<p><strong>ನವದೆಹಲಿ:</strong> ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ನಾಯಕ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಪಂಜಾಬ್ನ ಹಲವೆಡೆ ಶೋಧ ನಡೆಸಿದೆ.</p><p>ವಿಕಾಸ್ ಪ್ರಭಾಕರ್ ಹತ್ಯೆ ಪ್ರಕರಣ ಸಂಬಂಧ ಶೋಧ ನಡೆಸಲಾಗುತ್ತಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.</p><p>ಏಪ್ರಿಲ್ 14ರಂದು ಪಂಜಾಬ್ನ ರೂಪನಗರ ಜಿಲ್ಲೆಯ ನಂಗಾಲ್ನ ವಿಶ್ವ ಹಿಂದೂ ಪರಿಷತ್ ಘಟಕದ ಅಧ್ಯಕ್ಷ ವಿಕಾಸ್ ಅವರನ್ನು ಹಂತಕರು ಗುಂಡಿಕ್ಕಿ ಕೊಲೆ ಮಾಡಿದ್ದರು. ಮೇ 9ರಂದು ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು.</p><p>ವಿಕಾಸ್ ಪ್ರಭಾಕರ್ ಅವರ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಪ್ರಮುಖ ಆರೋಪಿ 22 ವರ್ಷದ ಧರ್ಮೀಂದರ್ ಕುಮಾರ್ ಅಲಿಯಾಸ್ ಕುನಾಲ್ನನ್ನು ಎನ್ಐಎ ಮತ್ತು ದೆಹಲಿ ಪೊಲೀಸರು ಈಚೆಗೆ ಬಂಧಿಸಿದ್ದರು.</p><p>‘ವಿದೇಶಿ ಮೂಲದ ಖಾಲಿಸ್ತಾನಿ ಭಯೋತ್ಪಾದಕ ಹರ್ವೀಂದರ್ ಕುಮಾರ್ ಅಲಿಯಾಸ್ ಸೋನು ಸೂಚನೆಯಂತೆ ಧರ್ಮೀಂದರ್ ಮಧ್ಯಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ತರಿಸಿಕೊಂಡು ಹಂತಕರಿಗೆ ತಲುಪಿಸಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಗುಂಡಿನ ದಾಳಿ ನಡೆಸಿದ ಇಬ್ಬರನ್ನು ಏಪ್ರಿಲ್ 16ರಂದು ಬಂಧಿಸಲಾಗಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ ಸದಸ್ಯರು ಹರ್ಜೀತ್ ಸಿಂಗ್ ಅಲಿಯಾಸ್ ಲಡ್ಡಿ ಮತ್ತು ಕುಲ್ವೀರ್ ಸಿಂಗ್ ಅಲಿಯಾಸ್ ಸಿಧು ತಲೆಮರೆಸಿಕೊಂಡಿದ್ದಾರೆ. ಅವರಿಬ್ಬರನ್ನು ಹುಡುಕಿಕೊಟ್ಟವರಿಗೆ ತಲಾ ₹10 ಲಕ್ಷ ಬಹುಮಾನ ಘೋಷಣೆಯಾಗಿದೆ.</p><p>‘ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಧರ್ಮೀಂದರ್ ಒಪ್ಪಿಕೊಂಡಿದ್ದಾನೆ. ಆತ ಈ ಹಿಂದೆಯೂ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಎರಡು ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ನಾಯಕ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಪಂಜಾಬ್ನ ಹಲವೆಡೆ ಶೋಧ ನಡೆಸಿದೆ.</p><p>ವಿಕಾಸ್ ಪ್ರಭಾಕರ್ ಹತ್ಯೆ ಪ್ರಕರಣ ಸಂಬಂಧ ಶೋಧ ನಡೆಸಲಾಗುತ್ತಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.</p><p>ಏಪ್ರಿಲ್ 14ರಂದು ಪಂಜಾಬ್ನ ರೂಪನಗರ ಜಿಲ್ಲೆಯ ನಂಗಾಲ್ನ ವಿಶ್ವ ಹಿಂದೂ ಪರಿಷತ್ ಘಟಕದ ಅಧ್ಯಕ್ಷ ವಿಕಾಸ್ ಅವರನ್ನು ಹಂತಕರು ಗುಂಡಿಕ್ಕಿ ಕೊಲೆ ಮಾಡಿದ್ದರು. ಮೇ 9ರಂದು ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು.</p><p>ವಿಕಾಸ್ ಪ್ರಭಾಕರ್ ಅವರ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಪ್ರಮುಖ ಆರೋಪಿ 22 ವರ್ಷದ ಧರ್ಮೀಂದರ್ ಕುಮಾರ್ ಅಲಿಯಾಸ್ ಕುನಾಲ್ನನ್ನು ಎನ್ಐಎ ಮತ್ತು ದೆಹಲಿ ಪೊಲೀಸರು ಈಚೆಗೆ ಬಂಧಿಸಿದ್ದರು.</p><p>‘ವಿದೇಶಿ ಮೂಲದ ಖಾಲಿಸ್ತಾನಿ ಭಯೋತ್ಪಾದಕ ಹರ್ವೀಂದರ್ ಕುಮಾರ್ ಅಲಿಯಾಸ್ ಸೋನು ಸೂಚನೆಯಂತೆ ಧರ್ಮೀಂದರ್ ಮಧ್ಯಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ತರಿಸಿಕೊಂಡು ಹಂತಕರಿಗೆ ತಲುಪಿಸಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಗುಂಡಿನ ದಾಳಿ ನಡೆಸಿದ ಇಬ್ಬರನ್ನು ಏಪ್ರಿಲ್ 16ರಂದು ಬಂಧಿಸಲಾಗಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ ಸದಸ್ಯರು ಹರ್ಜೀತ್ ಸಿಂಗ್ ಅಲಿಯಾಸ್ ಲಡ್ಡಿ ಮತ್ತು ಕುಲ್ವೀರ್ ಸಿಂಗ್ ಅಲಿಯಾಸ್ ಸಿಧು ತಲೆಮರೆಸಿಕೊಂಡಿದ್ದಾರೆ. ಅವರಿಬ್ಬರನ್ನು ಹುಡುಕಿಕೊಟ್ಟವರಿಗೆ ತಲಾ ₹10 ಲಕ್ಷ ಬಹುಮಾನ ಘೋಷಣೆಯಾಗಿದೆ.</p><p>‘ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಧರ್ಮೀಂದರ್ ಒಪ್ಪಿಕೊಂಡಿದ್ದಾನೆ. ಆತ ಈ ಹಿಂದೆಯೂ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಎರಡು ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>