‘ಮಸೀದಿಯ ಆವರಣದಲ್ಲಿರುವ ನೀರಿನ ತೊಟ್ಟಿಯನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸೂಚಿಸಿದೆ. ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಅವಕಾಶ ನೀಡಿದರೆ, ಆ ಜಾಗಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಹಾಗೆ ಆದರೆ, ಅದು ಸುಪ್ರೀಂ ಕೋರ್ಟ್ನ ಸೂಚನೆಯ ಉಲ್ಲಂಘನೆಯಾಗುತ್ತದೆ. ಜತೆಗೆ ಅದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯೂ ಇದೆ’ ಎಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ತೀರ್ಪು ನೀಡಿದ್ದಾರೆ.