<p><strong>ಚೆನ್ನೈ</strong>: ‘ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವುದನ್ನು ತಡೆಯಲು ಮತ್ತು ಜನರ ತೀರ್ಪನ್ನು ಗೌರವಿಸುವ ದೃಷ್ಠಿಯಿಂದ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಸರ್ಕಾರ ರಚಿಸಲು ಬೆಂಬಲ ನೀಡಲಾಗಿದೆ’ ಎಂದು ವಿಕೆಸಿ ಪಕ್ಷದ ಮುಖ್ಯಸ್ಥ ತೋಲ್ ತಿರುಮಾವಳವನ್ ತಿಳಿಸಿದ್ದಾರೆ.</p><p>ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿವಿಕೆಗೆ ಬೆಂಬಲ ನೀಡಿದರೂ ನಮ್ಮ ಪಕ್ಷ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಲ್ಲಿಯೇ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>‘ಪಕ್ಷದ ನಿಲುವನ್ನು ಈಗಾಗಲೇ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರಿಗೆ ತಿಳಿಸಲಾಗಿದ್ದು, ವಿಕೆಸಿ ಮತ್ತು ಎಡಪಕ್ಷಗಳ ಈ ಒಮ್ಮತದ ನಿರ್ಧಾರಕ್ಕೆ ಅವರು ಸಮ್ಮತಿಸಿದ್ದಾರೆ. ವಿಜಯ್ ಅವರು ಸರ್ಕಾರ ರಚಿಸುವುದಕ್ಕೆ ನಾವು ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p><p>ಸಿಪಿಐ ರಾಜ್ಯ ಕಾರ್ಯದರ್ಶಿ ಎಂ. ವೀರಪಾಂಡಿಯನ್ ಮಾತನಾಡಿ, ‘ರಾಜ್ಯಪಾಲರು ಸಂವಿಧಾನವನ್ನು ಗೌರವಿಸುವ ಮೂಲಕ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p><p>ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದ ಟಿವಿಕೆಗೆ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ವಿಸಿಕೆ ಶನಿವಾರ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವುದನ್ನು ತಡೆಯಲು ಮತ್ತು ಜನರ ತೀರ್ಪನ್ನು ಗೌರವಿಸುವ ದೃಷ್ಠಿಯಿಂದ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಸರ್ಕಾರ ರಚಿಸಲು ಬೆಂಬಲ ನೀಡಲಾಗಿದೆ’ ಎಂದು ವಿಕೆಸಿ ಪಕ್ಷದ ಮುಖ್ಯಸ್ಥ ತೋಲ್ ತಿರುಮಾವಳವನ್ ತಿಳಿಸಿದ್ದಾರೆ.</p><p>ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿವಿಕೆಗೆ ಬೆಂಬಲ ನೀಡಿದರೂ ನಮ್ಮ ಪಕ್ಷ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಲ್ಲಿಯೇ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>‘ಪಕ್ಷದ ನಿಲುವನ್ನು ಈಗಾಗಲೇ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರಿಗೆ ತಿಳಿಸಲಾಗಿದ್ದು, ವಿಕೆಸಿ ಮತ್ತು ಎಡಪಕ್ಷಗಳ ಈ ಒಮ್ಮತದ ನಿರ್ಧಾರಕ್ಕೆ ಅವರು ಸಮ್ಮತಿಸಿದ್ದಾರೆ. ವಿಜಯ್ ಅವರು ಸರ್ಕಾರ ರಚಿಸುವುದಕ್ಕೆ ನಾವು ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p><p>ಸಿಪಿಐ ರಾಜ್ಯ ಕಾರ್ಯದರ್ಶಿ ಎಂ. ವೀರಪಾಂಡಿಯನ್ ಮಾತನಾಡಿ, ‘ರಾಜ್ಯಪಾಲರು ಸಂವಿಧಾನವನ್ನು ಗೌರವಿಸುವ ಮೂಲಕ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p><p>ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದ ಟಿವಿಕೆಗೆ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ವಿಸಿಕೆ ಶನಿವಾರ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>