<p><strong>ವಾರಾಣಸಿ:</strong> ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಇಲಾಖೆ (ASI) ನಡೆಸಿರುವ ವೈಜ್ಞಾನಿಕ ಸರ್ವೆಯ ವರದಿಯನ್ನು ಯಾವಾಗ ಬಹಿರಂಗ ಪಡಿಸಬೇಕು ಎಂಬುದನ್ನು ವಾರಾಣಸಿ ನ್ಯಾಯಾಲಯ ಶನಿವಾರ (ಜನವರಿ 6ರಂದು) ಪ್ರಕಟಿಸಲಿದೆ.</p><p>ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಅರ್ಜಿ ಕುರಿತು ಶುಕ್ರವಾರ ವಿಚಾರಣೆ ಆರಂಭಿಸಿದರು. ಆದರೆ ಬೆರಳಚ್ಚು ಮಾಡದ ಕಾರಣ, ಆದೇಶವನ್ನು ಶನಿವಾರ ಪ್ರಕಟಿಸಲಾಗುವುದು ಎಂದು ತಿಳಿಸಿರುವುದಾಗಿ ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ತಿಳಿಸಿದ್ದಾರೆ.</p><p>ವಿಚಾರಣೆ ಸಂದರ್ಭದಲ್ಲಿ ಹಿಂದೂ, ಮುಸ್ಲಿಂ ಮತ್ತು ಭಾರತೀಯ ಪುರಾತತ್ವ ಇಲಾಖೆ (ASI) ಅಧಿಕಾರಿಗಳು ನ್ಯಾಯಾಲಯದಲ್ಲಿ ಇದ್ದರು.</p><p>ಸರ್ವೆ ವರದಿಯನ್ನು ಕಳೆದ ತಿಂಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಎಎಸ್ಐ, ಕನಿಷ್ಠ ನಾಲ್ಕು ವಾರಗಳ ಕಾಲ ಬಹಿರಂಗಪಡಿಸಬಾರದು ಎಂದು ಮನವಿ ಮಾಡಿತ್ತು. ಆದರೆ, ಕಾರಣವನ್ನು ಸ್ಪಷ್ಟವಾಗಿ ಹೇಳಿರಲಿಲ್ಲ.</p><p>ಮೊಘಲ್ ದೊರೆ ಔರಂಗಜೇಬ್ 17ನೇ ಶತಮಾನದಲ್ಲಿ ದೇವಸ್ಥಾನದ ಒಂದು ಭಾಗವನ್ನು ಧ್ವಂಸಗೊಳಿಸಿದ್ದ. ಬಳಿಕ ಅಲ್ಲಿ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಅರ್ಜಿದಾರರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಔರಂಗಜೇಬ್ನ ಆಡಳಿತ ಅವಧಿಗಿಂತ ಮೊದಲೂ ಆ ಮಸೀದಿ ಇತ್ತು ಎಂಬುದಾಗಿ ಮುಸ್ಲಿಂ ಪ್ರತಿವಾದಿಗಳು ಪ್ರತಿಪಾದಿಸಿದ್ದರು. ಹೀಗಾಗಿ, ನ್ಯಾಯಾಲಯವು ಜುಲೈ 21ರಂದು ವೈಜ್ಞಾನಿಕ ಸರ್ವೆಗೆ ಆದೇಶಿಸಿತ್ತು.</p><p>ಡಿ. 18ರಂದು ಎಎಸ್ಐ ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿಯನ್ನು ನೀಡಿದ್ದರು. ಆದರೆ ವರದಿಯನ್ನು ಪ್ರಕಟಿಸುವ ಅವಧಿಯನ್ನು ನಾಲ್ಕು ವಾರಗಳ ಕಾಲ ಮುಂದೂಡುವಂತೆ ಅಧಿಕಾರಿಗಳು ಇತ್ತೀಚೆಗೆ ನ್ಯಾಯಾಲಯವನ್ನು ಕೋರಿದ್ದರು.</p><p>ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಜಿಲ್ಲಾ ನ್ಯಾಯಾಲಯ, ಆದೇಶವನ್ನು ಶನಿವಾರ ಪ್ರಕಟಿಸುವುದಾಗಿ ಹೇಳಿದೆ.</p>.ಜ್ಞಾನವಾಪಿ ಮಸೀದಿ ಸರ್ವೆ ವರದಿ ಬಹಿರಂಗ ಯಾವಾಗ? ಕೋರ್ಟ್ ಆದೇಶ ನಾಳೆ.