ಮುಂಬೈ: ಬಾಂಬೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT-B) ಹಾಸ್ಟೆಲ್ ಕ್ಯಾಂಟೀನ್ನಲ್ಲಿ ಸಸ್ಯಾಹಾರಿಗಳಿಗೆ ಮಾತ್ರ’ ಎಂದು ಫಲಕ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಆಹಾರ ತಾರತಮ್ಯ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
‘ಸಸ್ಯಹಾರಿಗಳು ಮಾತ್ರ ಇಲ್ಲಿ ಕುಳಿತುಕೊಳ್ಳಬಹುದು’ ಎಂದು ಬರೆದಿರುವ ಫಲಕವನ್ನು 12ನೇ ಹಾಸ್ಟೆಲ್ ಕ್ಯಾಂಟೀನ್ನಲ್ಲಿ ಕಳೆದ ವಾರ ಹಾಕಲಾಗಿದ್ದು, ಅದರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
‘ಕ್ಯಾಂಟೀನ್ನಲ್ಲಿ ಪೋಸ್ಟರ್ ಹಾಕಿದವರು ಯಾರು ಎನ್ನುವುದು ತಿಳಿದಿಲ್ಲ. ಆಹಾರ ಪಡೆಯಲು ಯಾರಿಗೂ ಪ್ರತ್ಯೇಕವಾದ ಜಾಗವಿಲ್ಲ ಅಲ್ಲದೆ ಇದರ ಬಗ್ಗೆ ಸಂಸ್ಥೆಗೆ ಯಾವುದೇ ಮಾಹಿತಿ ಇಲ್ಲ’ ಎಂದು ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ವಿದ್ಯಾರ್ಥಿ ಸಮೂಹದ ಪ್ರತಿನಿಧಿ ಘಟನೆಯನ್ನು ಖಂಡಿಸಿ ಪೋಸ್ಟರ್ ಗಳನ್ನು ಹರಿದು ಹಾಕಿದರು.