<p><strong>ಪಾಲಕ್ಕಾಡ್(ಕೇರಳ):</strong> ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿಷಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಟೀಕಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶನ್, ‘ಈ ವಿವಾದಾತ್ಮಕ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ‘ಹೌದು ಅಥವಾ ಇಲ್ಲ’– ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಋತುಮತಿಯಾದ ಮಹಿಳೆಯರಿಗೆ ದೇಗುಲ ಪ್ರವೇಶಿಸುವುದನ್ನು ಬೆಂಬಲಿಸುವ ತನ್ನ ಹಿಂದಿನ ಪ್ರಮಾಣಪತ್ರವನ್ನು ಸರಿಪಡಿಸುವಂತೆ ಆಗ್ರಹಿಸಿದರು.</p>.<p>‘ಈ ವಿಷಯದಲ್ಲಿ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳದೇ, ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ‘ಸರಿಯಾದ ಸಮಯದಲ್ಲಿ ಸರಿಯಾದ ನಿಲುವು ತೆಗೆದುಕೊಳ್ಳುತ್ತೇವೆ’ ಎಂದಷ್ಟೇ ಹೇಳುತ್ತಿದ್ದಾರೆ. ಅವರು ವಿಧಾನಸಭಾ ಚುನಾವಣೆ ಮುಗಿಯುವುದನ್ನು ಕಾಯುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.</p>.<p>‘ಶಬರಿಮಲೆ ದೇಗಲಕ್ಕೆ ಮಹಿಳೆಯರ ಪ್ರವೇಶವನ್ನು ಸರ್ಕಾರ ಒಪ್ಪುತ್ತದೆಯೇ, ಇಲ್ಲವೇ ಎಂಬುದು ನಮಗೆ ಗೊತ್ತಾಗಬೇಕಿದೆ’ ಎಂದು ಸತೀಶನ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲಕ್ಕಾಡ್(ಕೇರಳ):</strong> ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿಷಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಟೀಕಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶನ್, ‘ಈ ವಿವಾದಾತ್ಮಕ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ‘ಹೌದು ಅಥವಾ ಇಲ್ಲ’– ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಋತುಮತಿಯಾದ ಮಹಿಳೆಯರಿಗೆ ದೇಗುಲ ಪ್ರವೇಶಿಸುವುದನ್ನು ಬೆಂಬಲಿಸುವ ತನ್ನ ಹಿಂದಿನ ಪ್ರಮಾಣಪತ್ರವನ್ನು ಸರಿಪಡಿಸುವಂತೆ ಆಗ್ರಹಿಸಿದರು.</p>.<p>‘ಈ ವಿಷಯದಲ್ಲಿ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳದೇ, ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ‘ಸರಿಯಾದ ಸಮಯದಲ್ಲಿ ಸರಿಯಾದ ನಿಲುವು ತೆಗೆದುಕೊಳ್ಳುತ್ತೇವೆ’ ಎಂದಷ್ಟೇ ಹೇಳುತ್ತಿದ್ದಾರೆ. ಅವರು ವಿಧಾನಸಭಾ ಚುನಾವಣೆ ಮುಗಿಯುವುದನ್ನು ಕಾಯುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.</p>.<p>‘ಶಬರಿಮಲೆ ದೇಗಲಕ್ಕೆ ಮಹಿಳೆಯರ ಪ್ರವೇಶವನ್ನು ಸರ್ಕಾರ ಒಪ್ಪುತ್ತದೆಯೇ, ಇಲ್ಲವೇ ಎಂಬುದು ನಮಗೆ ಗೊತ್ತಾಗಬೇಕಿದೆ’ ಎಂದು ಸತೀಶನ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>