<p> <strong>ಚೆನ್ನೈ:</strong> ಶೈವ ಹಾಗೂ ವೈಷ್ಣವ ಪಂಥಗಳ ಚಿಹ್ನೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಕೆ. ಪೊನ್ಮುಡಿಯವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಅಲ್ಲದೆ ಏಪ್ರಿಲ್ 15ರಂದು ರಾಜ್ಯದಾದ್ಯಂತ ಪ್ರತಿಭಟನೆ ಮಾಡುವುದಾಗಿ ಹೇಳಿದೆ.</p>.ತಮಿಳುನಾಡು: ಶೈವ–ವೈಷ್ಣವ ಪಂಥದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಪೊನ್ಮುಡಿ ವಜಾ.<p>ಹಿಂದೂ ಚಿಹ್ನೆಗಳ ಬಗ್ಗೆ ಸಚಿವರು ಅಸಭ್ಯ ಪದಗಳನ್ನು ಬಳಸಿದ್ದಾರೆ, ಇದನ್ನು ಯಾವುದೇ ನಾಗರಿಕ ಸಮಾಜವು ಸಹಿಸುವುದಿಲ್ಲ ಎಂದು ವಿಎಚ್ಪಿಯ ತಮಿಳುನಾಡು ರಾಜ್ಯ ಅಧ್ಯಕ್ಷ ಅಂಡಾಳ್ ಪಿ. ಚೊಕ್ಕಲಿಂಗಂ ಹೇಳಿದ್ದಾರೆ.</p><p>ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವರು ಬೋಧಿಸುವ ಜಾತ್ಯತೀತತೆಗೆ ಬದ್ಧರಾಗಿದ್ದರೆ, ಪೊನ್ಮುಡಿ ಅವರನ್ನು ಸಚಿವ ಸ್ಥಾನದಿಂದ ತಕ್ಷಣ ತೆಗೆದುಹಾಕಬೇಕು ಎಂದು ಚೊಕ್ಕಲಿಂಗಂ ಆಗ್ರಹಿಸಿದ್ದಾರೆ.</p>.ಶೈವ-ವೈಷ್ಣವ ಪಂಥದ ಕುರಿತು ಸಚಿವ ಪೊನ್ಮುಡಿ ಆಕ್ಷೇಪಾರ್ಹ ಹೇಳಿಕೆ: ಕನಿಮೋಳಿ ಖಂಡನೆ.<p>ಪೊನ್ಮುಡಿ ಅವರನ್ನು ಸಚಿವರಾಗಿ ಮುಂದುವರಿಯಲು ಬಿಡಬಾರದು. ಅವರನ್ನು ಡಿಎಂಕೆಯಲ್ಲಿ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದ್ದು ಕೇವಲ ಕಣ್ಣೊರೆಸುವ ತಂತ್ರ ಎಂದು ಚೊಕ್ಕಲಿಂಗಂ ಹೇಳಿದ್ದಾರೆ.</p><p> ಪೊನ್ಮುಡಿ ಅವರ ಭಾಷಣವು ಸಿಎಂ ಕಚೇರಿ ಮತ್ತು ಅವರ ಗೌರವದ ಮೇಲೆ ನೇರ ವೈಯಕ್ತಿಕ ದಾಳಿಯಾಗಿದೆ ಎಂದು ವಿಎಚ್ಪಿ ನಾಯಕ ಹೇಳಿದ್ದಾರೆ.</p><p>‘ತಮಿಳುನಾಡು ವಿಎಚ್ಪಿ ಘಟಕ ಈ ವಿಷಯದ ಬಗ್ಗೆ ರಾಷ್ಟ್ರದಾದ್ಯಂತ ಪ್ರತಿಭಟಿಸಲಿದೆ. ಡಿಎಂಕೆಯ ಹುಸಿ ಜಾತ್ಯತೀತತೆಯನ್ನು ಮತ್ತು ಈ ಡಿಎಂಕೆ ಸರ್ಕಾರದ ಮುಂದುವರಿಕೆ ಹಿಂದೂಗಳಿಗೆ ಹೇಗೆ ಅವಮಾನವಾಗಿದೆ ಎಂಬುದನ್ನು ಜನರಿಗೆ ಹೇಳಲಿದ್ದೇವೆ’ ಎಂದು ಚೊಕ್ಕಲಿಂಗಂ ಹೇಳಿದ್ದಾರೆ.</p> .