<p><strong>ನವದೆಹಲಿ:</strong> ದಂಡಕ್ರಮ ಪ್ರಾಣಾಯಾಮದ ಅಂಗವಾಗಿ, ಶುಕ್ಲ ಯಜುರ್ವೇದದ 2000 ಶ್ಲೋಕಗಳನ್ನು ಯಾವುದೇ ಅಡಚಣೆ ಇಲ್ಲದೆ 50 ದಿನಗಳ ಕಾಲ ಪಠಿಸಿ ಪೂರ್ಣಗೊಳಿಸಿರುವ ಯುವ ವಿದ್ವಾಂಸ ಮಹೇಶ ರೇಖೆ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಎಕ್ಸ್’ ಪೋಸ್ಟ್ ಮೂಲಕ ಮಂಗಳವಾರ ಶ್ಲಾಘಿಸಿದ್ದಾರೆ.</p>.<p>ಹತ್ತೊಂಬತ್ತು ವರ್ಷ ವಯಸ್ಸಿನ ವೇದಮೂರ್ತಿ ದೇವವ್ರತ ಮಹೇಶ ರೇಖೆ ಅವರು ಕಾಶಿಯಲ್ಲಿ ಪಠಿಸಿ, ಪೂರ್ಣಗೊಳಿಸಿರುವ ದಂಡಕ್ರಮ ಪ್ರಾಣಾಯಾಮವು ಜಟಿಲವಾಗಿದ್ದು, ಅದನ್ನು ವೇದಪಾರಾಯಣದ ಕಿರೀಟ ಎಂದೇ ಪರಿಗಣಿಸಲಾಗಿದೆ.</p>.<p>ಸುಮಾರು 200 ವರ್ಷಗಳ ನಂತರ ದಂಡಕ್ರಮವನ್ನು ಅದರ ಶುದ್ಧ ಶಾಸ್ತ್ರೀಯ ರೂಪದಲ್ಲಿಯೇ ಪಾರಾಯಣ ಮಾಡಲಾಗಿದೆ. ಈ ಹಿಂದೆ ಕೇವಲ ಎರಡು ಬಾರಿ ಈ ಸಾಧನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಯುವ ವಿದ್ವಾಂಸ ರೇಖೆ ಅವರು ಮೂರನೆಯವರಾಗಿದ್ದಾರೆ. ಹಾಗಾಗಿ ಈ ಸಾಧನೆ ಅಪರೂಪದ್ದು ಎಂದು ಅವರ ಸಾಧನೆಗೆ ಬೆಂಬಲ ನೀಡಿದ್ದ ಶೃಂಗೇರಿ ಮಠವು ತನ್ನ ‘ಎಕ್ಸ್’ ಖಾತೆಯ ಪೋಸ್ಟ್ನಲ್ಲಿ ಹೇಳಿದೆ.</p>.<p>19 ವರ್ಷದ ವೇದಮೂರ್ತಿಯವರ ಈ ಸಾಧನೆಯನ್ನು ಮುಂಬರುವ ತಲೆಮಾರುಗಳು ಸ್ಮರಿಸುತ್ತವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. </p>.<p>ಶ್ರೀ ವಲ್ಲಭರಾಮ ಸಾಲಿಗ್ರಾಮ ಸಂಗ್ವೇದ ವಿದ್ಯಾಲಯದಲ್ಲಿ ಅಕ್ಟೋಬರ್ 2ರಿಂದ ನವೆಂಬರ್ 30ರ ನಡುವೆ ಆಯೋಜಿಸಲಾಗಿದ್ದ ಪ್ರಾಣಾಯಾಮಕ್ಕೆ ಕಾಶಿಯ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳು ಬೆಂಬಲ ನೀಡಿವೆ ಎಂದು ಶೃಂಗೇರಿ ಮಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಂಡಕ್ರಮ ಪ್ರಾಣಾಯಾಮದ ಅಂಗವಾಗಿ, ಶುಕ್ಲ ಯಜುರ್ವೇದದ 2000 ಶ್ಲೋಕಗಳನ್ನು ಯಾವುದೇ ಅಡಚಣೆ ಇಲ್ಲದೆ 50 ದಿನಗಳ ಕಾಲ ಪಠಿಸಿ ಪೂರ್ಣಗೊಳಿಸಿರುವ ಯುವ ವಿದ್ವಾಂಸ ಮಹೇಶ ರೇಖೆ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಎಕ್ಸ್’ ಪೋಸ್ಟ್ ಮೂಲಕ ಮಂಗಳವಾರ ಶ್ಲಾಘಿಸಿದ್ದಾರೆ.</p>.<p>ಹತ್ತೊಂಬತ್ತು ವರ್ಷ ವಯಸ್ಸಿನ ವೇದಮೂರ್ತಿ ದೇವವ್ರತ ಮಹೇಶ ರೇಖೆ ಅವರು ಕಾಶಿಯಲ್ಲಿ ಪಠಿಸಿ, ಪೂರ್ಣಗೊಳಿಸಿರುವ ದಂಡಕ್ರಮ ಪ್ರಾಣಾಯಾಮವು ಜಟಿಲವಾಗಿದ್ದು, ಅದನ್ನು ವೇದಪಾರಾಯಣದ ಕಿರೀಟ ಎಂದೇ ಪರಿಗಣಿಸಲಾಗಿದೆ.</p>.<p>ಸುಮಾರು 200 ವರ್ಷಗಳ ನಂತರ ದಂಡಕ್ರಮವನ್ನು ಅದರ ಶುದ್ಧ ಶಾಸ್ತ್ರೀಯ ರೂಪದಲ್ಲಿಯೇ ಪಾರಾಯಣ ಮಾಡಲಾಗಿದೆ. ಈ ಹಿಂದೆ ಕೇವಲ ಎರಡು ಬಾರಿ ಈ ಸಾಧನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಯುವ ವಿದ್ವಾಂಸ ರೇಖೆ ಅವರು ಮೂರನೆಯವರಾಗಿದ್ದಾರೆ. ಹಾಗಾಗಿ ಈ ಸಾಧನೆ ಅಪರೂಪದ್ದು ಎಂದು ಅವರ ಸಾಧನೆಗೆ ಬೆಂಬಲ ನೀಡಿದ್ದ ಶೃಂಗೇರಿ ಮಠವು ತನ್ನ ‘ಎಕ್ಸ್’ ಖಾತೆಯ ಪೋಸ್ಟ್ನಲ್ಲಿ ಹೇಳಿದೆ.</p>.<p>19 ವರ್ಷದ ವೇದಮೂರ್ತಿಯವರ ಈ ಸಾಧನೆಯನ್ನು ಮುಂಬರುವ ತಲೆಮಾರುಗಳು ಸ್ಮರಿಸುತ್ತವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. </p>.<p>ಶ್ರೀ ವಲ್ಲಭರಾಮ ಸಾಲಿಗ್ರಾಮ ಸಂಗ್ವೇದ ವಿದ್ಯಾಲಯದಲ್ಲಿ ಅಕ್ಟೋಬರ್ 2ರಿಂದ ನವೆಂಬರ್ 30ರ ನಡುವೆ ಆಯೋಜಿಸಲಾಗಿದ್ದ ಪ್ರಾಣಾಯಾಮಕ್ಕೆ ಕಾಶಿಯ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳು ಬೆಂಬಲ ನೀಡಿವೆ ಎಂದು ಶೃಂಗೇರಿ ಮಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>