<p><strong>ಲಖನೌ</strong>: ವಿಶ್ವ ಹಿಂದೂ ಪರಿಷತ್ತು (ವಿಎಚ್ಪಿ) ಭಾನುವಾರ ಇಲ್ಲಿ ಆಯೋಜಿಸಿದ್ದ ಧರ್ಮ ಸಂಸತ್ತಿನಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ‘ಲವ್ ಜಿಹಾದ್’ ತಡೆಯುವ ಉದ್ದೇಶದಿಂದ ‘ಸನಾತನಿ ಸೇನಾ’ ರೂಪಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ, ಭಾರತವನ್ನು ‘ಹಿಂದೂ ರಾಷ್ಟ್ರ’ವೆಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ‘ಸನಾತನ ಕವಚ’ ಹೆಸರಿನಲ್ಲಿ ಕಚೇರಿಗಳನ್ನು ಆರಂಭಿಸಲು ವಿಎಚ್ಪಿ ತೀರ್ಮಾನಿಸಿದೆ. ಈ ಕಚೇರಿಗಳನ್ನು ತೆರೆಯುತ್ತಿರುವ ಉದ್ದೇಶ, ಹಿಂದೂಗಳಿಗೆ ಮತ್ತು ದೇವಸ್ಥಾನಗಳಿಗೆ ‘ರಕ್ಷಣೆ ಒದಗಿಸುವುದು’ ಎಂದು ಅದು ಹೇಳಿದೆ.</p>.<p>ಹಿಂದೂಗಳು, ಸನಾತನ ಧರ್ಮ ಮತ್ತು ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಏಳು ನಿರ್ಣಯಗಳನ್ನು ಧರ್ಮ ಸಂಸತ್ತಿನಲ್ಲಿ ಕೈಗೊಳ್ಳಲಾಗಿದೆ ಎಂದು ಅಯೋಧ್ಯೆಯ ಹನುಮಗಢಿ ದೇವಸ್ಥಾನದ ಮಹಂತ ರಾಜು ದಾಸ್ ತಿಳಿಸಿದರು.</p>.<p>ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ಈಚೆಗೆ ನಡೆದ ಹಿಂಸಾಚಾರವನ್ನು ಖಂಡಿಸಿ ಜೂನ್ನಿಂದ ದೇಶದಾದ್ಯಂತ ಸನಾತನ ಯಾತ್ರೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಯಾತ್ರೆಯು ಮುರ್ಶಿದಾಬಾದ್ನಿಂದಲೇ ಶುರುವಾಗಲಿದೆ.</p>.<p>ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್ ಕೂಡ ಧರ್ಮ ಸಂಸತ್ತಿನಲ್ಲಿ ಭಾಗಿಯಾಗಿದ್ದರು. ಕೆಲವು ತಿಂಗಳ ಹಿಂದೆ ಮಹಾ ಕುಂಭಮೇಳ ಆಯೋಜನೆ ಆಗಿದ್ದ ಸಂದರ್ಭದಲ್ಲಿಯೂ ಧರ್ಮ ಸಂಸತ್ ನಡೆದಿತ್ತು. ಆಗಲೂ ‘ಹಿಂದೂ ರಾಷ್ಟ್ರ’ ಕುರಿತ ಬೇಡಿಕೆಯನ್ನು ಮಂಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ವಿಶ್ವ ಹಿಂದೂ ಪರಿಷತ್ತು (ವಿಎಚ್ಪಿ) ಭಾನುವಾರ ಇಲ್ಲಿ ಆಯೋಜಿಸಿದ್ದ ಧರ್ಮ ಸಂಸತ್ತಿನಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ‘ಲವ್ ಜಿಹಾದ್’ ತಡೆಯುವ ಉದ್ದೇಶದಿಂದ ‘ಸನಾತನಿ ಸೇನಾ’ ರೂಪಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ, ಭಾರತವನ್ನು ‘ಹಿಂದೂ ರಾಷ್ಟ್ರ’ವೆಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ‘ಸನಾತನ ಕವಚ’ ಹೆಸರಿನಲ್ಲಿ ಕಚೇರಿಗಳನ್ನು ಆರಂಭಿಸಲು ವಿಎಚ್ಪಿ ತೀರ್ಮಾನಿಸಿದೆ. ಈ ಕಚೇರಿಗಳನ್ನು ತೆರೆಯುತ್ತಿರುವ ಉದ್ದೇಶ, ಹಿಂದೂಗಳಿಗೆ ಮತ್ತು ದೇವಸ್ಥಾನಗಳಿಗೆ ‘ರಕ್ಷಣೆ ಒದಗಿಸುವುದು’ ಎಂದು ಅದು ಹೇಳಿದೆ.</p>.<p>ಹಿಂದೂಗಳು, ಸನಾತನ ಧರ್ಮ ಮತ್ತು ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಏಳು ನಿರ್ಣಯಗಳನ್ನು ಧರ್ಮ ಸಂಸತ್ತಿನಲ್ಲಿ ಕೈಗೊಳ್ಳಲಾಗಿದೆ ಎಂದು ಅಯೋಧ್ಯೆಯ ಹನುಮಗಢಿ ದೇವಸ್ಥಾನದ ಮಹಂತ ರಾಜು ದಾಸ್ ತಿಳಿಸಿದರು.</p>.<p>ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ಈಚೆಗೆ ನಡೆದ ಹಿಂಸಾಚಾರವನ್ನು ಖಂಡಿಸಿ ಜೂನ್ನಿಂದ ದೇಶದಾದ್ಯಂತ ಸನಾತನ ಯಾತ್ರೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಯಾತ್ರೆಯು ಮುರ್ಶಿದಾಬಾದ್ನಿಂದಲೇ ಶುರುವಾಗಲಿದೆ.</p>.<p>ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್ ಕೂಡ ಧರ್ಮ ಸಂಸತ್ತಿನಲ್ಲಿ ಭಾಗಿಯಾಗಿದ್ದರು. ಕೆಲವು ತಿಂಗಳ ಹಿಂದೆ ಮಹಾ ಕುಂಭಮೇಳ ಆಯೋಜನೆ ಆಗಿದ್ದ ಸಂದರ್ಭದಲ್ಲಿಯೂ ಧರ್ಮ ಸಂಸತ್ ನಡೆದಿತ್ತು. ಆಗಲೂ ‘ಹಿಂದೂ ರಾಷ್ಟ್ರ’ ಕುರಿತ ಬೇಡಿಕೆಯನ್ನು ಮಂಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>