<p><strong>ಡೆಹ್ರಾಡೂನ್:</strong> ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.</p>.<p>ಉತ್ತರಾಖಂಡದ ಇತಿಹಾಸ ಮತ್ತು ಭೂಗೋಳದ ಕುರಿತು ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದಿದ್ದಾರೆ.</p>.<p>ನೂತನ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಪಠ್ಯಕ್ರಮವು ಭಾರತದ ಇತಿಹಾಸ ಮತ್ತು ಪರಂಪರೆಯನ್ನು ಆಧರಿಸಿರಬೇಕು. ವೇದ ಪುರಾಣ ಹಾಗೂ ಗೀತೆಯ ಜೊತೆಗೆ ಸ್ಥಳೀಯ ಭಾಷೆಗಳಿಗೂ ಪ್ರೋತ್ಸಾಹಿಸಬೇಕು.</p>.<p>ನೂತನ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿರುವ ಮೊದಲ ರಾಜ್ಯ ಉತ್ತರಾಖಂಡ. 'ಶೀಘ್ರದಲ್ಲೇ ಹೊಸ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುತ್ತದೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿ ಅಡಿಯಲ್ಲಿನ ವ್ಯವಸ್ಥೆಗೆ ಅನುಮೋದನೆ ಪಡೆಯಲಾಗುತ್ತದೆ' ಎಂದು ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ</strong>–<a href="https://www.prajavani.net/india-news/section-144-imposed-in-uttar-pradesh-gautam-budh-nagar-rise-in-covid-cases-upcoming-festivals-933342.html" itemprop="url">ಗೌತಮ ಬುದ್ಧ ನಗರದಲ್ಲಿ ಸೆಕ್ಷನ್ 144; ಸಾರ್ವಜನಿಕವಾಗಿ ನಮಾಜ್, ಪೂಜೆಗೆ ನಿರ್ಬಂಧ </a></p>.<p>ಉತ್ತರಾಖಂಡ ಹೋರಾಟ ಮತ್ತು ಅಲ್ಲಿನ ಪ್ರಮುಖ ವ್ಯಕ್ತಿಗಳ ಕುರಿತು ಹೊಸ ಪಠ್ಯದಲ್ಲಿ ಅಳವಡಿಸುತ್ತಿರುವುದು ತಿಳಿದು ಬಂದಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.</p>.<p>ಉತ್ತರಾಖಂಡದ ಇತಿಹಾಸ ಮತ್ತು ಭೂಗೋಳದ ಕುರಿತು ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದಿದ್ದಾರೆ.</p>.<p>ನೂತನ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಪಠ್ಯಕ್ರಮವು ಭಾರತದ ಇತಿಹಾಸ ಮತ್ತು ಪರಂಪರೆಯನ್ನು ಆಧರಿಸಿರಬೇಕು. ವೇದ ಪುರಾಣ ಹಾಗೂ ಗೀತೆಯ ಜೊತೆಗೆ ಸ್ಥಳೀಯ ಭಾಷೆಗಳಿಗೂ ಪ್ರೋತ್ಸಾಹಿಸಬೇಕು.</p>.<p>ನೂತನ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿರುವ ಮೊದಲ ರಾಜ್ಯ ಉತ್ತರಾಖಂಡ. 'ಶೀಘ್ರದಲ್ಲೇ ಹೊಸ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುತ್ತದೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿ ಅಡಿಯಲ್ಲಿನ ವ್ಯವಸ್ಥೆಗೆ ಅನುಮೋದನೆ ಪಡೆಯಲಾಗುತ್ತದೆ' ಎಂದು ಶಿಕ್ಷಣ ಸಚಿವ ಧನ ಸಿಂಗ್ ರಾವತ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ</strong>–<a href="https://www.prajavani.net/india-news/section-144-imposed-in-uttar-pradesh-gautam-budh-nagar-rise-in-covid-cases-upcoming-festivals-933342.html" itemprop="url">ಗೌತಮ ಬುದ್ಧ ನಗರದಲ್ಲಿ ಸೆಕ್ಷನ್ 144; ಸಾರ್ವಜನಿಕವಾಗಿ ನಮಾಜ್, ಪೂಜೆಗೆ ನಿರ್ಬಂಧ </a></p>.<p>ಉತ್ತರಾಖಂಡ ಹೋರಾಟ ಮತ್ತು ಅಲ್ಲಿನ ಪ್ರಮುಖ ವ್ಯಕ್ತಿಗಳ ಕುರಿತು ಹೊಸ ಪಠ್ಯದಲ್ಲಿ ಅಳವಡಿಸುತ್ತಿರುವುದು ತಿಳಿದು ಬಂದಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>