ಆದಾಯ ಮೀರಿ ಆಸ್ತಿ ಗಳಿಕೆ: 3 ವರ್ಷ ಶಿಕ್ಷೆಗೆ ಗುರಿಯಾಗಿರುವ DMKಯ ಪೊನ್ಮುಡಿ ಯಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಚೆನ್ನೈ:</strong> ಶೈವ ಹಾಗೂ ವೈಷ್ಣವ ಪಂಥಗಳ ಚಿಹ್ನೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಕೆ. ಪೊನ್ಮುಡಿಯವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಅಲ್ಲದೆ ಏಪ್ರಿಲ್ 15ರಂದು ರಾಜ್ಯದಾದ್ಯಂತ ಪ್ರತಿಭಟನೆ ಮಾಡುವುದಾಗಿ ಹೇಳಿದೆ.</p>.ತಮಿಳುನಾಡು: ಶೈವ–ವೈಷ್ಣವ ಪಂಥದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಪೊನ್ಮುಡಿ ವಜಾ.<p>ಹಿಂದೂ ಚಿಹ್ನೆಗಳ ಬಗ್ಗೆ ಸಚಿವರು ಅಸಭ್ಯ ಪದಗಳನ್ನು ಬಳಸಿದ್ದಾರೆ, ಇದನ್ನು ಯಾವುದೇ ನಾಗರಿಕ ಸಮಾಜವು ಸಹಿಸುವುದಿಲ್ಲ ಎಂದು ವಿಎಚ್ಪಿಯ ತಮಿಳುನಾಡು ರಾಜ್ಯ ಅಧ್ಯಕ್ಷ ಅಂಡಾಳ್ ಪಿ. ಚೊಕ್ಕಲಿಂಗಂ ಹೇಳಿದ್ದಾರೆ.</p><p>ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವರು ಬೋಧಿಸುವ ಜಾತ್ಯತೀತತೆಗೆ ಬದ್ಧರಾಗಿದ್ದರೆ, ಪೊನ್ಮುಡಿ ಅವರನ್ನು ಸಚಿವ ಸ್ಥಾನದಿಂದ ತಕ್ಷಣ ತೆಗೆದುಹಾಕಬೇಕು ಎಂದು ಚೊಕ್ಕಲಿಂಗಂ ಆಗ್ರಹಿಸಿದ್ದಾರೆ.</p>.ಶೈವ-ವೈಷ್ಣವ ಪಂಥದ ಕುರಿತು ಸಚಿವ ಪೊನ್ಮುಡಿ ಆಕ್ಷೇಪಾರ್ಹ ಹೇಳಿಕೆ: ಕನಿಮೋಳಿ ಖಂಡನೆ.<p>ಪೊನ್ಮುಡಿ ಅವರನ್ನು ಸಚಿವರಾಗಿ ಮುಂದುವರಿಯಲು ಬಿಡಬಾರದು. ಅವರನ್ನು ಡಿಎಂಕೆಯಲ್ಲಿ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದ್ದು ಕೇವಲ ಕಣ್ಣೊರೆಸುವ ತಂತ್ರ ಎಂದು ಚೊಕ್ಕಲಿಂಗಂ ಹೇಳಿದ್ದಾರೆ.</p><p> ಪೊನ್ಮುಡಿ ಅವರ ಭಾಷಣವು ಸಿಎಂ ಕಚೇರಿ ಮತ್ತು ಅವರ ಗೌರವದ ಮೇಲೆ ನೇರ ವೈಯಕ್ತಿಕ ದಾಳಿಯಾಗಿದೆ ಎಂದು ವಿಎಚ್ಪಿ ನಾಯಕ ಹೇಳಿದ್ದಾರೆ.</p><p>‘ತಮಿಳುನಾಡು ವಿಎಚ್ಪಿ ಘಟಕ ಈ ವಿಷಯದ ಬಗ್ಗೆ ರಾಷ್ಟ್ರದಾದ್ಯಂತ ಪ್ರತಿಭಟಿಸಲಿದೆ. ಡಿಎಂಕೆಯ ಹುಸಿ ಜಾತ್ಯತೀತತೆಯನ್ನು ಮತ್ತು ಈ ಡಿಎಂಕೆ ಸರ್ಕಾರದ ಮುಂದುವರಿಕೆ ಹಿಂದೂಗಳಿಗೆ ಹೇಗೆ ಅವಮಾನವಾಗಿದೆ ಎಂಬುದನ್ನು ಜನರಿಗೆ ಹೇಳಲಿದ್ದೇವೆ’ ಎಂದು ಚೊಕ್ಕಲಿಂಗಂ ಹೇಳಿದ್ದಾರೆ.</p> .ಆದಾಯ ಮೀರಿ ಆಸ್ತಿ ಗಳಿಕೆ: 3 ವರ್ಷ ಶಿಕ್ಷೆಗೆ ಗುರಿಯಾಗಿರುವ DMKಯ ಪೊನ್ಮುಡಿ ಯಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>