<p class="bodytext"><strong>ನವದೆಹಲಿ: </strong>ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರಗಳಲ್ಲಿ ನೀಡಿರುವ ರಿಯಾಯಿತಿಯನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಮಾನಗಳ ತುರ್ತು ಭೂಸ್ಪರ್ಶದ ಪ್ರಕರಣಗಳು ದೇಶದಲ್ಲಿ ಪದೇ ಪದೇ ನಡೆಯುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.</p>.<p class="bodytext">ಈ ಕುರಿತು ಟ್ವೀಟ್ ಮಾಡಿರುವ ವರುಣ್, ’ರೈಲುಗಳ ಪ್ರಯಾಣ ದರಗಳಲ್ಲಿ ಸಂಸದರಿಗೆ ರಿಯಾಯಿತಿ ಮುಂದುವರಿದಿದೆ. ಆದರೆ, ಹಿರಿಯ ನಾಗರಿಕರಿಗೆ ನೀಡಿರುವ ರಿಯಾಯಿತಿಯನ್ನು ಕೇಂದ್ರವು ‘ಹೊರೆ’ ಎಂದು ಯಾಕೆ ಪರಿಗಣಿಸಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p class="bodytext">ಇದನ್ನೂ ಓದಿ:<a href="https://www.prajavani.net/india-news/rahul-gandhi-slams-govt-for-ending-rail-concession-for-senior-citizens-956583.html" itemprop="url">ಜಾಹೀರಾತಿಗೆ ಕೋಟಿಗಟ್ಟಲೆ ಖರ್ಚು ಮಾಡುವ ಸರ್ಕಾರದ ಬಳಿ ದುಡ್ಡಿಲ್ಲ: ರಾಹುಲ್ </a></p>.<p class="bodytext">ರೈಲ್ವೆ ಸಚಿವಾಲಯದ ಈ ನಿರ್ಧಾರವು ದುರದೃಷ್ಟಕರ. ಈ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಜೀವನದ ಸಂಧ್ಯಾಕಾಲದಲ್ಲಿರುವವರ ಕುರಿತು ಇಂಥ ನಿರ್ಧಾರ ತೆಗೆದುಕೊಳ್ಳುವುದು ಸಂವೇದನಾರಹಿತ’ ಎಂದಿದ್ದಾರೆ.</p>.<p>‘ದೇಶೀಯ ವಿಮಾನಗಳ ದರವನ್ನು ದ್ವಿಗುಣ ಮಾಡಲಾಗಿದೆ. ಆದರೆ, ವಿಮಾನಗಳ ತುರ್ತು ಭೂಸ್ಪರ್ಶ ಪ್ರಕರಣಗಳು ಹೆಚ್ಚಾಗಿವೆ. ಯಾವುದಾದರೂ ‘ದೊಡ್ಡ ಘಟನೆ’ ಸಂಭವಿಸಲಿ ಎಂದು ಕೇಂದ್ರ ಕಾಯುತ್ತಿರುವಂತಿದೆ ಎಂದು ವರಣ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೆಶನಾಲಯವು (ಡಿಜಿಸಿಎ) ಈ ಕುರಿತು ಗಂಭೀರವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>ಪ್ರಯಾಣಿಕರಿಗೆ ದರಗಳಲ್ಲಿ ರಿಯಾಯಿತಿ ನೀಡುವುದು ‘ಭಾರಿ ಹೊರೆ’ಯಾಗಿದೆ ಎಂದು ರೈಲ್ವೆ ಸಚಿವಾಲಯವು ಲೋಕಸಭೆಗೆ ತಿಳಿಸಿತ್ತು. ಪ್ರಯಾಣಿಕರಿಗೆ ರಿಯಾಯಿತಿ ನೀಡುವುದಿಲ್ಲ ಎಂದೂ ಹೇಳಿತ್ತು.</p>.<p>‘ಪ್ರಯಾಣಿಕರಿಗೆ ಕಡಿಮೆ ದರಗಳಲ್ಲಿ ಟಿಕೆಟ್ ನೀಡುತ್ತಿದ್ದು, ಪ್ರಯಾಣದ ಶೇ 50ರಷ್ಟು ದರವನ್ನು ಸಚಿವಾಲಯ ಈಗಾಗಲೇ ಭರಿಸುತ್ತಿದೆ.2017ರಿಂದ 2020ರವರೆಗೆ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಿರುವುದರಿಂದ ₹4,794 ಕೋಟಿ ಆದಾಯವನ್ನು ಸಚಿವಾಲಯವು ಕಳೆದುಕೊಂಡಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ: </strong>ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರಗಳಲ್ಲಿ ನೀಡಿರುವ ರಿಯಾಯಿತಿಯನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಮಾನಗಳ ತುರ್ತು ಭೂಸ್ಪರ್ಶದ ಪ್ರಕರಣಗಳು ದೇಶದಲ್ಲಿ ಪದೇ ಪದೇ ನಡೆಯುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.</p>.<p class="bodytext">ಈ ಕುರಿತು ಟ್ವೀಟ್ ಮಾಡಿರುವ ವರುಣ್, ’ರೈಲುಗಳ ಪ್ರಯಾಣ ದರಗಳಲ್ಲಿ ಸಂಸದರಿಗೆ ರಿಯಾಯಿತಿ ಮುಂದುವರಿದಿದೆ. ಆದರೆ, ಹಿರಿಯ ನಾಗರಿಕರಿಗೆ ನೀಡಿರುವ ರಿಯಾಯಿತಿಯನ್ನು ಕೇಂದ್ರವು ‘ಹೊರೆ’ ಎಂದು ಯಾಕೆ ಪರಿಗಣಿಸಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p class="bodytext">ಇದನ್ನೂ ಓದಿ:<a href="https://www.prajavani.net/india-news/rahul-gandhi-slams-govt-for-ending-rail-concession-for-senior-citizens-956583.html" itemprop="url">ಜಾಹೀರಾತಿಗೆ ಕೋಟಿಗಟ್ಟಲೆ ಖರ್ಚು ಮಾಡುವ ಸರ್ಕಾರದ ಬಳಿ ದುಡ್ಡಿಲ್ಲ: ರಾಹುಲ್ </a></p>.<p class="bodytext">ರೈಲ್ವೆ ಸಚಿವಾಲಯದ ಈ ನಿರ್ಧಾರವು ದುರದೃಷ್ಟಕರ. ಈ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಜೀವನದ ಸಂಧ್ಯಾಕಾಲದಲ್ಲಿರುವವರ ಕುರಿತು ಇಂಥ ನಿರ್ಧಾರ ತೆಗೆದುಕೊಳ್ಳುವುದು ಸಂವೇದನಾರಹಿತ’ ಎಂದಿದ್ದಾರೆ.</p>.<p>‘ದೇಶೀಯ ವಿಮಾನಗಳ ದರವನ್ನು ದ್ವಿಗುಣ ಮಾಡಲಾಗಿದೆ. ಆದರೆ, ವಿಮಾನಗಳ ತುರ್ತು ಭೂಸ್ಪರ್ಶ ಪ್ರಕರಣಗಳು ಹೆಚ್ಚಾಗಿವೆ. ಯಾವುದಾದರೂ ‘ದೊಡ್ಡ ಘಟನೆ’ ಸಂಭವಿಸಲಿ ಎಂದು ಕೇಂದ್ರ ಕಾಯುತ್ತಿರುವಂತಿದೆ ಎಂದು ವರಣ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೆಶನಾಲಯವು (ಡಿಜಿಸಿಎ) ಈ ಕುರಿತು ಗಂಭೀರವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>ಪ್ರಯಾಣಿಕರಿಗೆ ದರಗಳಲ್ಲಿ ರಿಯಾಯಿತಿ ನೀಡುವುದು ‘ಭಾರಿ ಹೊರೆ’ಯಾಗಿದೆ ಎಂದು ರೈಲ್ವೆ ಸಚಿವಾಲಯವು ಲೋಕಸಭೆಗೆ ತಿಳಿಸಿತ್ತು. ಪ್ರಯಾಣಿಕರಿಗೆ ರಿಯಾಯಿತಿ ನೀಡುವುದಿಲ್ಲ ಎಂದೂ ಹೇಳಿತ್ತು.</p>.<p>‘ಪ್ರಯಾಣಿಕರಿಗೆ ಕಡಿಮೆ ದರಗಳಲ್ಲಿ ಟಿಕೆಟ್ ನೀಡುತ್ತಿದ್ದು, ಪ್ರಯಾಣದ ಶೇ 50ರಷ್ಟು ದರವನ್ನು ಸಚಿವಾಲಯ ಈಗಾಗಲೇ ಭರಿಸುತ್ತಿದೆ.2017ರಿಂದ 2020ರವರೆಗೆ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಿರುವುದರಿಂದ ₹4,794 ಕೋಟಿ ಆದಾಯವನ್ನು ಸಚಿವಾಲಯವು ಕಳೆದುಕೊಂಡಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>