<p><strong>ತಿರುವನಂತಪುರ:</strong> ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು, ತಮ್ಮ ಆದೇಶದ ವಿರುದ್ಧ ದಾವೆ ಹೂಡುವ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಇತರ ಅಧಿಕಾರಿಗಳು ತಾವೇ ಕಾನೂನು ಹೋರಾಟದ ವೆಚ್ಚವನ್ನು ಭರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಕಣ್ಣೂರು, ಕ್ಯಾಲಿಕಟ್ ವಿಶ್ವವಿದ್ಯಾಲಯ ಸೇರಿದಂತೆ ಇತರ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರು ಹೊರಡಿಸಿರುವ ನಿರ್ದೇಶನದಲ್ಲಿ, ಅಂತಹ ಪ್ರಕರಣಗಳಲ್ಲಿನ ಕಾನೂನು ವೆಚ್ಚಗಳಿಗೆ ವಿ.ವಿಗಳು ಹಣವನ್ನು ಮಂಜೂರು ಮಾಡುವುದು ಸಮರ್ಥನೀಯವಲ್ಲ ಮತ್ತು ಅದು ವಿ.ವಿ ನಿಧಿಯ ದುರ್ಬಳಕೆ ಆಗುತ್ತದೆ ಎಂದು ಉಲ್ಲೇಖಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳ ಅಧಿಕಾರಿಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳ ರಕ್ಷಣೆ ಮತ್ತು ಅದನ್ನು ಉತ್ತೇಜಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ ಕುಲಪತಿಗಳು ಮತ್ತು ಇತರ ಅಧಿಕಾರಿಗಳಿಗೆ ಕಾನೂನು ವೆಚ್ಚವನ್ನು ಭರಿಸಲು ವಿಶ್ವವಿದ್ಯಾಲಯ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅವರು ಸೂಚಿಸಿದ್ದಾರೆ.</p>.<p>ಒಂದು ವೇಳೆ ಅಂತಹ ಯಾವುದೇ ಪಾವತಿಗಳನ್ನು ಈಗಾಗಲೇ ಮಾಡಿದ್ದರೆ, ಆ ಮೊತ್ತವನ್ನು ಸಂಬಂಧಿಸಿದ ಅಧಿಕಾರಿಯಿಂದ ತಕ್ಷಣವೇ ವಸೂಲಿ ಮಾಡಲಾಗುತ್ತದೆ ಎಂದು ಖಾನ್ ಅವರು ಜುಲೈ 9ರಂದು ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಿದ್ದಾರೆ. ಅಲ್ಲದೆ ಈ ಸಂಬಂಧ ಸ್ಥಿತಿಗತಿ ವರದಿ ಸಲ್ಲಿಸುವಂತೆಯೂ ವಿ.ವಿಗಳಿಗೆ ಅವರು ಸೂಚಿಸಿದ್ದಾರೆ. </p>.<p>ವರದಿಯ ಪ್ರಕಾರ, ಕುಲಾಧಿಪಾತಿಯ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಂದರ್ಭದಲ್ಲಿ ಕುಲಪತಿಗಳು ಮತ್ತು ವಿ.ವಿಯ ಇತರ ಅಧಿಕಾರಿಗಳ ಪರವಾಗಿ ಕಾನೂನು ವೆಚ್ಚವಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು, ತಮ್ಮ ಆದೇಶದ ವಿರುದ್ಧ ದಾವೆ ಹೂಡುವ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಇತರ ಅಧಿಕಾರಿಗಳು ತಾವೇ ಕಾನೂನು ಹೋರಾಟದ ವೆಚ್ಚವನ್ನು ಭರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಕಣ್ಣೂರು, ಕ್ಯಾಲಿಕಟ್ ವಿಶ್ವವಿದ್ಯಾಲಯ ಸೇರಿದಂತೆ ಇತರ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರು ಹೊರಡಿಸಿರುವ ನಿರ್ದೇಶನದಲ್ಲಿ, ಅಂತಹ ಪ್ರಕರಣಗಳಲ್ಲಿನ ಕಾನೂನು ವೆಚ್ಚಗಳಿಗೆ ವಿ.ವಿಗಳು ಹಣವನ್ನು ಮಂಜೂರು ಮಾಡುವುದು ಸಮರ್ಥನೀಯವಲ್ಲ ಮತ್ತು ಅದು ವಿ.ವಿ ನಿಧಿಯ ದುರ್ಬಳಕೆ ಆಗುತ್ತದೆ ಎಂದು ಉಲ್ಲೇಖಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳ ಅಧಿಕಾರಿಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳ ರಕ್ಷಣೆ ಮತ್ತು ಅದನ್ನು ಉತ್ತೇಜಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ ಕುಲಪತಿಗಳು ಮತ್ತು ಇತರ ಅಧಿಕಾರಿಗಳಿಗೆ ಕಾನೂನು ವೆಚ್ಚವನ್ನು ಭರಿಸಲು ವಿಶ್ವವಿದ್ಯಾಲಯ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅವರು ಸೂಚಿಸಿದ್ದಾರೆ.</p>.<p>ಒಂದು ವೇಳೆ ಅಂತಹ ಯಾವುದೇ ಪಾವತಿಗಳನ್ನು ಈಗಾಗಲೇ ಮಾಡಿದ್ದರೆ, ಆ ಮೊತ್ತವನ್ನು ಸಂಬಂಧಿಸಿದ ಅಧಿಕಾರಿಯಿಂದ ತಕ್ಷಣವೇ ವಸೂಲಿ ಮಾಡಲಾಗುತ್ತದೆ ಎಂದು ಖಾನ್ ಅವರು ಜುಲೈ 9ರಂದು ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಿದ್ದಾರೆ. ಅಲ್ಲದೆ ಈ ಸಂಬಂಧ ಸ್ಥಿತಿಗತಿ ವರದಿ ಸಲ್ಲಿಸುವಂತೆಯೂ ವಿ.ವಿಗಳಿಗೆ ಅವರು ಸೂಚಿಸಿದ್ದಾರೆ. </p>.<p>ವರದಿಯ ಪ್ರಕಾರ, ಕುಲಾಧಿಪಾತಿಯ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಂದರ್ಭದಲ್ಲಿ ಕುಲಪತಿಗಳು ಮತ್ತು ವಿ.ವಿಯ ಇತರ ಅಧಿಕಾರಿಗಳ ಪರವಾಗಿ ಕಾನೂನು ವೆಚ್ಚವಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>