<p><strong>ಇಂದೋರ್:</strong> ವಿಬಿ–ಜಿ–ರಾಮ್ ಜಿ ಮಸೂದೆಯು ದೇಶದ ಹಿತಾಸಕ್ತಿ. ನರೇಗಾ ಕಾಯ್ದೆಯಡಿಯಲ್ಲಿ ಫಲಾನುಭವಿಗಳ ಕೂಲಿ ಹಣವನ್ನು ಲೂಟಿ ಮಾಡುತ್ತಿದ್ದವರಿಗಷ್ಟೇ ಮಸೂದೆಯ ಅನುಷ್ಠಾನದಿಂದ ನೋವಾಗಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.</p>.<p>ಹೊಸ ಮಸೂದೆಯು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲಿದೆ. ಇದರಿಂದ ರೈತರು ಮತ್ತು ಯುವಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು. </p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದ ಅವರು ‘ಅವರು ವಿರೋಧ ಪಕ್ಷಗಳ ನಾಯಕರಾಗಿದ್ದರೆ ಕನಿಷ್ಠ ಸಂಸತ್ತಿನಲ್ಲಿ ಇರಬೇಕು’ ಎಂದು ಹೇಳಿದರು. </p>.<p>‘ಕಾಂಗ್ರೆಸ್ ನರೇಗಾ ಯೋಜನೆ ಜಾರಿ ಮಾಡಿದಾಗ ₹10000 ಕೋಟಿಯನ್ನೂ ಮೀಸಲಿಡುತ್ತಿರಲಿಲ್ಲ. ಆದರೆ ವಿಬಿ–ಜಿ–ರಾಮ್ ಜಿ ಮಸೂದೆಯು ₹1 ಲಕ್ಷ ಕೋಟಿಗಿಂತ ಅಧಿಕ ಹಣವನ್ನು ಒದಗಿಸುತ್ತಿದೆ. ಇದು ಗ್ರಾಮೀಣ ಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ’ ಎಂದರು.</p>.ವಿಬಿ–ಜಿ ರಾಮ್ ಜಿ ಕಾಯ್ದೆಯೂ ರದ್ದಾಗಲಿದೆ: ಡಿಎಂಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ವಿಬಿ–ಜಿ–ರಾಮ್ ಜಿ ಮಸೂದೆಯು ದೇಶದ ಹಿತಾಸಕ್ತಿ. ನರೇಗಾ ಕಾಯ್ದೆಯಡಿಯಲ್ಲಿ ಫಲಾನುಭವಿಗಳ ಕೂಲಿ ಹಣವನ್ನು ಲೂಟಿ ಮಾಡುತ್ತಿದ್ದವರಿಗಷ್ಟೇ ಮಸೂದೆಯ ಅನುಷ್ಠಾನದಿಂದ ನೋವಾಗಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.</p>.<p>ಹೊಸ ಮಸೂದೆಯು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲಿದೆ. ಇದರಿಂದ ರೈತರು ಮತ್ತು ಯುವಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು. </p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದ ಅವರು ‘ಅವರು ವಿರೋಧ ಪಕ್ಷಗಳ ನಾಯಕರಾಗಿದ್ದರೆ ಕನಿಷ್ಠ ಸಂಸತ್ತಿನಲ್ಲಿ ಇರಬೇಕು’ ಎಂದು ಹೇಳಿದರು. </p>.<p>‘ಕಾಂಗ್ರೆಸ್ ನರೇಗಾ ಯೋಜನೆ ಜಾರಿ ಮಾಡಿದಾಗ ₹10000 ಕೋಟಿಯನ್ನೂ ಮೀಸಲಿಡುತ್ತಿರಲಿಲ್ಲ. ಆದರೆ ವಿಬಿ–ಜಿ–ರಾಮ್ ಜಿ ಮಸೂದೆಯು ₹1 ಲಕ್ಷ ಕೋಟಿಗಿಂತ ಅಧಿಕ ಹಣವನ್ನು ಒದಗಿಸುತ್ತಿದೆ. ಇದು ಗ್ರಾಮೀಣ ಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ’ ಎಂದರು.</p>.ವಿಬಿ–ಜಿ ರಾಮ್ ಜಿ ಕಾಯ್ದೆಯೂ ರದ್ದಾಗಲಿದೆ: ಡಿಎಂಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>