<p><strong>ತಿರುವನಂತಪುರ</strong>: ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳಂ ಮುಖ್ಯಮಂತ್ರಿಯಾಗಿ ಸೋಮವಾರ (ಮೇ 18) ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p><p>ಮುಖ್ಯಮಂತ್ರಿ ಆಯ್ಕೆ ಸಂಬಂಧ 10 ದಿನಗಳಿಂದ ನಡೆದ ಹಗ್ಗಜಗ್ಗಾಟಕ್ಕೆ ಇಂದು ತೆರೆ ಬಿದ್ದಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಸತೀಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಇಂದು ಆಯ್ಕೆ ಮಾಡಿದೆ.</p><p>ಎಐಸಿಸಿ ವೀಕ್ಷಕ ದೀಪಾ ದಾಸ್ಮುನ್ಸಿ ಅವರು ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಪ್ರಮಾಣವಚನ ಸಮಾರಂಭಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಹೊರಬಿದ್ದಿದೆ. ತಿರುವನಂತಪುರದಲ್ಲಿರುವ ಸೆಂಟ್ರಲ್ ಸ್ಟೇಡಿಯಂನಲ್ಲಿ ಸೋಮವಾರ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.</p><p>140 ಸದಸ್ಯ ಬಲದ ಕೇರಳಂ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದೇ ಪ್ರಕಟವಾಗಿತ್ತು. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 102 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಹೀಗಿದ್ದರೂ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ಗೆ ಗುರುವಾರದ ವರೆಗೆ ಸಾಧ್ಯವಾಗಿರಲಿಲ್ಲ.</p><p>ಕಳೆದ ಐದು ವರ್ಷಗಳಿಂದ ಹಾಗೂ ಚುನಾವಣೆಯಲ್ಲಿ ಯುಡಿಎಫ್ ಅನ್ನು ಮುನ್ನಡೆಸಿದ್ದ ಸತೀಶನ್ ಅವರೇ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಹಿಂದಿನ ಸರ್ಕಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿದ್ದ ಅವರಿಗೆ, ಮಿತ್ರ ಪಕ್ಷಗಳ ಬೆಂಬಲವೂ ಇದೆ. ಆದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಹಿರಿಯ ನಾಯಕ ರಮೇಶ್ ಚೆನ್ನಿತಲ ಅವರೂ ಪೈಪೋಟಿಗೆ ಇಳಿದಿದ್ದರಿಂದ, ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.</p>.ಕೇರಳಂ ಕುತೂಹಲಕ್ಕೆ ಕೊನೆಗೂ ತೆರೆ; ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ.ಕೇರಳಂ ಸಿಎಂ ಆಗಿ ಆಯ್ಕೆ: ಕಾಂಗ್ರೆಸ್ ಹೈಕಮಾಂಡ್ಗೆ ಧನ್ಯವಾದ ಹೇಳಿದ ಸತೀಶನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳಂ ಮುಖ್ಯಮಂತ್ರಿಯಾಗಿ ಸೋಮವಾರ (ಮೇ 18) ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p><p>ಮುಖ್ಯಮಂತ್ರಿ ಆಯ್ಕೆ ಸಂಬಂಧ 10 ದಿನಗಳಿಂದ ನಡೆದ ಹಗ್ಗಜಗ್ಗಾಟಕ್ಕೆ ಇಂದು ತೆರೆ ಬಿದ್ದಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಸತೀಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಇಂದು ಆಯ್ಕೆ ಮಾಡಿದೆ.</p><p>ಎಐಸಿಸಿ ವೀಕ್ಷಕ ದೀಪಾ ದಾಸ್ಮುನ್ಸಿ ಅವರು ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಪ್ರಮಾಣವಚನ ಸಮಾರಂಭಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಹೊರಬಿದ್ದಿದೆ. ತಿರುವನಂತಪುರದಲ್ಲಿರುವ ಸೆಂಟ್ರಲ್ ಸ್ಟೇಡಿಯಂನಲ್ಲಿ ಸೋಮವಾರ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.</p><p>140 ಸದಸ್ಯ ಬಲದ ಕೇರಳಂ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದೇ ಪ್ರಕಟವಾಗಿತ್ತು. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 102 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಹೀಗಿದ್ದರೂ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ಗೆ ಗುರುವಾರದ ವರೆಗೆ ಸಾಧ್ಯವಾಗಿರಲಿಲ್ಲ.</p><p>ಕಳೆದ ಐದು ವರ್ಷಗಳಿಂದ ಹಾಗೂ ಚುನಾವಣೆಯಲ್ಲಿ ಯುಡಿಎಫ್ ಅನ್ನು ಮುನ್ನಡೆಸಿದ್ದ ಸತೀಶನ್ ಅವರೇ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಹಿಂದಿನ ಸರ್ಕಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿದ್ದ ಅವರಿಗೆ, ಮಿತ್ರ ಪಕ್ಷಗಳ ಬೆಂಬಲವೂ ಇದೆ. ಆದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಹಿರಿಯ ನಾಯಕ ರಮೇಶ್ ಚೆನ್ನಿತಲ ಅವರೂ ಪೈಪೋಟಿಗೆ ಇಳಿದಿದ್ದರಿಂದ, ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.</p>.ಕೇರಳಂ ಕುತೂಹಲಕ್ಕೆ ಕೊನೆಗೂ ತೆರೆ; ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ.ಕೇರಳಂ ಸಿಎಂ ಆಗಿ ಆಯ್ಕೆ: ಕಾಂಗ್ರೆಸ್ ಹೈಕಮಾಂಡ್ಗೆ ಧನ್ಯವಾದ ಹೇಳಿದ ಸತೀಶನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>