್ಲಿ ಇನ್ನಮುಂದೆ ‘ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.</p><p>ರಾಷ್ಟ್ರಗೀತೆಗೂ ಮುನ್ನ 3 ನಿಮಿಷ 10 ಸೆಂಕೆಂಡ್ನ ‘ವಂದೇ ಮಾತರಂ’ನ 6 ಚರಣಗಳನ್ನು ಹಾಡಬೇಕು. ಹಾಗೆಯೇ ಗೀತೆಯನ್ನು ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.</p><p>ರಾಷ್ಟ್ರೀಯ ಗೀತೆಯನ್ನು ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ರಾಷ್ಟ್ರಪತಿಯವರು ಭಾಗವಹಿಸುವ ಎಲ್ಲಾ ಇತರ ಕಾರ್ಯಕ್ರಮಗಳಲ್ಲಿ ನುಡಿಸಬೇಕು. ಈ ಸಂದರ್ಭದಲ್ಲಿ ಎದ್ದು ನಿಲ್ಲುವುದು ಕಡ್ಡಾಯವಲ್ಲದಿದ್ದರೂ, ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಇದನ್ನು ನುಡಿಸಲಾಗುತ್ತಿದೆ.</p><p>ತ್ರಿವರ್ಣ ಧ್ವಜ ಹಾರಿಸುವುದು ಮತ್ತು ಔಪಚಾರಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಗಳ ಆಗಮನ ಸೇರಿದಂತೆ ಮಹತ್ವದ ಸಂದರ್ಭಗಳಲ್ಲಿ ವಂದೇ ಮಾತರಂನ 6 ಚರಣಗಳ ಪಠಣವು ಕಡ್ಡಾಯವಾಗಿರುತ್ತದೆ. ರಾಷ್ಟ್ರಗೀತೆಗೆ ಅಡ್ಡಿಪಡಿಸುವ ಅಥವಾ ಇತರರು ಗೌರವಿಸುವುದನ್ನು ತಡೆಯುವ ಯಾವುದೇ ವ್ಯಕ್ತಿಗೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.</p><p>ಸರ್ಕಾರಿ ಸಂಸ್ಥೆಗಳಲ್ಲಿ ಏಕರೂಪತೆ ಮತ್ತು ಶಿಷ್ಟಾಚಾರವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>2025ರ ಡಿಸೆಂಬರ್ನಲ್ಲಿ ‘ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು.</p><p>‘ವಂದೇ ಮಾತರಂ’ ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು’ ಎಂದು ಮೋದಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರಗೀತೆ ‘ಜನಗಣಮನ’ದಂತೆಯೇ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಶಾಲೆಗಳಲ್ಲಿ ಇನ್ನಮುಂದೆ ‘ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.</p><p>ರಾಷ್ಟ್ರಗೀತೆಗೂ ಮುನ್ನ 3 ನಿಮಿಷ 10 ಸೆಂಕೆಂಡ್ನ ‘ವಂದೇ ಮಾತರಂ’ನ 6 ಚರಣಗಳನ್ನು ಹಾಡಬೇಕು. ಹಾಗೆಯೇ ಗೀತೆಯನ್ನು ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.</p><p>ರಾಷ್ಟ್ರೀಯ ಗೀತೆಯನ್ನು ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ರಾಷ್ಟ್ರಪತಿಯವರು ಭಾಗವಹಿಸುವ ಎಲ್ಲಾ ಇತರ ಕಾರ್ಯಕ್ರಮಗಳಲ್ಲಿ ನುಡಿಸಬೇಕು. ಈ ಸಂದರ್ಭದಲ್ಲಿ ಎದ್ದು ನಿಲ್ಲುವುದು ಕಡ್ಡಾಯವಲ್ಲದಿದ್ದರೂ, ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಇದನ್ನು ನುಡಿಸಲಾಗುತ್ತಿದೆ.</p><p>ತ್ರಿವರ್ಣ ಧ್ವಜ ಹಾರಿಸುವುದು ಮತ್ತು ಔಪಚಾರಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಗಳ ಆಗಮನ ಸೇರಿದಂತೆ ಮಹತ್ವದ ಸಂದರ್ಭಗಳಲ್ಲಿ ವಂದೇ ಮಾತರಂನ 6 ಚರಣಗಳ ಪಠಣವು ಕಡ್ಡಾಯವಾಗಿರುತ್ತದೆ. ರಾಷ್ಟ್ರಗೀತೆಗೆ ಅಡ್ಡಿಪಡಿಸುವ ಅಥವಾ ಇತರರು ಗೌರವಿಸುವುದನ್ನು ತಡೆಯುವ ಯಾವುದೇ ವ್ಯಕ್ತಿಗೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.</p><p>ಸರ್ಕಾರಿ ಸಂಸ್ಥೆಗಳಲ್ಲಿ ಏಕರೂಪತೆ ಮತ್ತು ಶಿಷ್ಟಾಚಾರವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>2025ರ ಡಿಸೆಂಬರ್ನಲ್ಲಿ ‘ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು.</p><p>‘ವಂದೇ ಮಾತರಂ’ ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು’ ಎಂದು ಮೋದಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>