ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಘನಶ್ಯಾಮ ತಿವಾರಿ ರಾಜೇ ಅವರ ಹೆಸರನ್ನು ಉಲ್ಲೇಖಿಸಿಲ್ಲ.ಅದರ ಬದಲುರಾಜಸ್ಥಾನ ಸರ್ಕಾರದ ಮುಖ್ಯಸ್ಥೆ, ಕೆಲವು ಸಚಿವರು ಮತ್ತು ಅಧಿಕಾರಿಗಳು ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದು, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ತಮ್ಮ ಲಾಭಕ್ಕಾಗಿ ಮುಖ್ಯಮಂತ್ರಿಯವರು ಉನ್ನತ ಹುದ್ದೆಗಳಿಗೆ ನೇಮಕ ಮಾಡುವಾಗ ಸ್ವಜನ ಪಕ್ಷಪಾತ ಮಾಡುತ್ತಿದ್ದು ಹೊಸ ನಿಯಮಗಳನ್ನು ತರುತ್ತಿದ್ದಾರೆ.ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.