<p><strong>ವಯನಾಡ್(ಪಿಟಿಐ):</strong> ವಯನಾಡ್ ಮಾರ್ಗದಲ್ಲಿ ರಾತ್ರಿ ವೇಳೆ ಬಸ್ ಸಂಚಾರ ನಿಷೇಧ ಸಮಸ್ಯೆ ಪರಿಹರಿಸುವ ಕುರಿತು ಶಿಫಾರಸು ಮಾಡುವುದಕ್ಕಾಗಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p>.<p>‘ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಬಂಡೀಪುರ ಅರಣ್ಯದಲ್ಲಿ ಸುರಂಗ ನಿರ್ಮಿಸಿ ಪರ್ಯಾಯ ಮಾರ್ಗ ಕಲ್ಪಿಸುವುದು ಕಾರ್ಯಸಾಧುವೇ ಎಂಬ ಬಗ್ಗೆ ಈ ಸಮಿತಿ ಅಧ್ಯಯನ ನಡೆಸಲಿದೆ ಎಂಬುದಾಗಿ ಸಚಿವ ಗಡ್ಕರಿ ತಿಳಿಸಿದ್ದಾರೆ’ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>‘ಪ್ರಿಯಾಂಕಾ ಗಾಂಧಿ ಅವರು ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರೀಯ ರಸ್ತೆ ಮೂಲಸೌಕರ್ಯ ನಿಧಿಯಡಿ(ಸಿಆರ್ಐಎಫ್) ₹105 ಕೋಟಿ ತೆಗೆದಿರಿಸಲಾಗಿದೆ ಎಂಬುದಾಗಿಯೂ ಗಡ್ಕರಿ ತಿಳಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್(ಪಿಟಿಐ):</strong> ವಯನಾಡ್ ಮಾರ್ಗದಲ್ಲಿ ರಾತ್ರಿ ವೇಳೆ ಬಸ್ ಸಂಚಾರ ನಿಷೇಧ ಸಮಸ್ಯೆ ಪರಿಹರಿಸುವ ಕುರಿತು ಶಿಫಾರಸು ಮಾಡುವುದಕ್ಕಾಗಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p>.<p>‘ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಬಂಡೀಪುರ ಅರಣ್ಯದಲ್ಲಿ ಸುರಂಗ ನಿರ್ಮಿಸಿ ಪರ್ಯಾಯ ಮಾರ್ಗ ಕಲ್ಪಿಸುವುದು ಕಾರ್ಯಸಾಧುವೇ ಎಂಬ ಬಗ್ಗೆ ಈ ಸಮಿತಿ ಅಧ್ಯಯನ ನಡೆಸಲಿದೆ ಎಂಬುದಾಗಿ ಸಚಿವ ಗಡ್ಕರಿ ತಿಳಿಸಿದ್ದಾರೆ’ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>‘ಪ್ರಿಯಾಂಕಾ ಗಾಂಧಿ ಅವರು ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರೀಯ ರಸ್ತೆ ಮೂಲಸೌಕರ್ಯ ನಿಧಿಯಡಿ(ಸಿಆರ್ಐಎಫ್) ₹105 ಕೋಟಿ ತೆಗೆದಿರಿಸಲಾಗಿದೆ ಎಂಬುದಾಗಿಯೂ ಗಡ್ಕರಿ ತಿಳಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>