ಜ್ಞಾನವಾಪಿ ಮಸೀದಿ: 4 ವಾರಗಳ ಕಾಲ ವರದಿ ಬಹಿರಂಗಪಡಿಸದಂತೆ ಕೋರ್ಟ್ಗೆ ASI ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಇಲಾಖೆ (ASI) ನಡೆಸಿರುವ ವೈಜ್ಞಾನಿಕ ಸರ್ವೆಯ ವರದಿಯನ್ನು ಯಾವಾಗ ಬಹಿರಂಗ ಪಡಿಸಬೇಕು ಎಂಬುದನ್ನು ವಾರಾಣಸಿ ನ್ಯಾಯಾಲಯ ಶನಿವಾರ (ಜನವರಿ 6ರಂದು) ಪ್ರಕಟಿಸಲಿದೆ.</p><p>ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಅರ್ಜಿ ಕುರಿತು ಶುಕ್ರವಾರ ವಿಚಾರಣೆ ಆರಂಭಿಸಿದರು. ಆದರೆ ಬೆರಳಚ್ಚು ಮಾಡದ ಕಾರಣ, ಆದೇಶವನ್ನು ಶನಿವಾರ ಪ್ರಕಟಿಸಲಾಗುವುದು ಎಂದು ತಿಳಿಸಿರುವುದಾಗಿ ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ತಿಳಿಸಿದ್ದಾರೆ.</p><p>ವಿಚಾರಣೆ ಸಂದರ್ಭದಲ್ಲಿ ಹಿಂದೂ, ಮುಸ್ಲಿಂ ಮತ್ತು ಭಾರತೀಯ ಪುರಾತತ್ವ ಇಲಾಖೆ (ASI) ಅಧಿಕಾರಿಗಳು ನ್ಯಾಯಾಲಯದಲ್ಲಿ ಇದ್ದರು.</p><p>ಸರ್ವೆ ವರದಿಯನ್ನು ಕಳೆದ ತಿಂಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಎಎಸ್ಐ, ಕನಿಷ್ಠ ನಾಲ್ಕು ವಾರಗಳ ಕಾಲ ಬಹಿರಂಗಪಡಿಸಬಾರದು ಎಂದು ಮನವಿ ಮಾಡಿತ್ತು. ಆದರೆ, ಕಾರಣವನ್ನು ಸ್ಪಷ್ಟವಾಗಿ ಹೇಳಿರಲಿಲ್ಲ.</p><p>ಮೊಘಲ್ ದೊರೆ ಔರಂಗಜೇಬ್ 17ನೇ ಶತಮಾನದಲ್ಲಿ ದೇವಸ್ಥಾನದ ಒಂದು ಭಾಗವನ್ನು ಧ್ವಂಸಗೊಳಿಸಿದ್ದ. ಬಳಿಕ ಅಲ್ಲಿ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಅರ್ಜಿದಾರರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಔರಂಗಜೇಬ್ನ ಆಡಳಿತ ಅವಧಿಗಿಂತ ಮೊದಲೂ ಆ ಮಸೀದಿ ಇತ್ತು ಎಂಬುದಾಗಿ ಮುಸ್ಲಿಂ ಪ್ರತಿವಾದಿಗಳು ಪ್ರತಿಪಾದಿಸಿದ್ದರು. ಹೀಗಾಗಿ, ನ್ಯಾಯಾಲಯವು ಜುಲೈ 21ರಂದು ವೈಜ್ಞಾನಿಕ ಸರ್ವೆಗೆ ಆದೇಶಿಸಿತ್ತು.</p><p>ಡಿ. 18ರಂದು ಎಎಸ್ಐ ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿಯನ್ನು ನೀಡಿದ್ದರು. ಆದರೆ ವರದಿಯನ್ನು ಪ್ರಕಟಿಸುವ ಅವಧಿಯನ್ನು ನಾಲ್ಕು ವಾರಗಳ ಕಾಲ ಮುಂದೂಡುವಂತೆ ಅಧಿಕಾರಿಗಳು ಇತ್ತೀಚೆಗೆ ನ್ಯಾಯಾಲಯವನ್ನು ಕೋರಿದ್ದರು.</p><p>ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಜಿಲ್ಲಾ ನ್ಯಾಯಾಲಯ, ಆದೇಶವನ್ನು ಶನಿವಾರ ಪ್ರಕಟಿಸುವುದಾಗಿ ಹೇಳಿದೆ.</p>.ಜ್ಞಾನವಾಪಿ ಮಸೀದಿ ಸರ್ವೆ ವರದಿ ಬಹಿರಂಗ ಯಾವಾಗ? ಕೋರ್ಟ್ ಆದೇಶ ನಾಳೆ.ಜ್ಞಾನವಾಪಿ ಮಸೀದಿ: 4 ವಾರಗಳ ಕಾಲ ವರದಿ ಬಹಿರಂಗಪಡಿಸದಂತೆ ಕೋರ್ಟ್ಗೆ ASI ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>